ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಪಂಚದಶವರ್ಷ ಸಂಭ್ರಮದ ಅಂಗವಾಗಿ ಇಂದು ಧರ್ಮಸ್ಥಳ ಸನಿಹದ ಶಾಂತಿವನ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಪ್ರಕೃತಿಯ ಮಡಿಲಲ್ಲಿ ಎಂಬ ವಿಶೇಷ ಶಿಬಿರ ನಡೆಯಲಿದೆ.
ಪತ್ರಕರ್ತರಿಗೆ ಆರೋಗ್ಯ ಜಾಗೃತಿಯ ಉದ್ದೇಶದಿಂದ ಹಮ್ಮಿಕೊಂಡಿರುವ ಕಾರ್ಯಕ್ರಮವನ್ನು ಧರ್ಮಾಧಿಕಾರಿ ಡಾlವೀರೇಂದ್ರ ಹೆಗ್ಗಡೆ ಉದ್ಘಾಟಿಸಲಿದ್ದಾರೆ.
ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಧನಕೀರ್ತಿ ಆರಿಗ ವಹಿಸಲಿದ್ದಾರೆ. ದ.ಕ.ಜಿ.ಕಾ.ಪ.ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಉಜಿರೆ ಸಿ.ಎನ್.ವೈ.ಎಸ್. ನ ಪ್ರಾಚಾರ್ಯ ಡಾlಪ್ರಶಾಂತ ಶೆಟ್ಟಿ, ಶಾಂತಿವನ ಟ್ರಸ್ಟ್ ಕಾರ್ಯದರ್ಶಿ ಸೀತಾರಾಮ ತೋಳ್ಪಡಿತ್ತಾಯ, ಡಾ. ಐ.ಶಶಿಕಾಂತ ಜೈನ್ ಉಪಸ್ಥಿತರಿರಲಿದ್ದಾರೆ ಎಂದು ಸಂಘದ ಕಾರ್ಯದರ್ಶಿ ಚೈತ್ರೇಶ್ ಇಳಂತಿಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿಶೇಷ ಕಾರ್ಯಕ್ರಮವು ಮುಂಜಾನೆಯಿಂದ ಸಂಜೆಯವರೆಗೆ ವಿವಿಧ ಮಾಹಿತಿ, ಚಿಕಿತ್ಸೆಗಳೊಂದಿಗೆ ನಡೆಯಲಿದೆ.