ಬೆಳ್ತಂಗಡಿ : ನೆರಿಯ ಗ್ರಾಮದ ಕುಲೆನಾಡಿ ಎಂಬಲ್ಲಿ ಮನೆಯೊಂದರಿಂದ ಎರಡು ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ಕಳ್ಳತನ ಮಾಡಿದ ಘಟನೆ ನಡೆದಿದ್ದು ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇಲ್ಲಿನ ನಿವಾಸಿ ಚಂದ್ರಾವತಿ ಅವರು ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದು ತನ್ನ ಮನೆಯಲ್ಲಿ ಇರಿಸಲಾಗಿದ್ದ 65 ಸಾವಿರ ನಗದು ಹಾಗೂ 44ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳ್ಳತನ ಮಾಡಿರುವುದಾಗಿ. ದೂರು ನೀಡಿದ್ದಾರೆ.
ಈ ಬಗ್ಗೆ ಅವರು ನೀಡಿರುವ ದೂರಿನಲ್ಲಿ ತಮ್ಮ ಭಾವನ ಮಗ ಸಚಿನ್ ಅವರು ಮನೆಗೆ ಬಂದು ಹೋಗಿದ್ದು ಆತನೇ ಕಳ್ಳತನ ಮಾಡಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿ ದೂರು ನೀಡಿದ್ದಾರೆ. ಇದೀಗ ಧರ್ಮಸ್ಥಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.