News Karnataka Kannada
Monday, April 29 2024
ಮಂಗಳೂರು

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

51st year of free mass marriage in Dharmasthala
Photo Credit :

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂಧರ್ಭದಲ್ಲಿ ಧರ್ಮಸ್ಥಳ ಹೇಮಾವತಿ ವೀ. ಹೆಗ್ಗಡೆಯವರ ಮಹಿಳಾಪರ ನಿಲುವುಗಳು ವಿಚಾರಗೋಷ್ಠಿ ಮತ್ತು ಅವರ ಗೆಳತಿ ಹಾಗೂ ಮಗಳಿಗೊಂದು ಪತ್ರ ಕೃತಿಗಳ ಲೋಕಾರ್ಪಣೆ ಇಂದು ಪೂರ್ವಾಹ್ನ ೯-೩೦ ರಿಂದ ೧-೧೫ರವರೆಗೆ ನಡೆಯಲಿದೆ.

ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಎರಡು ವಿಚಾರಗೋಷ್ಠಿಗಳನ್ನು ಆಯೋಜಿಸಲಾಗಿದೆ. ಮೊದಲ ಗೋಷ್ಠಿಯಲ್ಲಿ ಕುಟುಂಬ ನಿರ್ವಹಣೆಯಲ್ಲಿ ಮಹಿಳೆಯರ ಪಾತ್ರ- ಹೇಮಾವತಿ ವೀ.ಹೆಗ್ಗಡೆಯವರ ನಿಲುವುಗಳು ಎಂಬ ಬಗ್ಗೆ ಶಿವಮೊಗ್ಗ ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥೆ                        ಡಾ| ಶುಭಾ ಮರವಂತೆ, ಸಾಹಿತಿ ಹಂಪನಾ, ಕನ್ಯಾಕುಮಾರಿ ಯುವಕ ಮಂಡಲ ಕಾರ್ಯಕರ್ತೆ ಭವಾನಿ ವಿ. ರಾವ್ ಅವರು ವಿಚಾರ ಮಂಡಿಸಲಿದ್ದಾರೆ.

ಬಳಿಕ ಹೇಮಾವತೀ ವೀ. ಹೆಗ್ಗಡೆ ಅವರ ಪರಿಕಲ್ಪನೆ ಮತ್ತು ಮಾರ್ಗದರ್ಶನದಲ್ಲಿ ರಂಗಶಿವ ಕಲಾ ಬಳಗ ಧರ್ಮಸ್ಥಳ ಇವರು ಪುಕ್ಕಟೆ ಸಲಹೆ ಎಂಬ ನಾಟಕ ಪ್ರಸ್ತುತ ಪಡಿಸಲಿದ್ದಾರೆ.

ನಂತರ ನಡೆಯುವ ಎರಡನೇ ಗೋಷ್ಠಿಯಲ್ಲಿ ಉಜಿರೆ ಎಸ್.ಡಿ.ಎಂ.ಕಾಲೇಜಿನ ರಾಜ್ಯಶಾಸ್ತç ವಿಭಾಗ ಮುಖ್ಯಸ್ಥೆ ಡಾ| ಶಲೀಪ್ ಎ.ಪಿ., ಶ್ರೀ ಕ್ಷೇ. ಧ.ಗ್ರಾ.ಯೋ. ಶಿವಮೊಗ್ಗ ಇದರ ನಿರ್ದೇಶಕಿ ಗೀತಾ, ಚಿತ್ರದುರ್ಗ ಮಾರಘಟ್ಟ ವಿನಾಯಕ ಸ್ವಸಹಾಯ ಸಂಘದ ಸದಸ್ಯೆ ದೀಪಿಕಾ ಬಾಬು ಇವರುಗಳು ಮಹಿಳಾ ಸಬಲೀಕರಣ- ಹೇಮಾವತಿ ವೀ. ಹೆಗ್ಗಡೆಯವರ ನಿಲುವುಗಳು ಎಂಬ ವಿಚಾರದ ಬಗ್ಗೆ ವಿವರಿಸಲಿದ್ದಾರೆ.

ಸಮಾರೋಪ ಸಮಾರಂಭದಲ್ಲಿ ಪತ್ರಕರ್ತೆ ಡಾ| ಸಂಧ್ಯಾ ಎಸ್.ಪೈ ಕೃತಿಗಳ ಬಿಡುಗಡೆ ಮಾಡಲಿದ್ದಾರೆ. ಧರ್ಮಾಧಿಕಾರಿ                   ಡಾ| ಡಿ. ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಲಿದ್ದಾರೆ. ಹೇಮಾವತಿ ಹೆಗ್ಗಡೆಯವರು ತಮ್ಮ ಕೃತಿಗಳ ಕುರಿತು ಮಾತನಾಡಲಿದ್ದಾರೆ. ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ| ಎಲ್.ಎಚ್. ಮಂಜುನಾಥ್ ಉಪಸ್ಥಿತರಿರಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು