ಬೆಳ್ತಂಗಡಿ : ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿ ವಿರಾಜಮಾನರಾಗಿರುವ ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿಯ ಪ್ರತಿಷ್ಠಾ ಮಹೋತ್ಸವದ ನಲ್ವತ್ತನೆ ವರ್ಧಂತ್ಯುತ್ಸವ ಕಾರ್ಯಕ್ರಮಗಳು ಫೆಬ್ರವರಿ 1 ಮತ್ತು 2 ರಂದು ನಡೆಯಲಿವೆ.
ಫೆ. 1ರಂದು ಮಂಗಳವಾರ ತೋರಣ ಮುಹೂರ್ತ, ವಿಮಾನ ಶುದ್ಧಿ, ನಾಂದಿ ಮಂಗಲ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆಯಲಿವೆ. ಫೆ. 2ರಂದು ಬುಧವಾರ ಬೆಳಗ್ಗೆ ಗಂಟೆ 8 ರಿಂದ ಭವ್ಯ ಅಗ್ರೋದಕ ಮೆರವಣಿಗೆ, 216 ಕಲಶಗಳಿಂದ ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿಗೆ ಪಾದಾಭಿಷೇಕ ನಡೆಯಲಿದೆ.
ಕಾರ್ಕಳ ಜೈನ ಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಮಂಗಲ ಪ್ರವಚನ ನೀಡುವರು.