News Karnataka Kannada
Sunday, April 28 2024
ಮಂಗಳೂರು

ನಾರಾಯಣ ಗುರು ಸಂಘ ಎಲ್ಲಾ ಸಮಾಜದವರಿಗೂ ಪ್ರಯೋಜನ ನೀಡಿದೆ : ಸೋಲೂರು ರೇಣುಕಾ ಪೀಠದ ಪೀಠಾಧಿಪತಿ ಶ್ರೀ ವಿಖ್ಯಾತನಂದ ಸ್ವಾಮಿ

New Project (13)
Photo Credit :

ಬೆಳ್ತಂಗಡಿ : ನಾರಾಯಣ ಗುರುಗಳ ಸಂಕಲ್ಪದಂತೆ ಈ ಸಮಾಜ ಬೆಳೆಯಬೇಕು. ಬೆಳ್ತಂಗಡಿಯ ನಾರಾಯಣ ಗುರು ಸಂಘ ಎಲ್ಲಾ ಸಮಾಜದವರಿಗೂ ಪ್ರಯೋಜನ ನೀಡಿದೆ. ಈ ಸಂಘದ ಮೂಲಕ ಹೆಚ್ಚಿನ ವಿದ್ಯಾಸಂಸ್ಥೆಗಳು ಮೂಡಿ ಬಂದು ಸಮಾಜಕ್ಕೆ ಅನುಕೂಲವಾಗಲಿ ಎಂದು ಸೋಲೂರು ರೇಣುಕಾ ಪೀಠದ ಪೀಠಾಧಿಪತಿ ಶ್ರೀ ವಿಖ್ಯಾತನಂದ ಸ್ವಾಮಿ ಹೇಳಿದರು.

ಅವರು ಸೋಮವಾರ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ(ರಿ) ಬೆಳ್ತಂಗಡಿ, ಮಹಿಳಾ ಬಿಲ್ಲವ ವೇದಿಕೆ ಮತ್ತು ಯುವ ಬಿಲ್ಲವ ವೇದಿಕೆ ಬೆಳ್ತಂಗಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ಶ್ರೀ ಗುರುನಾರಾಯಣ ಸಭಾ ಭವನದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ನೂತನ ಬಿಂಬ ಪ್ರತಿಷ್ಠೆ ಹಾಗೂ167ನೇ ಜನ್ಮ ದಿನಾಚರಣೆಯ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.

ಮುಖ್ಯ ಅತಿಥಿ, ಸಂಘದ ಗೌರವಾಧ್ಯಕ್ಷ, ಮಾಜಿ ಶಾಸಕ ಕೆ ವಸಂತ ಬಂಗೇರ ಮಾತನಾಡಿ, ‘ಬಿಲ್ಲವ ಸಮುದಾಯ ಸಮಾಜದಲ್ಲಿರುವ ಅವಕಾಶಗಳನ್ನುಬಳಸಿಕೊಂಡು ಸಶಕ್ತ ಸಮಾಜವಾಗಿ ಬೆಳೆಯಬೇಕು. ಅವಿಭಜಿತ ದಕ್ಷಿಣ ಕನ್ನಡಜಿಲ್ಲೆಯಲ್ಲಿ ಸಂಖ್ಯೆಯಲ್ಲಿ ಹೆಚ್ಚಿರುವಂತೆ ಸಂಘಟನಾತ್ಮಕವಾಗಿಯೂ ಬಲಶಾಲಿಯಾಗಿರಬೇಕು ಎಂದರು.

ಸಂಘದ ಅಧ್ಯಕ್ಷ ಪದ್ಮನಾಭ ಮಾಣಿಂಜ ಮಾತನಾಡಿ,’ ಬಿಲ್ಲವ ಸಮಾಜದಲ್ಲಿ ನಾರಾಯಣ ಗುರುಗಳ ತತ್ವ ಸಂದೇಶಗಳು ಹೆಜ್ಜೆ ಹೆಜ್ಜೆಗೂ ಪಾಲನೆಯಾಗಬೇಕು. ಸಂಘಟನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಎಲ್ಲಾ ಕ್ಷೇತ್ರಗಳಲ್ಲೂಬಲಶಾಲಿಯಾಗಿಸುವ ಕೆಲಸ ಮಾಡಬೇಕು. ಸಂಘಟನೆಯನ್ನು ಒಡೆಯುವಕೆಲಸಕ್ಕೆ ಯಾರೂ ಕೈ ಹಾಕಬಾರದು’ ಎಂದರು.

ದ್ವಿತೀಯ ಪಿಯುಸಿಯಲ್ಲಿ ಶೇ. 100 ಅಂಕ ಗಳಿಸಿದ ವಿದ್ಯಾರ್ಥಿಗಳಾದ ಸಮೀಕ್ಷಾಮತ್ತು ಜ್ಯೋತಿಕಾ, ಎಸ್ಸೆಸ್ಸೆಲ್ಸಿಯಲ್ಲಿ 621 ಅಂಕ ಗಳಿಸಿದ ಸುಶಾಂತ್, ಗೌರವ್, ಕವನ, 619 ಅಂಕ ಗಳಿಸಿದ ಸೃಷ್ಟಿ ಹಾಗೂ ನೇಹಲ್ ಇವರನ್ನುಸನ್ಮಾನಿಸಲಾಯಿತು. ಸಮಾಜದ ಬಡ ವಿದ್ಯಾರ್ಥಿಗಳಿಗೆ ಸಹಾಯ ಮಾಡುವಲ್ಲಿ ಸೋಲೂರು ಮಠಸದಾ ಇದೆ. ಐಎಎಸ್, ಕೆ.ಎ.ಎಸ್. ಕಲಿಯುವಂತಹ ವಿದ್ಯಾರ್ಥಿಗಳಿಗೂ ಇಲ್ಲಿ ಅವಕಾಶವಿದೆ ಎಂದು ಶ್ರೀ ವಿಖ್ಯಾತನಂದ ಸ್ವಾಮಿ ಹೇಳಿದರು.

ವೇದಿಕೆಯಲ್ಲಿ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಮಹಿಳಾ ಬಿಲ್ಲವವೇದಿಕೆ ಅಧ್ಯಕ್ಷೆ ರಾಜಶ್ರೀ ರಮಣ್ ಇದ್ದರು.ನಾರಾಯಣ ಗುರುಗಳ ಬಿಂಬ ಪ್ರತಿಷ್ಠೆಯಲ್ಲಿ ವಿಶೇಷ ಕೊಡುಗೆ ನೀಡಿದ ನಾರಾಯಣ ಸುವರ್ಣ, ಯಶೋಧರ ಮತ್ತು ಯಶೋಧ ಕುತ್ಲೂರು, ವೈವಾಹಿಕಜೀವನದ 50ನೇ ವರ್ಷಕ್ಕಾಗಿ ಸಂಘದ ಮಾಜಿ ಅಧ್ಯಕ್ಷ ವಸಂತ ಸಾಲಿಯಾನ್ ದಂಪತಿಗಳನ್ನು ಗೌರವಿಸಲಾಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು