News Karnataka Kannada
Thursday, May 09 2024
ಮಂಗಳೂರು

ಧ್ಯಾನ ಶಿಬಿರ ಉದ್ಘಾಟನಾ ಸಮಾರಂಭ

New Project 2021 09 24t203951.927
Photo Credit :

ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸಹಯೋಗದೊಂದಿಗೆ ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಮತ್ತು ಇಂಟರ್ ನ್ಯಾಷನಲ್ ಬಂಟ್ಸ್ ವೆಲ್ಪೇರ್ ಟ್ರಸ್ಟ್ ಸಹಭಾಗಿತ್ವದಲ್ಲಿ ಧೀ ಶಕ್ತಿ ಜ್ಞಾನ ಯೋಗದ ವತಿಯಿಂದ ಧ್ಯಾನ ಶಿಬಿರದ ಉದ್ಘಾಟನಾ ಸಮಾರಂಭ ಮಂಗಳೂರಿನ ಉರ್ವದಲ್ಲಿರುವ ತುಳು ಭವನದ ಸಿರಿ ಚಾವಡಿಯಲ್ಲಿ ನಡೆಯಿತು.

ಸೆಪ್ಟೆಂಬರ್ 24 ರಿಂದ ಅಕ್ಟೋಬರ್ 3ರ ವರಿಗೆ ನಡೆಯಲಿರುವ ದ್ಯಾನ ಶಿಬಿರವನ್ನು ರೋಟರಿ‌ ಡಿಸ್ಟ್ರಿಕ್ಟ್ ಗವರ್ನರ್ ರೊಟೇರಿಯನ್ ರವೀಂದ್ರ ಭಟ್ ಮತ್ತು ಇಂಟರ್ ನ್ಯಾಷನಲ್ ಬಂಟ್ಸ್ ವೆಲ್ಪೇರ್ ಟ್ರಸ್ಟ್ ನ ಅಧ್ಯಕ್ಷರಾದ ಸದಾನಂದ ಶೆಟ್ಟಿಯವರು ದೀಪ‌‌ ಬೇಳಗಿಸಿ ಧ್ಯಾನ ಶಿಬಿರವನ್ನು ಉದ್ಘಾಟಿಸಿದರು

ಬಳಿಕ‌ ರೋಟರಿ‌ ಡಿಸ್ಟ್ರಿಕ್ಟ್ ಗವರ್ನರ್ ರೊಟೇರಿಯನ್ ರವೀಂದ್ರ ಭಟ್ ಮಾತನಾಡಿ ಯೋಗ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲು ಯೋಗ ಬೇಕು ಆ ಯೋಗ ನನಗೆ ದೊರಕಿದೆ. ಯೋಗ ಮಾಡಿದವನಿಗೆ ರೋಗ ಇರುವುದಿಲ್ಲ ಯೋಗ ನಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ವೃದ್ಧಿಸುತ್ತದೆ ಅದ್ದರಿಂದ ಯುವ ಜನತೆಗೆ ಯೋಗದ ಮಹತ್ವವನ್ನು ತಿಳಿಸುವ ಅವಶ್ಯಕತೆ ಇದೆ ಎಂದು ಹೇಳಿದರು.

ಬಳಿಕ ಇಂಟರ್ ನ್ಯಾಷನಲ್ ಬಂಟ್ಸ್ ವೆಲ್ಪೇರ್ ಟ್ರಸ್ಟ್ ನ ಅಧ್ಯಕ್ಷರಾದ ಸದಾನಂದ ಶೆಟ್ಟಿಯವರು ಮಾತನಾಡಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ನನಗೆ ಸಂತೊಷವಾಗುತ್ತಿದೆ. ಇಂದು ಉದ್ಘಾಟನೆಗೊಂಡು ಮುಂದಿನ ಕೆಲವು ದಿನಗಳ ಕಾಲ ನಡೆಯಲಿರುವ ಯೋಗ ಶಿಬಿರದಲ್ಲಿ ಭಾಗವಹಿಸಿ ಅದರ ಸದುಪಯೋಗ ಪಡೆದುಕೊಳ್ಳಿ ಎಂದು ಹೇಳಿದರು.

ಬಳಿಕ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅದ್ಯಕ್ಷ ದಯಾನಂದ್ ಕತ್ತಲ್ ಸಾರ್ ಮಾತನಾಡಿ ನಮ್ಮ‌ ದೇಶ ವಿಶ್ವಗುರುವಾಗಿದೆ. ನಮ್ಮ‌ ದೇಶದ ‌ಯೋಗ, ದ್ಯಾನ, ಪ್ರಾಣಾಯಾಮವನ್ನು ಎಲ್ಲಾ‌ ದೇಶದವರು ಅನುಸರಿಸಿಸುತ್ತಿದ್ದಾರೆ ಆದರೆ ನಾವು ಎಷ್ಟು ಇದನ್ನು ಉಳಿಸಿಕೊಂಡು ಬರುತ್ತಿದ್ದೇವೆ ಎನ್ನುವುದನ್ನು ಯೋಚನೆ ಮಾಡಬೇಕು ಎಂದು ಹೇಳಿದರು.

ಈ ಸಂದರ್ಭದ ರೋಟರಿ ಕ್ಲಬ್ ಮಂಗಳೂರು ‌ಸೆಂಟ್ರಲ್ ನ‌‌ ಅಧ್ಯಕ್ಷ ರಾಮಶೇಷ‌ ಶೆಟ್ಟಿ, ಸಹಾಯಕ ರಾಜ್ಯಪಾಲ ರಾಘವೇಂದ್ರರಾವ್, ರೋಟರಿ ಮಾಜಿ ಗವರ್ನರ್ ಡಾ.ದೆವದಾಸ್ ರೈ, ಇಂಟರ್ ನ್ಯಾಷನಲ್ ಬಂಟ್ಸ್ ವೆಲ್ಪೇರ್ ಟ್ರಸ್ಟ್ ನ ಮಹಿಳಾ ವಿಭಾಗದ ಅಧ್ಯಕ್ಷರಾದ ಜಯಲಕ್ಷ್ಮಿ ಶೆಟ್ಟಿ, ಯುವ ವಿಭಾಗದ ಅಧ್ಯಕ್ಷ ದೇವಿ ಚರಣ್ ಶೆಟ್ಟಿ, , ತುಳು ಅಕಾಡೆಮಿ ಸದಸ್ಯ ಶಶಿದರ್ ಶೆಟ್ಟಿ ನಿಟ್ಟೆ ಸೇರಿದಂತೆ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ದ್ಯಾನ ಶಿಬಿರದ ಸಂಚಾಲಕರಾದ ರಾಜ್ ಗೋಪಾಲ್ ರೈ ಸ್ವಾಗತಿಸಿ ಪ್ರಾಸ್ತವಿಕವಾಗಿ ಮಾತನಾಡಿ, ಕಾರ್ಯಕ್ರಮ ನಿರೂಪಿಸಿದರು. ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಕಾರ್ಯದರ್ಶಿಜಗನ್ನಾಥ ಶೆಟ್ಟಿ ವಂದಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು