News Karnataka Kannada
Sunday, May 05 2024
ಮಂಗಳೂರು

ನೀರುಮಾರ್ಗ ಕಾರು ಅಡ್ಡಗಟ್ಟಿ ಕೊಲೆಗೆ ಯತ್ನ ಐವರು ಆರೋಪಿಗಳ ಬಂಧನ

Arrest 22082021
Photo Credit :

ಮಂಗಳೂರು :ನಗರದ ಹೊರವಲಯದ ನೀರುಮಾರ್ಗ ಸಮೀಪದ ಪಡು ಪೋಸ್ಟ್ ಆಫೀಸ್ ಬಳಿ ಕಾರನ್ನು ಅಡ್ಡಗಟ್ಟಿ ಕಾರಿನಲ್ಲಿದ್ದ ಮೊಹಮ್ಮದ್ ರಿಯಾಜ್ ಎಂಬಾತನ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಗ್ರಾಮಾಂತರ ಠಾಣೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ .ಗಣೇಶ್ ,ಚೇತನ್ , ಕೀರ್ತಿರಾಜ್ ,ಸುವಿತ್ , ಪರೀಕ್ಷಿತ್ ಎಂದು ಗುರುತಿಸಲಾಗಿದೆ .

ಡಿಸೆಂಬರ್ 10 ರಾತ್ರಿ 7ಮೂವತ್ತು ರ ಸುಮಾರಿಗೆ ಮಂಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಬೊಂಡಂತಿಲ ಗ್ರಾಮದ ಎಂಬಲ್ಲಿ ಅಡ್ಯಾರ್ ಪದವು ಗ್ರಾಮದ ನಿವಾಸಿಯಾದ ಮೊಹಮ್ಮದ್ ರಿಯಾಜ್ ತಮ್ಮ ಕಾರಿನಲ್ಲಿ ತಮ್ಮ ಮನೆಯ ಕಡೆಗೆ ತೆರಳುತ್ತಿದ್ದರು .ಈ ವೇಳೆ ಏಳರಿಂದ 8ಜನ ಆರೋಪಿಗಳು ಬೈಕಿನಿಂದ ಕಾರನ್ನು ಅಡ್ಡಗಟ್ಟಿ ಕಾರಿನಲ್ಲಿದ್ದ ಮೊಹಮ್ಮದ್ ರಿಯಾಜ್ ನನ್ನು ಕಾರಿನಿಂದ ಎಳೆದು ಹೊರಕ್ಕೆ ತಂದು ಬ್ಯಾಟ್ ರಾಡ್ ಮತ್ತು ಬಿಯರ್ ಬಾಟಲಿಗಳಿಂದ ತಲೆಗೆ ಕಣ್ಣಿಗೆ ಹೊಡೆದು ಪರಾರಿಯಾಗಿದ್ದರು ಈ ಸಂಬಂಧ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಈ ಹಿನ್ನೆಲೆಯಲ್ಲಿ ತನಿಖೆ ನಡೆಸಿ 5ಜನರನ್ನು ಬಂಧಿಸಿದ್ದು ಉಳಿದವರಿಗಾಗಿ ಶೋಧ ನಡೆಸುತ್ತಿದ್ದಾರೆ .

ಈ ಹಿಂದೆಯೂ ರಿಯಾಝ್ ಹಾಗೂ ಇವರ ಮಧ್ಯೆ ಜಗಳ ನಡೆದಿತ್ತು ಕಮಿಷನರೆಟ್ ವ್ಯಾಪ್ತಿಯ 5ಪೊಲೀಸ್ ಠಾಣೆಗಳಲ್ಲಿ ರಿಯಾಜ್ ವಿರುದ್ಧ ದೂರು ದಾಖಲಾಗಿದೆ ರಿಯಾಸ್ ಅನೈತಿಕ ಚಟುವಟಿಕೆ ನಡೆಸುತ್ತಿದ್ದ ಎಂಬ ಮಾಹಿತಿ ಇದೆ ವೈಶ್ಯ ವಟಿಕೆ ನಡೆಸಿದ ಬಗ್ಗೆ ದೂರು ದಾಖಲಾಗಿತ್ತು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು