News Karnataka Kannada
Tuesday, May 07 2024
ಮಂಗಳೂರು

ನೀರಚಿಲುಮೆ: ರಸ್ತೆಗೆ ಉರುಳಿ ಬಿದ್ದ ಭಾರೀ ಗಾತ್ರದ ಮರ, ಕೆಲಕಾಲ ಸಂಚಾರ ಸ್ಥಗಿತ

Road
Photo Credit : News Kannada

ಬೆಳ್ತಂಗಡಿ : ಉಜಿರೆ- ಧರ್ಮಸ್ಥಳ ರಸ್ತೆಯಲ್ಲಿ ನೀರಚಿಲುಮೆಯ ಸಮೀಪ ಭಾರೀ ಗಾತ್ರದ ಮರವೊಂದು ರಸ್ತೆಗೆ ಉರುಳಿ ಬಿದ್ದು ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆಯುಂಟಾಯಿತು.

ಯಾವುದೇ ಮಳೆ ಗಾಳಿ ಇಲ್ಲದ ಮಧ್ಯಾಹ್ನದ ವೇಳೆ ಮರ ಏಕಾ ಏಕಿ ರಸ್ತೆಗೆ ಉರುಳಿ ಬಿದ್ದಿದೆ. ಈ ಸಮಯದಲ್ಲಿ ರಸ್ತೆಯಲ್ಲಿ ಯಾವುದೇ ವಾಹನಗಳಿರದಿದ್ದ ಕಾರಣ ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ. ಮರ ಬಿದ್ದು ವಿದ್ಯುತ್ ಲೈನಿಗೂ ಹಾನಿಯಾಗಿದೆ. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಮೆಸ್ಕಾಂ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳೀಯರ ಸಹಕಾರದೊಂದಿಗೆ ಮರವನ್ನು ತೆರವು ಗೊಳಿಸಿದರು.

ಅಪಾಯಕಾರಿ ಮರಗಳ ತೆರವಿಗೆ ಒತ್ತಾಯ: ಉಜಿರೆ ಧರ್ಮಸ್ಥಳ ರಾಜ್ಯ ಹೆದ್ದಾರಿಯಲ್ಲಿ ರಸ್ತೆ ಬದಿಯಲ್ಲಿಯೇ ಹಲವಾರು ಅಪಾಯಕಾರಿ ಮರಗಳು ಯಾವುದೇ ಕ್ಷಣದಲ್ಲಿ ರಸ್ತೆಗೆ ಉರುಳುವ ಸ್ಥಿತಿಯಲ್ಲಿ ಇದ್ದು ಈ ಮರಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳುವಂತೆ ಸಾರ್ವಜನಕರು ಒತ್ತಾಯಿಸುತ್ತಿದ್ದಾರೆ.

ಕೆಲ ವರ್ಷದ ಹಿಂದೆ ಇದೇ ರಸ್ತಯಲ್ಲಿ ಮರ ಮುರಿದು ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದು ಇಬ್ಬರು ಮೃತಪಟ್ಟಿದ್ದರು. ಇನ್ನು ಇಂತಹ ಅನಾಹುತಗಳು ನಡೆಯುವ ಮೊದಲೆ ಲೋಕೋಪಯೋಗಿ ಇಲಾಖೆ ಹಾಗೂ ಅರಣ್ಯ ಇಲಾಖೆಯವರು ಎಚ್ಚೆತ್ತುಕೊಂಡು ಮರಗಳ ತೆರವಿಗೆ ಮುಂದಾಗುವಂತೆ ಒತ್ತಾಯಿಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು