Categories: ಮಂಗಳೂರು

‘ನುಡಿ ಸಾಮ್ರಾಜ್ಯದಲ್ಲಿ ಸ್ವರಾಜ್ಯ’ ವೇದಿಕೆಯಲ್ಲಿ ಸಾಂಸ್ಕೃತಿಕ ವೈಭವ

ಉಜಿರೆ ಮಾ.೧೯: ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಆಯೋಜಿಸಿರುವ ೩ ನೇ ರಾಜ್ಯ ಅಧಿವೇಶನ ‘ನುಡಿ ಸಾಮ್ರಾಜ್ಯದಲ್ಲಿ ಸ್ವರಾಜ್ಯ’ ಕಾರ್ಯಕ್ರಮದಲ್ಲಿ ಶನಿವಾರ ಸಂಜೆ ನಡೆದ ಸಾಂಸ್ಕೃತಿಕ ಕಲಾ ಪ್ರದರ್ಶನವು ಕಲಾರಸಿಕರ ಮನಸೊರೆಗೊಳಿಸಿತು.

ಸಂಜೆಯ ರಂಗನ್ನು ಹೆಚ್ಚಿಸಿತು. ಸುಮಾರು ಮೂರು ಗಂಟೆಗಳ ಕಾಲ ನಡೆದ ವಿವಿಧ ಸಾಂಸ್ಕೃತಿಕ ಮನೋರಂಜನಾ ಕಾರ್ಯಕ್ರಮಗಳು ನೆರೆದಿದ್ದ ಪ್ರೇಕ್ಷಕರನ್ನು ರಂಜಿಸುವ ಜೊತೆಗೆ ವೀಕ್ಷಕರ ಶಿಳ್ಳೆ, ಚಪ್ಪಾಳೆ ಹಾಗೂ ಉತ್ಸಾಹಭರಿತ ಪ್ರೋತ್ಸಾಹಕ್ಕೆ ಸಾಕ್ಷಿಯಾಯಿತು. ಶಾಸ್ತಿçÃಯ ನೃತ್ಯಪ್ರಕಾರವಾದ ಭರತನಾಟ್ಯ, ಯಕ್ಷಗಾನ ಸೇರಿದಂತೆ ದೇಶದ ವಿವಿಧ ಬುಡಕಟ್ಟು ಜನಪದ ಕಲಾಪ್ರಕಾರಗಳಾದ ಕೊಡವ ಸುಗ್ಗಿ ಕುಣಿತ ಮತ್ತು ಹುತ್ತರಿ ಕೋಲಾಟ, ರಾಜಸ್ಥಾನದ ಬಂಜಾರ ನೃತ್ಯ, ಪಂಜಾಬಿನ ಬಾಂಗ್ಡಾ, ಮಣಿಪುರಿ ಸ್ಟೀಕ್ ಡ್ಯಾನ್ಸ್, ಒರಿಸ್ಸಾದ ಗೋಟಿಪೊವಾ ಸೇರಿದಂತೆ ಹಲವಾರು ನೃತ್ಯವೈವಿಧ್ಯಗಳನ್ನು ಪ್ರದರ್ಶಿಸಲಾಯಿತು.
ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ರಾಜ್ಯ ಅಧಿವೇಶನದ ಸ್ವಾಗತ ಸಮಿತಿಯ ಅಧ್ಯಕ್ಷರಾದ ಡಾ.ಎಂ ಮೋಹನ್ ಆಳ್ವ ಕಾರ್ಯಕ್ರಮವನ್ನು ಉದ್ಘಾಟಿಸುವ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕರ್ನಾಟಕದ ವಿವಿಧ ಕಲಾ ತಂಡಗಳು ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ೨೫೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ದೇಶದ ಕಲಾಪರಂಪರೆಯನ್ನು ಹಾಗೂ ಸಾಂಸ್ಕೃತಿಕ ವೈವಿಧ್ಯತೆಯನ್ನು ಬಿಂಬಿಸುವ ಅಭೂತಪೂರ್ವ ಕಲಾಪ್ರದರ್ಶನ ನೀಡಿದರು.

ಸಾಂಸ್ಕೃತಿಕ ಕಾರ್ಯಕ್ರಮವು ಸಂಸ್ಕೃತ ಸಿರಿ ತಂಡದ ಗಾಯನ ಗೀತೆಯ ಮೂಲಕ ಶುಭಾರಂಭಗೊAಡಿತು. ನಂತರ ವಿದ್ಯಾಶ್ರೀ ಮತ್ತು ಬಳಗದ ವತಿಯಿಂದ ತುಳುನಾಡ ಸಿರಿ ಚಾವಡಿಯನ್ನು ಬಿಂಬಿಸುವ ಜಾನಪದ ನೃತ್ಯ ಪ್ರೇಕ್ಷಕರ ಕಣ್ಮನ ಸೆಳೆಯಿತು. ಹಳ್ಳಿಯ ಸೊಗಡಿನ ವೇಷಭೂಷಣಗಳಿಂದ ಕೂಡಿದ ಮಕ್ಕಳ ಚೈತನ್ಯ ಪೂರ್ಣ ನೃತ್ಯ ಎಲ್ಲರ ಗಮನ ಸೆಳೆಯಿತು. ಗಾನಯಾನ ತಂಡದಿAದ ಪ್ರದರ್ಶನಗೊಂಡ  ದೇವಿ ಮಹಾತ್ಮೆಯ ಭರತನಾಟ್ಯವು  ಇಡೀ ಸಭಾಂಗಣಕ್ಕೆ ದೈವಿಕತೆ ಕಳೆ ತಂದೊಡ್ಡಿತು.
ಕೊಡಗು ಗೌಡ ಕ್ಷೇಮಾಭಿವೃದ್ಧಿ ಸಂಘ, ಹೂಟಗಳ್ಳಿ ಮೈಸೂರು ತಂಡದ ಪುರುಷರ ಕೋಲಾಟವು ಕೊಡಗಿನ ಹುತ್ತರಿ ಹಬ್ಬದ ಆಚರಣೆಯ ಪರಿಯನ್ನು ನೃತ್ಯರೂಪಕವಾಗಿ ಪ್ರದರ್ಶಿಸಿದರು. ಜೊತೆಗೆ ಕೊಡಗಿನ ಮಹಿಳೆಯರ ಅರೆ ಭಾಷೆಯ ಸುಗ್ಗಿ ಕುಣಿತದ ಸಂಭ್ರಮವನ್ನು ಪ್ರೇಕ್ಷಕರ ಕಣ್ಮನ ತಣಿಸಿತು. ಉತ್ತರ ಕರ್ನಾಟಕದ ಜನಪದ ಸಾಹಿತ್ಯವನ್ನು ಬಿಂಬಿಸುವ ಹಾಡುಗಳನ್ನು ಬಾಗಲಕೋಟೆಯ ಪುಟ್ಟರಾಜ ಗಾಯನ ತಂಡದಿAದ ನಡೆಸಿಕೊಡಲಾಯಿತು.

ಗಮನಸೆಳೆದ ಕೀಚಕ ವಧೆ ಪ್ರಸಂಗ: ಭಿಡೆ ಸಹೋದರಿಯರು ಮತ್ತು ತಂಡದಿAದ ಕುಮಾರವ್ಯಾಸ ಭಾರತ ಕೃತಿಯಿಂದ ಆಯ್ದ ಮಹಾಭಾರತದ ಕೀಚಕವಧೆ ಪ್ರಸಂಗವನ್ನು ನೃತ್ಯರೂಪಕದಲ್ಲಿ ಪ್ರದರ್ಶಿಸಲಾಯಿತು. ಅದ್ಭುತ ನಟನೆ ಮತ್ತು ನೃತ್ಯದ ಮೂಲಕ ಈ ಪ್ರಸಂಗವನ್ನು ತಂಡ ವಿಶೇಷವಾಗಿ ತೆರೆದಿಟ್ಟಿತು. ಸಮಾಜದಲ್ಲಿ ಸ್ತ್ರೀ ಶೋಷಣೆ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯದ ವಿರುದ್ಧ ಧ್ವನಿಯೆತ್ತುವ ಸಾಹಸಗಾಥೆಯು ಪ್ರೇಕ್ಷಕರ ಮನಸೆಳೆಯಿತು.

ವೇದಿಕೆಯ ರಂಗು ಹೆಚ್ಚಿಸಿದ ಆಳ್ವಾಸ್ ಸಾಂಸ್ಕೃತಿಕ ವೈಭವ: ಆಳ್ವಾಸ್ ಸಾಂಸ್ಕೃತಿಕ ವೈಭವ ತಂಡವು ಭಾರತ ದೇಶದಲ್ಲಿ ವಿವಿಧತೆಯಲ್ಲಿ ಏಕತೆಯನ್ನು ಸಾರುವ ಸಂದೇಶದ ಮೂಲಕ ಭಾರತದ ಎಲ್ಲಾ ರಾಜ್ಯಗಳ ಸಂಸ್ಕೃತಿಯನ್ನು ಬಿಂಬಿಸುವ ಕಾರ್ಯಕ್ರಮವನ್ನು ವರ್ಣಮಯವಾಗಿ ಪ್ರದರ್ಶಿಸಿತು.

ಶ್ರೀರಾಮ ಪಟ್ಟಾಭಿಷೇಕ ಯಕ್ಷಗಾನವು ವಿಶೇಷತೆಯಿಂದ ಕೂಡಿದ್ದು ಜನರನ್ನು ಮೂಕಪ್ರೇಕ್ಷಕರಾಗಿ ಮಾಡಿತು. ರಾಜಸ್ಥಾನ ಮೂಲದ ಲಂಬಾಣಿ ಜನಾಂಗದ ಬಂಜಾರ ನೃತ್ಯ ಪ್ರದರ್ಶಿಸಿದ ತಂಡವು ಸಭಾಂಗಣಕ್ಕೆ ಸಂಭ್ರಮದ ಮೆರುಗು ನೀಡಿತು. ಮಣಿಪುರದ ಪ್ರಸಿದ್ಧ ಸ್ಟಿಕ್ ಡ್ಯಾನ್ಸ್ ನೃತ್ಯವು ಜನರ ಕುತೂಹಲವನ್ನು ಕೆರಳಿಸಿತು. ಕಲಾವಿದರ ಕೈಚಳಕವನ್ನೇ ಅವರಲಂಭಿಸಿರುವ ನೃತ್ಯ ಪ್ರಕಾರ ಇದಾಗಿದ್ದು, ನೋಡುಗರನ್ನು ಮಂತ್ರಮುಗ್ಧಗೊಳಿಸಿತು.

ಮಧ್ಯಪ್ರದೇಶದಲ್ಲಿ ಜನಜನಿತವಾದ ಮಲ್ಲಕಂಬದ ಪ್ರದರ್ಶನವನ್ನು ವಿದ್ಯಾರ್ಥಿಗಳು ಅಚ್ಚುಕಟ್ಟಾಗಿ ತೋರಿಸಿಕೊಡುವ ಮೂಲಕ ತಮ್ಮಲ್ಲಿನ ಸಾಮರ್ಥ್ಯ ಹಾಗೂ ಸಾಹಸವನ್ನು ಪ್ರದರ್ಶಿಸಿದರು. ಪಂಜಾಬಿನಲ್ಲಿ ಪ್ರಸಿದ್ಧವಾದ ‘ಬಾಂಗ್ರ’ ನೃತ್ಯವು ವೀಕ್ಷಕರನ್ನು ಕುಳಿದು ಕುಪ್ಪಳಿಸುವಂತೆ ಮಾಡಿತು. ಒರಿಸ್ಸಾದ ಪುರಿ ಜಗನ್ನಾಥನ ಆರಾಧನೆಯ ಪ್ರಸಿದ್ಧ ಗೋಟಿಪುವಾ ನೃತ್ಯ ಪ್ರಕಾರವನ್ನು ಬಾಲಕರು ಬಾಲಕಿಯರ ವೇಷದಲ್ಲಿ ನರ್ತಿಸುವ ಮೂಲಕ ವೇದಿಕೆಗೆ ಹೊಸ ಮೆರುಗು ನೀಡಿದರು. ತದನಂತರ ಪಶ್ಚಿಮ ಬಂಗಾಳದ ಪ್ರಸಿದ್ಧ ಪುರುಲಿಯಾ ಚಾವು ನೃತ್ಯ ಪ್ರೇಕ್ಷಕರಲ್ಲಿ ದಿಗ್ಭçಮೆ ಮೂಡಿಸುವಲ್ಲಿ ಯಶಸ್ವಿಯಾಯಿತು. ಏಳು ಸಿಂಹಗಳು ಸೇರಿ ಒಂದು ಕಾಡುಕೋಣ (ಕಾಟಿ)ವನ್ನು ಬೇಟೆಯಾಡುವ ದೃಶ್ಯ ವೈಭವ ಮಹೀಷಾಸುರ ಮರ್ಧಿನಿ ಪ್ರಸಂಗವನ್ನು ನೆನಪಿಸಿತು. ಒಟ್ಟಿನಲ್ಲಿ ನುಡಿಸಾಮ್ಯಾಜ್ಯದಲ್ಲಿ ಸ್ವರಾಜ್ಯ ಕಾರ್ಯಕ್ರಮದಲ್ಲಿ ಮೂಡಿಬಂದ ಈ ಕಲಾ ವೈವಿಧ್ಯತೆ ಸಾಹಿತ್ಯಾಸಕ್ತರಿಗೆ ರಸದೌದಣ ನೀಡಿದ್ದಂತೂ ನಿಜ. ಜ್ಯೋತಿ ಭಟ್, ಹರಿನಾಥ್ ವಿ,ಎ ವಿನಿತಾ, ಪತ್ರಿಕೋದ್ಯಮ ವಿದ್ಯಾರ್ಥಿಗಳು ಎಸ್‌ಡಿಎಂ ಕಾಲೇಜು, ಉಜಿರೆ

Sneha Gowda

Recent Posts

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

1 hour ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

1 hour ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

2 hours ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

2 hours ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

2 hours ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

3 hours ago