ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಮುಳಿಕ್ಕಾರು ಕೋಲ್ಪೆ ಎಂಬಲ್ಲಿ ವಾಸ್ತವ್ಯವಿರುವ ಅಟೋ ಚಾಲಕ ಸುಧಾಕರ ಕೋಟ್ಯಾನ್ ಎಂಬವರು ಮನೆ ಸಮೀಪವಿರುವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ನಡೆದಿದೆ.
ತಮ್ಮ ಸ್ವಂತ ಆಟೋ ರಿಕ್ಷಾದಲ್ಲಿ ಚಾಲಕರಾಗಿ ದುಡಿಯುತ್ತಿದ್ದ ಸುಧಾಕರ ಕೋಟ್ಯಾನ್ ರವರು ತಮ್ಮ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಮುಳಿಕ್ಕಾರು ರಸ್ತೆ ಬಳಿಯ ಕೋಲ್ಪೆ ಎಂಬಲ್ಲಿ ವಾಸವಾಗಿದ್ದರು. ಇಂದು ಬೆಳಿಗ್ಗೆ ತಮ್ಮ ಪತ್ನಿಯನ್ನು ಕೆಲಸದ ಸ್ಥಳಕ್ಕೆ ತಮ್ಮ ರಿಕ್ಷಾದಲ್ಲಿ ಬಿಟ್ಟುಬಂದಿದ್ದು, ಬಳಿಕ ಮನೆಯ ಸಮೀಪವಿರುವ ಮರಕ್ಕೆ ನೈಲಾನ್ ಹಗ್ಗವನ್ನು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಯಾವ ಕಾರಣಕ್ಕಾಗಿ ಈ ಕೃತ್ಯವೆಸಗಿದ್ದಾರೆ ಎಂಬುವುದು ತನಿಖೆಯಿಂದ ಇನ್ನಷ್ಟೇ ತಿಳಿದುಬರಬೇಕಿದೆ.