Categories: ಮಂಗಳೂರು

ನಿವೃತ್ತ ಶಿಕ್ಷಕ ಕಲಾವಿದ ಸಂಘಟಕ ಚಂದ್ರಶೇಖರ ಭಟ್ ಆದೂರು ಸ್ವಗೃಹದಲ್ಲಿ ನಿಧನ

ಬೆಳ್ತಂಗಡಿ: ನಿವೃತ್ತ ಶಿಕ್ಷಕ ಕಲಾವಿದ ಸಂಘಟಕ ಬಹುಮುಖ ಪ್ರತಿಭೆಯ ಕೆ (ಕಿಳಿಂಗಾರು ) ಚಂದ್ರಶೇಖರ ಭಟ್ ಆದೂರು (೮೪) ಮಂಗಳವಾರ ಸ್ವಗೃಹದಲ್ಲಿ ನಿಧನರಾದರು .

ಮೂಲತಃ ಗಡಿನಾಡು ಕಾಸರಗೋಡು ಜಿಲ್ಲೆಯ ವೈದಿಕ ಮನೆತನದವರಾದ ಕೆ ಚಂದ್ರಶೇಖರ ಭಟ್ ಆದೂರು ಶಿಕ್ಷಕ ವೃತ್ತಿಯ ನಿವೃತ್ತಿಯ ನಂತರ ದಕ್ಷಿಣ ಕನ್ನಡ ಜಿಲ್ಲೆಯ ಹೊಸಂಗಡಿ ಗ್ರಾಮದಲ್ಲಿ ನೆಲೆಸಿದ್ದರು .

ಕಾಸರಗೋಡಿನ ಮಂಗಲ್ಪಾಡಿ, ಅಡೂರು, ಆದೂರು, ಪಾಂಡಿ ಸೇರಿದಂತೆ ವಿವಿಧ ಸರಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಕ, ಮುಖ್ಯ ಶಿಕ್ಷಕ, ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿ ಅಪಾರ ವಿದ್ಯಾರ್ಥಿ ವೃಂದವನ್ನು ಹೊಂದಿದ್ದರು . ಉತ್ತಮ ವಾಗ್ಮಿಗಳಾಗಿದ್ದ ಚಂದ್ರಶೇಖರ್ ಭಟ್ ಅವರು ಉತ್ತಮ ನಿರೂಪಕರಾಗಿಯೂ ಮಿಂಚಿದ್ದರು .

ಕಾರ್ತಿಕೇಯ ಕಲಾನಿಲಯದ ಸ್ಥಾಪಕರಲ್ಲೊಬ್ಬರಾದ ಇವರು ನಾಟಕಗಳಲ್ಲಿ ಮುಖ್ಯ ಪಾತ್ರಧಾರಿಗಳಾಗಿ ವೈಯಕ್ತಿಕ ಪ್ರತಿಭೆಗೆ ಮನ್ನಣೆ ಪಡೆದಿದ್ದರು .ಯಕ್ಷಗಾನದಲ್ಲಿ ವೇಷ ವೈವಿಧ್ಯತೆಗಳಿಂದ ಹೆಸರು ಗಳಿಸಿದವರು .ಔದ್ಯೋಗಿಕ ಕ್ಷೇತ್ರದಲ್ಲಿ ಎಳೆಯರನ್ನು ಕಲೆ ಹಾಕಿ ಅಲ್ಲಿಯೂ ಯಕ್ಷಗಾನ ಸಂಘಗಳನ್ನು ರೂಪಿಸಿ ಪ್ರಬಂಧ ಕಥೆ ಕವಿತೆಗಳನ್ನು ಬರೆದು ಸಾಹಿತ್ಯ ಕ್ಷೇತ್ರದಲ್ಲೂ ಗುರುತಿಸಲ್ಪಟ್ಟಿದ್ದರು .ಕನ್ನಡ ,ತುಳು ,ಮಲಯಾಳಂ ಭಾಷಾ ಯಕ್ಷಗಾನ ಹಾಗೂ ನಾಟಕಗಳಲ್ಲಿ ಮುಖ್ಯ ಪಾತ್ರಧಾರಿಯಾಗಿ ಮಿಂಚಿ ಅಪಾರ ಜನಮನ್ನಣೆಗೆ ಪಾತ್ರರಾಗಿದ್ದರು .

ಕೇರಳ ರಾಜ್ಯದುದ್ದಕ್ಕೂ ಅನೇಕ ಪ್ರದರ್ಶನಗಳನ್ನು ನೀಡಿ ಕೇರಳದ ಅಭಿಮಾನಿಗಳನ್ನು ಹೊಂದಿದ್ದ ಅಪ್ರತಿಮ ಕಲಾವಿದರಾಗಿದ್ದರು .ಮಲ್ಲಾವರ ಶ್ರೀ ಪಂಚಲಿಂಗೇಶ್ವರ ಯಕ್ಷಗಾನ ಕಲಾ ಮಂಡಳಿಯ ಸ್ಥಾಪಕ ಸದಸ್ಯರಾಗಿ ಉತ್ತಮ ಸೇವೆ ಸಲ್ಲಿಸಿದ್ದರು .ಉತ್ತಮ ವಿಮರ್ಶಾ ಲೇಖನಗಳನ್ನು ಬರೆಯುತ್ತಿದ್ದ ಇವರ ಲೇಖನ ಬರಹಗಳನ್ನು ಆಹ್ವಾನಿಸಿ ಹಲವು ಮಾಸಿಕ ಪಾಕ್ಷಿಕ ದೈನಿಕ ಪತ್ರಿಕೆಗಳು ಪ್ರಕಟಿಸಿವೆ .ಅಖಿಲ ಭಾರತ ಎಪ್ಪತ್ತೊಂದನೆಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಇವರ ಪ್ರಬಂಧಕ್ಕೆ ರಾಷ್ಟ್ರೀಯ ಬಹುಮಾನವು ಲಭಿಸಿದೆ .

ಓರ್ವ ಪುತ್ರ ಈರ್ವರು ಪುತ್ರಿಯರು ಸಹಿತ ಬಂಧು ವರ್ಗವನ್ನು ಅಗಲಿದ್ದಾರೆ .

ಸನ್ಮಾನ ಪ್ರಶಸ್ತಿ : ಹವ್ಯಕ ಸಂಘಟನೆಗಳು ಕೊಡಮಾಡುವ ಪ್ರಶಸ್ತಿಯೂ ಸೇರಿದಂತೆ , ಯಕ್ಷತೂಣೀರ ಸಂಪ್ರತಿಷ್ಠಾನದ ಗೌರವ ಸನ್ಮಾನ , ಮಲ್ಲವರ ಶ್ರೀ ಪಂಚಲಿಂಗೇಶ್ವರ ಯಕ್ಷಗಾನ ಕಲಾ ಮಂಡಳಿಯ ವತಿಯಿಂದ ಹುಟ್ಟೂರ ಸನ್ಮಾನ ಹೀಗೆ ಹತ್ತು ಹಲವು ಸನ್ಮಾನ ಪ್ರಶಸ್ತಿಗಳು ಲಭಿಸಿವೆ .

ಹವ್ಯಕ ಮುಖಂಡರಾದ ಬಾಲ್ಯ ಶಂಕರ ಭಟ್ , ದಡ್ಡು ಬಾಲಕೃಷ್ಣ ಭಟ್ ,ಕೊಂಕಣಾಜೆ ರಮೇಶ್ ಭಟ್ , ಡಾ. ಕೃಷ್ಣ ರಾಜ್ ಕೆ, ಹೊಸಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕರುಣಾಕರ ,ಸದಸ್ಯರಾದ ಜಗದೀಶ್ ಹೆಗ್ಡೆ , ಹರಿಪ್ರಸಾದ್ ಪಿ , ಪೆರಾಡಿ ಸೇವಾ ಸಹಕಾರಿ ಬ್ಯಾಂಕಿನ ನಿರ್ದೇಶಕ ಸೀತಾರಾಮ ರೈ , ಉದ್ಯಮಿ ಶಶಿಧರ್ ಅಲ್ಸೆ , ನಿವೃತ್ತ ತಹಶೀಲ್ದಾರ್ ಅಚ್ಯುತ ,ಆಳ್ವಾಸ್ ಸಂಸ್ಥೆಯ ಮೋಹನ್ ಬೋಪಯ್ಯ ಸೇರಿದಂತೆ ಅನೇಕ ಗಣ್ಯರು ಅಂತಿಮ ದರ್ಶನ ಪಡೆದು ನಮನ ಸಲ್ಲಿಸಿದರು.

Gayathri SG

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

4 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

4 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

5 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

5 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

6 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

7 hours ago