News Karnataka Kannada
Tuesday, April 30 2024
ಮಂಗಳೂರು

ನಿಟ್ಟೆ ಶಶಿಧರ ಶೆಟ್ಟಿ ಅವರ ಸಾಧನೆ ದಾಖಲೀಕರಣಗೊಳ್ಳಲಿ: ಡಾ. ಧರ್ಮಾ

Prgm
Photo Credit : By Author

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯರಾಗಿದ್ದುಕೊಂಡು, ತುಳು ಸಂಘಟನೆ, ಸಮಾಜ ಸೇವೆ, ಸಾಂಸ್ಕೃತಿಕವಾಗಿ ಹಾಗೂ ಯಶಸ್ವಿ ಉದ್ಯಮಿಯಾಗಿಯೂ ಗುರುತಿಸಿ ಆದರ್ಶ ವ್ಯಕ್ತಿತ್ವದಿಂದ ಪ್ರೇರಣಾ ವ್ಯಕ್ತಿಯಾಗಿ ನಮ್ಮೆಲ್ಲರೊಂದಿಗೆ ಒಡನಾಡಿಯಾಗಿದ್ದ ಅವರ ಜೀವನದ ಸಾಧನೆಯೊಂದಿಗೆ ಅನುಭವವು ಬರಹದ ಮೂಲಕ ಮುಂದಿನ ಪೀಳಿಗೆಗೆ ದಾರಿದೀಪವಾಗಿ ದಾಖಲೀಕರಣಗೊಳ್ಳಬೇಕು ಎಂದು ಮಂಗಳೂರು ವಿಶ್ವವಿದ್ಯಾನಿಲಯ ರಿಜಿಸ್ಟ್ರಾರ್ ಡಾ. ಧರ್ಮ ಹೇಳಿದರು.

ಅವರು ಮಂಗಳೂರಿನ ಉರ್ವ ಸ್ಟೋರ್‌ನ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸಿರಿ ಚಾವಡಿಯಲ್ಲಿ ನಡೆದ ಅಕಾಡೆಮಿಯ ಸದಸ್ಯ ನಿಟ್ಟೆ ಶಶಿಧರ ಶೆಟ್ಟಿ ಅವರ ನುಡಿ ಪುಷ್ಪ ಶ್ರದ್ಧಾಂಜಲಿ ಸಭೆಯಲ್ಲಿ ತಮ್ಮ ನುಡಿ ನಮನ ಸಲ್ಲಿಸಿದರು.

ಅಖಿಲ ಭಾರತ ತುಳು ಒಕ್ಕೂಟದ ಅಧ್ಯಕ್ಷ ಧರ್ಮಪಾಲ್ ದೇವಾಡಿಗ ಅವರು ಮಾತನಾಡಿ, ನಿಟ್ಟೆ ಶಶಿಧರ ಶೆಟ್ಟಿ ಅವರ ಸಂಘಟನಾತ್ಮಕ ಸಾಮರ್ಥ್ಯದಿಂದ ಇಂದು ಒಕ್ಕೂಟ ವಿಶ್ವ ಮಾನ್ಯತೆಯನ್ನು ಪಡೆದಿದೆ. ಅವರ ಅನುಪಸ್ಥಿ ಇನ್ನು ಮುಂದೆ ನಮ್ಮನ್ನು ಕಾಡಲಿದೆ, ಅವರ ಭಾಷಾಭಿಮಾನವು ಇತರರಿಗೆ ಪ್ರೇರಣೆಯಾಗಿದೆ ಅವರ ಹೆಸರು ಶಾಶ್ವತವಾಗಿ ಉಳಿಯುವಂತಹ ಕಾರ್ಯ ನಮ್ಮಿಂದ ನಡೆಯಬೇಕು ಎಂದರು.

ಈ ಸಂದರ್ಭದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಜಿ. ಕತ್ತಲ್‌ಸಾರ್ ಪ್ರಸ್ತಾವನೆಗೈದು, ಅಕಾಡೆಮಿಯ ಸದಸ್ಯರಷ್ಟೇ ಅಲ್ಲ ಹಿರಿಯಣ್ಣರಾಗಿ ಭಾವನಾತ್ಮಕ ನಂಟನ್ನು ಹೊಂದಿರುವ ಸಹೃದಯತೆಯ ಪ್ರತೀಕವಾಗಿ ಶಶಿಧರ ಶೆಟ್ಟಿ ನಮ್ಮೊಂದಿಗೆ ಇದ್ದರು, ಅವರ ಆತ್ಮ ಸುತ್ತಮುತ್ತ ನಮ್ಮೊಂದಿಗೆ ಸದಾ ಇರುತ್ತದೆ ಎಂಬ ನಂಬಿಕೆ ನಮ್ಮದಾಗಿದೆ, ಅವರ ಜೀವನಗಾಥೆಯನ್ನು ಪುಸ್ತಕದ ರೂಪದಲ್ಲಿ ಹಾಗೂ ಪ್ರತೀ ವರ್ಷ ಅವರನ್ನು ಸ್ಮರಿಸುವ ಕೆಲಸಕ್ಕೆ ಎಲ್ಲರ ಸಹಾಯದಿಂದ ನಡೆಸಲಾಗುವುದು ಎಂದರು.

ಸಭೆಯಲ್ಲಿ ನುಡಿ ನಮನವನ್ನು ಲಯನ್ಸ್ ಜಿಲ್ಲಾ ಗವರ್ನರ್ ವಸಂತಕುಮಾರ್ ಶೆಟ್ಟಿ, ತುಳು ಒಕ್ಕೂಟದ ಅಧ್ಯಕ್ಷ ದಾಮೋದರ ನಿಸರ್ಗ, ಅಕಾಡೆಮಿಯ ಮಾಜಿ ಅಧ್ಯಕ್ಷ ಎ.ಸಿ.ಭಂಡಾರಿ, ಟೈಮ್ಸ್ ಆಫ್ ಕುಡ್ಲ ಪತ್ರಿಕೆಯ ಸಂಪಾದಕ ಎಸ್.ಆರ್.ಬಂಡಿಮಾರ್, ತುಳು ರಕ್ಷಣಾ ವೇದಿಕೆಯ ಅಧ್ಯಕ್ಷ ಯೋಗೀಶ್ ಶೆಟ್ಟಿ ಜೆಪ್ಪು, ಸಂಸ್ಕಾರ ಭಾರತಿಯ ರಾಜ್ಯ ಪ್ರಭಾರಿ ಚಂದ್ರಶೇಖರ ಶೆಟ್ಟಿ, ಪದವಿನಂಗಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಪ್ರಶಾಂತ್ ಪೈ, ತುಳು ಕಲಾವಿದರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ್‌ಕುಮಾರ್ ಮಲ್ಲೂರು, ಮಂಗಳೂರು ಲಯನ್ಸ್ ಕ್ಲಬ್‌ನ ಅಧ್ಯಕ್ಷ ಸತೀಶ್ ರೈ, ಅಕಾಡೆಮಿಯ ಸದಸ್ಯರಾದ ಡಾ. ಆಕಾಶ್ ರಾಜ್ ಜೈನ್, ನಾಗೇಶ್ ಕುಲಾಲ್, ಶಶಿಧರ ಶೆಟ್ಟಿ ಅವರ ಮಗಳಾದ ಶ್ರಾವ್ಯ ಮಾತನಾಡಿದರು.

ಅಕಾಡೆಮಿಯ ಸದಸ್ಯರಾದ ಲೀಲಾಕ್ಷ ಕರ್ಕೇರ, ರಿಜಿಸ್ಟ್ರಾರ್ ಕವಿತಾ, ಮೂಲ್ಕಿ ವಿಜಯಾ ಕಾಲೇಜಿನ ಆಡಳಿತ ಮಂಡಳಿಯ ಮಾಜಿ ಅಧ್ಯಕ್ಷೆ ಶಮಿನಾ ಆಳ್ವಾ, ಮಂಗಳೂರು ಲಯನ್ಸ್ ಕ್ಲಬ್‌ನ ಕಾರ್ಯದರ್ಶಿ ಸುಪ್ರೀತಾ ಜಿ. ಶೆಟ್ಟಿ, ಉಪಾಧ್ಯಕ್ಷ ಗುರುಪ್ರಸಾದ್ ಆಳ್ವಾ, ಯಕ್ಷಗಾನ ಸಂಘಟಕ ರವಿ ಅಲೆವೂರಾಯ, ಹಿರಿಯ ಸಾಹಿತಿ ಮುದ್ದು ಮೂಡುಬೆಳ್ಳೆ, ಡಾ. ರವೀಶ್ ಪರವ, ಜಾರ್ಜ್, ಮೊಯ್ದನ್ ಕುಂಜ್ಞ, ಯುವ ತುಳು ಸಂಘಟನೆಯ ರೋಶನ್, ಜೈ ತುಳುನಾಡು ಸಂಘಟನೆಯ ಪ್ರಮುಖರು, ಮತ್ತಿತರರು ಉಪಸ್ಥಿತರಿದ್ದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯ ರವಿ ಪಿ. ಎಂ. ವಂದಿಸಿದರು, ಸದಸ್ಯ, ಪತ್ರಕರ್ತ ನರೇಂದ್ರ ಕೆರೆಕಾಡು ಕಾರ್ಯಕ್ರಮ ನಿರೂಪಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು