News Karnataka Kannada
Monday, April 29 2024
ಮಂಗಳೂರು

ನಾರಾಯಣಗುರುಗಳ ಸ್ತಬ್ದಚಿತ್ರವನ್ನು ನಿರಾಕರಿಸಿದ ಕೇಂದ್ರ ಸರಕಾರ ; CPIM ತೀವ್ರ ಖಂಡನೆ

Inauguration of administrative office of Federation of Bunts Associations at Mulki on April 5
Photo Credit :
ಗಣರಾಜ್ಯೋತ್ಸವದ ಪೆರೇಡ್ ಗಾಗಿ ಕೇರಳ ಸರಕಾರ ಆಯೋಜಿಸಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ದಚಿತ್ರವನ್ನು ಕೇಂದ್ರ ಸರ್ಕಾರದ ಗಣರಾಜ್ಯೋತ್ಸವ ಸಮಿತಿಯು ತಿರಸ್ಕರಿಸಿರುವುದನ್ನು CPIM ದ.ಕ.ಜಿಲ್ಲಾ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ.
ಒಂದೇ ಜಾತಿ,ಒಂದೇ ಮತ, ಒಂದೇ ದೇವರು – ಜಾತಿ ಮತ ಯಾವುದಾದರೇನು ಮನುಷ್ಯ ಒಳ್ಳೆಯವನಾದರೆ ಸಾಕು ಎಂಬ ಅತ್ಯಂತ ಶ್ರೇಷ್ಠವಾದ ಮಾನವೀಯ ಸಂದೇಶವನ್ನು ಜಗತ್ತಿಗೆ ಸಾರಿದ, ಜಾತಿ ತಾರತಮ್ಯ ಮೂಡನಂಬಿಕೆಗಳ ವಿರುದ್ದ ಧ್ವನಿ‌ ಎತ್ತಿ ಸಮಾಜದ ಸುಧಾರಣೆಗೆ ದೊಡ್ಡ ಕೊಡುಗೆ ನೀಡಿದ, ಕೋಟ್ಯಾಂತರ ಜನತೆಯ ಹ್ರದಯ ಗೆದ್ದ ಮಹಾನ್ ಚೇತನ ನಾರಾಯಣಗುರುಗಳ ಸ್ತಬ್ಧಚಿತ್ರವನ್ನು ನಿರಾಕರಿಸುವ ಮೂಲಕ ಸಮಾನತೆಯ ಚಿಂತನೆ ಹಾಗೂ ಹಿಂದುಳಿದ ವರ್ಗಗಳ ಸ್ವಾಭಿಮಾನವನ್ನು ಅವಮಾನಿಸಿರುವುದು ಮಾತ್ರವಲ್ಲ ಶಂಕರಾಚಾರ್ಯರ ಪ್ರತಿಮೆಯ ಸ್ತಬ್ದಚಿತ್ರವನ್ನು ಮಾಡಲು ಸೂಚಿಸಿರುವುದು ಶ್ರೇಣೀಕೃತ ಜಾತಿ ವ್ಯವಸ್ಥೆಯ ಹಿತಾಸಕ್ತಿಯನ್ನು ಕೇಂದ್ರದ ಬಿಜೆಪಿ ಸರಕಾರ ಹೊಂದಿರುವುದನ್ನು ಎತ್ತಿ ತೋರಿಸಿದೆ.
ಇದು ಆಡಳಿತದಲ್ಲಿ ಆರ್ ಎಸ್ ಎಸ್ ಚಿಂತನೆಗಳು ಮೇಲುಗೈ ಸಾಧಿಸಿರುವುದರ ಪರಿಣಾಮ. ಕೇಂದ್ರ ಸರಕಾರವು ತಕ್ಷಣ ಆಗಿರುವ ಪ್ರಮಾದವನ್ನು ಸರಿಪಡಿಸಿ ನಾರಾಯಣ ಗುರುಗಳ ಸ್ತಬ್ಧಚಿತ್ರಕ್ಕೆ ಅವಕಾಶ ನೀಡಬೇಕೆಂದು CPIM ದ.ಕ.ಜಿಲ್ಲಾ ಕಾರ್ಯದರ್ಶಿ ಕೆ.ಯಾದವ ಶೆಟ್ಟಿ ಯವರು ಪತ್ರಿಕಾ ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ.*
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
15229
Jaya Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು