ಮಂಗಳೂರು : ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಜ.10ರಂದು ಮಂಗಳೂರಿಗೆ ಆಗಮಿಸಲಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಇವರು ಇಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ರಾಷ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ ಶ್ರೀ ಅಖಿಲ್ ಆಹಮ್ಮದ್, ಯೋಜನಾ ನಿರ್ದೇಶಕ ಕರ್ನಲ್ ಎ.ಕೆ. ಜಾನ್ ಬಾಜ್ ಹಾಗೂ ಇತರೆ ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರು.
ಅಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಮಾನ್ಯ ಸಚಿವರು ರಾಷ್ಟ್ರೀಯ ಹೆದ್ದಾರಿಯ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಕಾಮಗಾರಿಗಳ ಪುನರ್ ಚಾಲನೆ ನೀಡುವ ಮೂಲಕ ಕಾಮಗಾರಿಗಳಿಗೆ ವೇಗ ನೀಡಲಿದ್ದಾರೆ.