News Karnataka Kannada
Tuesday, May 07 2024
ಮಂಗಳೂರು

ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಸಾವು

Dead
Photo Credit : News Kannada

ಮಂಗಳೂರು : ನಗರದ ಕೊಟ್ಟಾರ ಚೌಕಿ ಸಮೀಪದ ಹಾಸ್ಟೆಲ್ ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದ ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದಾನೆ.

ಪ್ರಣವ್ ಎಸ್. ಮುಂಡಾಸ (17) ಮೃತಪಟ್ಟ ವಿದ್ಯಾರ್ಥಿ. ಈತ ವಿಜಯಪುರದ ಸತೀಶ್ ಅವರ ಪುತ್ರನಾಗಿದ್ದು, ನಗರದ ಕೊಟ್ಟಾರ ಚೌಕಿಯ ಚೈತನ್ಯ ಟೆಕ್ನೊ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಕಲಿಯುತ್ತಿದ್ದ ಎಂದು ತಿಳಿದು ಬಂದಿದೆ.

ಕೆಲವು ಮಕ್ಕಳು ಕ್ರಿಕೆಟ್ ಆಟವಾಡುತ್ತಿದ್ದು, ಈ ವೇಳೆ ಹಾಸ್ಟೆಲ್ ಕಟ್ಟಡದ ಮೇಲೆ ಚೆಂಡು ಬಿದ್ದಿತ್ತು. ಕಟ್ಟಡದ ನಾಲ್ಕನೇ ಮಹಡಿಯಲ್ಲಿದ್ದ ಪ್ರಣವ್ ಅದನ್ನು ತರುವ ಸಲುವಾಗಿ ಮಹಡಿಗೆ ಅಳವಡಿಸಲಾದ ಶೀಟ್‌ಗೆ ಏರಿದ್ದು, ಈ ಸಂದರ್ಭದಲ್ಲಿ ಅಲ್ಲಿಂದ ಬಿದ್ದು ಗಂಭೀರ ಗಾಯಗೊಂಡಿದ್ದ. ತಕ್ಷಣ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು