News Karnataka Kannada
Monday, April 29 2024
ಮಂಗಳೂರು

ಧರ್ಮಸ್ಥಳದ ಲಕ್ಷದೀಪೋತ್ಸವ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದಿಂದ ಪಾದಯಾತ್ರೆಗೆ ಚಾಲನೆ

Lakshadeepothsava
Photo Credit :

ಬೆಳ್ತಂಗಡಿ : ಶ್ರೀಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಅಂಗವಾಗಿ ಶ್ರೀ ಮಂಜುನಾಥೇಶ್ವರ ಪಾದಯಾತ್ರಾ ಸಮಿತಿಯ ನೇತೃತ್ವದಲ್ಲಿ ನಡೆಯುವ ಸಂಭ್ರಮದ ಪಾದಯಾತ್ರೆಗೆ ಉಜಿರೆ ಶ್ರೀ ಜನಾರ್ದನ ದೇವಸ್ಥಾನದಿಂದ ಸೋಮವಾರ ಸಂಜೆ ಚಾಲನೆ ನೀಡಲಾಯಿತು.

9 ನೇ ವರ್ಷದ ಪಾದಯಾತ್ರೆಯನ್ನು ಉಜಿರೆಯ ಶ್ರೀ ಜನಾರ್ದನ ದೇವಸ್ಥಾನದ ಶರತ್ ಕೃಷ್ಣ ಪಡುವೆಟ್ನಾಯ ಉದ್ಘಾಟಿಸಿದರು.
ಶ್ರೀ ಧಾಮ ಮಾಣಿಲದ ಶ್ರೀ ಮೋಹನದಾಸ ಸ್ವಾಮೀಜಿ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯರಾದ ಕೆ.ಹರೀಶ್ ಕುಮಾರ್, ಕೆ.ಪ್ರತಾಪಸಿಂಹ ನಾಯಕ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ರಾಜ್ಯಾಧ್ಯಕ್ಷ ರಾಮಸ್ವಾಮಿ, ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್.ಎಚ್. ಮಂಜುನಾಥ್, ಸಿರಿ ಸಂಸ್ಥೆಯ ಆಡಳಿತ ನಿರ್ದೇಶಕ ಕೆ.ಎನ್.ಜನಾರ್ದನ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್, ಜನಜಾಗೃತಿ ವೇದಿಕೆ ತಾಲೂಕು ಅಧ್ಯಕ್ಷೆ ಶಾರದಾ ರೈ, ನಿಕಟ ಪೂರ್ವ ಅಧ್ಯಕ್ಷರುಗಳಾದ ವೆಂಕಟ್ರಾಯ ಅಡೂರ್, ಪಿ.ಕೆ.ರಾಜು ಪೂಜಾರಿ, ಬೆಳಾಲು ತಿಮ್ಮಪ್ಪ ಗೌಡ, ಕಿಶೋರ್ ಹೆಗ್ಡೆ ಕರಂಬಾರ್, ಸಿಯೋನ್ ಆಶ್ರಮದ ಆಡಳಿತ ಟ್ರಸ್ಟಿ ಯು.ಸಿ.ಪೌಲೋಸ್, ಜನ ಯೋಜನೆಯ ಪ್ರಾದೇಶಿಕ ನಿರ್ದೇಶಕರಾದ ಮಮತಾ ರಾವ್, ವಿವೇಕ್ ವಿ.ಪಾಯಸ್, ಜಿ.ಪಂ. ಮಾಜಿ ಸದಸ್ಯರಾದ ಮಮತಾ ಶೆಟ್ಟಿ ಮತ್ತು ರಾಜಶೇಖರ ಅಜ್ರಿ, ಉದ್ಯಮಿಗಳಾದ ರಾಜೇಶ್ ಪೈ, ಮೋಹನ್ ಕುಮಾರ್ ಉಜಿರೆ, ವಸಂತ ಮಜಲು, ಪುಷ್ಪರಾಜ್ ಹೆಗ್ಡೆ, ಯೋಗೀಶ್ ಕುಮಾರ್ ನಡಕರ, ಲಕ್ಷ್ಮಣ ಸಪಲ್ಯ ಮತ್ತಿತರರು ಉಪಸ್ಥಿತರಿದ್ದರು.

ಬೆಳ್ತಂಗಡಿ ತಾಲೂಕು ಮಾತ್ರವಲ್ಲದೆ ಅನ್ಯ ತಾಲೂಕುಗಳಿಂದ ವಿವಿಧ ವಾಹನಗಳಲ್ಲಿ ಉಜಿರೆಗೆ ಆಗಮಿಸಿ ಪಾದಯಾತ್ರೆಯಲ್ಲಿ ಪಾಲ್ಗೊಂಡರು. ಕಾರ್ತಿಕ ಸೋಮವಾರವೂ ಆಗಿದ್ದರಿಂದ ಭಕ್ತಬಂಧುಗಳ ಸಂಖ್ಯೆ ಕಳೆದ ವರ್ಷಕ್ಕಿಂತ ದುಪ್ಪಟ್ಟಾಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು