News Karnataka Kannada
Saturday, May 04 2024
ಮಂಗಳೂರು

ಧರ್ಮಸ್ಥಳ: ಶಾಂತಿವನ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಪ್ರಕೃತಿಯ ಮಡಿಲಲ್ಲಿ ವಿಶೇಷ ಶಿಬಿರ

Local News
Photo Credit :

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಪಂಚದಶವರ್ಷ ಸಂಭ್ರಮದ ಅಂಗವಾಗಿ ಇಂದು ಧರ್ಮಸ್ಥಳ ಸನಿಹದ ಶಾಂತಿವನ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಪ್ರಕೃತಿಯ ಮಡಿಲಲ್ಲಿ ಎಂಬ ವಿಶೇಷ ಶಿಬಿರ ನಡೆಯಲಿದೆ.
‌ಪತ್ರಕರ್ತರಿಗೆ ಆರೋಗ್ಯ ಜಾಗೃತಿಯ ಉದ್ದೇಶದಿಂದ ಹಮ್ಮಿಕೊಂಡಿರುವ ಕಾರ್ಯಕ್ರಮವನ್ನು ಧರ್ಮಾಧಿಕಾರಿ ಡಾlವೀರೇಂದ್ರ ಹೆಗ್ಗಡೆ ಉದ್ಘಾಟಿಸಲಿದ್ದಾರೆ.

ಅಧ್ಯಕ್ಷತೆಯನ್ನು‌ ಸಂಘದ ಅಧ್ಯಕ್ಷ ಧನಕೀರ್ತಿ ಆರಿಗ ವಹಿಸಲಿದ್ದಾರೆ. ದ.ಕ.ಜಿ.ಕಾ.ಪ.ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಉಜಿರೆ ಸಿ.ಎನ್.ವೈ.ಎಸ್. ನ ಪ್ರಾಚಾರ್ಯ ಡಾlಪ್ರಶಾಂತ ಶೆಟ್ಟಿ, ಶಾಂತಿವನ ಟ್ರಸ್ಟ್ ಕಾರ್ಯದರ್ಶಿ ಸೀತಾರಾಮ ತೋಳ್ಪಡಿತ್ತಾಯ, ಡಾ. ಐ.ಶಶಿಕಾಂತ ಜೈನ್ ಉಪಸ್ಥಿತರಿರಲಿದ್ದಾರೆ ಎಂದು ಸಂಘದ ಕಾರ್ಯದರ್ಶಿ ಚೈತ್ರೇಶ್ ಇಳಂತಿಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿಶೇಷ ಕಾರ್ಯಕ್ರಮವು‌ ಮುಂಜಾನೆಯಿಂದ ಸಂಜೆಯವರೆಗೆ‌‌ ವಿವಿಧ ಮಾಹಿತಿ, ಚಿಕಿತ್ಸೆಗಳೊಂದಿಗೆ ನಡೆಯಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು