ಮಂಗಳೂರು: ರಾಜ್ಯದ ಕಬ್ಬಿಣದ ಅದಿರನ್ನು ರಫ್ತು ಮಾಡುವುದಕ್ಕೆ ಇದ್ದ ನಿರ್ಬಂಧಗಳನ್ನು ಸುಪ್ರೀಂಕೋರ್ಟ್ ತೆರವುಗೊಳಿಸಿದ ಹಿನ್ನೆಲೆಯಲ್ಲಿ ನವಮಂಗಳೂರು ಬಂದರಿಗೆ ಅದಿರು ಹರಿದು ಬರುವ ಬಗ್ಗೆ ಲೆಕ್ಕಾಚಾರ ಆರಂಭವಾಗಿದೆ .
ಇದೇ ವೇಳೆ ಕಬ್ಬಿಣದ ಅದಿರು ಖರೀದಿಗೆ ಈಗಿನ ಪರಿಸ್ಥಿತಿಯಲ್ಲಿ ಅಂತಾರಾಷ್ಟ್ರೀಯ ಗ್ರಾಹಕರು ಸಿಗಬಹುದು ಎಂಬ ಸಂಶಯ ಕಾಡತೊಡಗಿದೆ . ಮುಖ್ಯ ಆಮದುದಾರ ದೇಶವಾಗಿರುವ ಚೀನಾ ದೊಂದಿಗೆ ಸಂಬಂಧ ಹದಗೆಡಲು ಇದಕ್ಕೆ ಕಾರಣ , ಹಿಂದೆ ಕಬ್ಬಿಣದ ಅದಿರನ್ನು ರಾಜ್ಯದ ನವಮಂಗಳೂರು ಬಂದರು ಬೇಲೆಕೇರಿ ಮತ್ತು ಕಾರವಾರ ಈ ಮೂರೂ ಬಂದರುಗಳಿಂದ ಚೀನಾ ಮತ್ತಿತರ ದೇಶಗಳಿಗೆ ರಫ್ತು ಮಾಡಲಾಗುತ್ತಿತ್ತು .ಆಗ ಕರಾವಳಿಗೆ ಸಾವಿರಾರು ಕಬ್ಬಿಣದ ಅದಿರು ಸಾಗಣೆಯ ಟ್ರಕ್ಕುಗಳು ಬಳ್ಳಾರಿ ಹೊಸಪೇಟೆ ಕಡೆಯಿಂದ ಬರುತ್ತಿದ್ದವು ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ರಾಜ್ಯ ಕೇಂದ್ರ ಸರಕಾರಗಳು ಕಬ್ಬಿಣದ ಅದಿರು ಗಣಿಗಾರಿಕೆಗೆ ನಿಷೇಧ ಹೇರಿದೆ ಅಷ್ಟೇ ಅಲ್ಲದೆ ಗಣಿಗಾರಿಕೆ ನಡೆಸಲಾಗಿದ್ದ ಅದಿರನ್ನು ರಫ್ತು ಮಾಡುವಂತಿಲ್ಲ ಎಂಬ ಆದೇಶಿಸಲಾಗಿತ್ತು. ಲಕ್ಷಗಟ್ಟಲೆ ಟನ್ ಅದಿರು ಇನ್ನೂ ಬಳ್ಳಾರಿ ಚಿತ್ರದುರ್ಗ ತುಮಕೂರು ಜಿಲ್ಲೆಗಳಲ್ಲಿ ಸೂಕ್ತ ಮಾರುಕಟ್ಟೆ ಲಭ್ಯವಾದರೆ ರಫ್ತು ಆರಂಭವಾಗುವ ಸಾಧ್ಯತೆ ಇದೆ .
ಅದಕ್ಕಾಗಿ ನವಮಂಗಳೂರು ಬಂದರು ಪ್ರಾಧಿಕಾರದಿಂದ ಪ್ರಯತ್ನ ಕೈಗೊಳ್ಳಲಾಗುವುದು .ಬಳ್ಳಾರಿಯಿಂದ ರೈಲು ಮತ್ತು ರಸ್ತೆ ಮೂಲಕ ಸರಕು ಸ್ವೀಕರಿಸಬಹುದು ನವ ಮಂಗಳೂರು ಪಾಲಿಕೆ ಯಲ್ಲಿ ಬೃಹತ್ ಯಾರ್ಡ್ ಗಳಿದ್ದು ಅವುಗಳಲ್ಲಿ ಅದಿರು ಇರಿಸಿ ಬಳಿಕ ರಫ್ತು ಮಾಡುವುದಕ್ಕೆ ಅವಕಾಶಗಳಿವೆ ಎನ್ನುತ್ತಾರೆ ಅಧಿಕಾರಿಗಳು .
ಸುಪ್ರೀಂಕೋರ್ಟ್ ಆದೇಶದ ಸರಿಯಾದ ಅಧ್ಯಯನ ನಡೆಸಿದ ಬಳಿಕ ಬಂದರು ಪ್ರಾಧಿಕಾರದ ಆಡಳಿತ ಈ ಕುರಿತು ಸ್ಪಷ್ಟ ತೀರ್ಮಾನ ಕೈಗೊಳ್ಳಲಿದೆ. ಈಗಿನ ಮಾಹಿತಿಯ ಅನ್ವಯ ಎಲ್ಲ ಪ್ರಕ್ರಿಯೆ ಮುಗಿದು ರಫ್ತು ಆರಂಭವಾಗಲು ಇನ್ನೂ 3ತಿಂಗಳ ಕಾಲಾವಕಾಶ ಬೇಕಾಗಬಹುದು.