ಮಂಗಳೂರು : ಇಲ್ಲಿನ ಸರ್ಕ್ಯೂಟ್ ಹೌಸ್ ನಲ್ಲಿ ಮಾತನಾಡಿದ
ನೂತನ ಸಚಿವ ಕೋಟಾ ಶ್ರೀನಿವಾಸ ಪೂಜಾರಿ , ಈ ಹಿಂದೆ ಇದ್ದ ಖಾತೆಯನ್ನೇ ಮುಂದುವರಿಸುತ್ತಾರೆ ಅಂತಾ ಅಂದುಕೊಂಡಿದ್ದೆ. ಗ್ರಾಮೀಣಾಭಿವೃದ್ಧಿ ಇಲಾಖೆ ಮೇಲೆ ಆಸಕ್ತಿ ಇತ್ತು. ಆದ್ರೆ ಅದನ್ನು ಈಶ್ವರಪ್ಪ ಅವರಿಗೆ ನೀಡಿದ್ದಾರೆ ಎಂದು ನಿರಾಸೆ ವ್ಯಕ್ತಪಡಿಸಿದ್ದಾರೆ.ಎಲ್ಲರಿಗೂ ತಮ್ಮ ಆಸಕ್ತಿ ಕ್ಷೇತ್ರದ ಆಕಾಂಕ್ಷೆ ಸಾಮಾನ್ಯವಾಗಿರುತ್ತೆ ಎಂದು ಹೇಳಿದರು.
ಈಶ್ವರಪ್ಪ ನನಗಿಂತ ಹಿರಿಯರಿದ್ದಾರೆ.ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ನಮ್ಮ ಕೆಲಸ ಆಗಬೇಕು ಅಂತಾ ಬಂದ್ರೆ ಈಶ್ವರಪ್ಪ ಇದ್ದಾರೆ.ಅವರ ಬಳಿ ಮಾಡಿಸಿಕೊಳ್ಳುತ್ತೇನೆ ಎಂದರು.
ಹಿಂದುಳಿದ ವರ್ಗದ ಜೊತೆ ಸಮಾಜ ಕಲ್ಯಾಣ ಇಲಾಖೆ ಕೂಡ ಕೊಟ್ಟಿದ್ದಾರೆ. ಇದನ್ನು ಕೂಡ ಸಮರ್ಥವಾಗಿ ನಿಭಾಯಿಸುತ್ತೇನೆ. ಈ ಖಾತೆಯಲ್ಲಿ ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಮುಖ್ಯವಾಹಿನಿಗೆ ತರುವುದು ನನ್ನ ಉದ್ದೇಶ ಎಂದು ಹೇಳಿದರು.
ಅದಕ್ಕೆ ನಾನು ಸಿಎಂ ಹಾಗೂ ರಾಜ್ಯಾಧ್ಯಕ್ಷರಿಗೆ ಧನ್ಯವಾದ ಅರ್ಪಿಸುತ್ತೇನೆ. ಉಸ್ತುವಾರಿಗೆ ಜಿಲ್ಲೆಯ ಆಯ್ಕೆ ಹಕ್ಕು ಸಚಿವರಿಗೆ ಇಲ್ಲ. ಯಾವ ಜಿಲ್ಲೆಯ ಉಸ್ತುವಾರಿ ಕೊಟ್ರು ನಾನು ಹೋಗುತ್ತೇನೆ.ಖಾತೆ ಬಗ್ಗೆ ನನಗೆ ತೃಪ್ತಿ ಮತ್ತು ಹೆಮ್ಮೆ ಇದೆ ಎಂದರು.