ನೇತ್ರಾವತಿ ನದಿಯುದ್ದಕ್ಕೂ 40 ಜಾಗೃತಿ ಸೂಚನಾ ಫಲಕಗಳ ಸ್ಥಾಪನೆ

ಮಂಗಳೂರು, ಜೂ.8: ಎಪಿಡಿ ಪ್ರತಿಷ್ಠಾನ ಮತ್ತು ಹಸಿರು ದಳವು ಜೂನ್ 8 ರಂದು ವಿಶ್ವ ಸಾಗರ ದಿನಾಚರಣೆಯ ಅಂಗವಾಗಿ ಉಳ್ಳಾಲಕ್ಕೆ ಹೋಗುವ ಮಾರ್ಗದಲ್ಲಿ ನೇತ್ರಾವತಿ ಸೇತುವೆಯ ಮೇಲೆ ‘ಪುನರುಜ್ಜೀವನ – ಸಾಗರಕ್ಕಾಗಿ ಸಾಮೂಹಿಕ ಕ್ರಿಯೆ’ ಎಂಬ ಶೀರ್ಷಿಕೆಯಡಿ ವಿಶಿಷ್ಟ ಯೋಜನೆಯೊಂದಿಗೆ ಆಚರಿಸಿತು. ಯೋಜನೆಯ ಭಾಗವಾಗಿ, ನೇತ್ರಾವತಿ ಸೇತುವೆಯ ಉದ್ದಕ್ಕೂ 40 ಸೂಚನಾ ಫಲಕಗಳನ್ನು ಅಳವಡಿಸಲಾಗಿದ್ದು, ತ್ಯಾಜ್ಯದಿಂದ ನದಿಯನ್ನು ಕಲುಷಿತಗೊಳಿಸುವುದರ ವಿರುದ್ಧ ಜನಜಾಗೃತಿ ಮೂಡಿಸಲಾಗಿದೆ.

ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ ಅವರು ಜಾಗೃತಿ ಫಲಕಗಳನ್ನು ಅನಾವರಣಗೊಳಿಸಿ ಎಪಿಡಿ ಪ್ರತಿಷ್ಠಾನ ಮತ್ತು ಹಸಿರು ದಳದ ಪ್ರಯತ್ನವನ್ನು ಅಭಿನಂದಿಸಿದರು. “ಕಳೆದ ವರ್ಷದಲ್ಲಿ ಎಪಿಡಿ ಪ್ರತಿಷ್ಠಾನ ಮತ್ತು ಹಸಿರು ದಳವು ಈ ಪ್ರದೇಶವನ್ನು ಸ್ವಚ್ಛಗೊಳಿಸಿದೆ ಮತ್ತು ತ್ಯಾಜ್ಯವನ್ನು ಸಾಗರಕ್ಕೆ ಸೇರುವುದನ್ನು ನಿಲ್ಲಿಸಿದೆ. ನದಿಯನ್ನು ಸ್ವಚ್ಛವಾಗಿಡಲು ಶ್ರಮಿಸಿದ ಎರಡು ಸಂಸ್ಥೆಗಳು, ವಿದ್ಯಾರ್ಥಿಗಳು, ಸ್ವಯಂಸೇವಕರು ಮತ್ತು ಇತರರೆಲ್ಲರ ಪ್ರಯತ್ನವನ್ನು ನಾನು ಪ್ರಶಂಸಿಸುತ್ತೇನೆ,” ಎಂದು ಅವರು ಹೇಳಿದರು. ನದಿ ಸ್ವಚ್ಛತೆ ಕಾಪಾಡುವಂತೆ ನಾಗರಿಕರಲ್ಲಿ ಮನವಿ ಮಾಡಿದ ಅವರು, ನಿಯಮ ಉಲ್ಲಂಘಿಸುವವರಿಗೆ ರೂ. 10,000/- ದಂಡ ವಿಧಿಸಲಾಗುವುದು. ಆತ್ಮಹತ್ಯೆ ತಡೆಯಲು ಸೇತುವೆಗೆ ಬೇಲಿ ಹಾಕುವುದು ಮತ್ತು ಸಿಸಿಟಿವಿ ಅಳವಡಿಸಿರುವುದು ನದಿಯ ಮಾಲಿನ್ಯವನ್ನು ಕಡಿಮೆ ಮಾಡಲು ಕೂಡ ಸಹಾಯ ಮಾಡಿದೆ ಎಂದು ಅವರು ಹೇಳಿದರು. ಶೀಘ್ರದಲ್ಲೇ ಹೆಚ್ಚಿನ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದು ಎಂದರು.

ವಲಯ ಆಯುಕ್ತ ಶಬರಿನಾಥ ರೈ, ಪರಿಸರ ಎಂಜಿನಿಯರ್ ದೀಪ್ತಿ, ಸ್ಥಳೀಯ ವಾರ್ಡ್ ಕಾರ್ಪೊರೇಟರ್ ವೀಣಾ ಮಂಗಳಾ, ಪರಿಸರ ಹೋರಾಟಗಾರ ಜೀತ್ ಮಿಲನ್, ಜಮಾತೆ ಇಸ್ಲಾಮಿ ಹಿಂದ್ ನ ಕರೀಂ, ಪರಿಸರವಾದಿ ರಿಯಾಝ್, ನದಿ ಪರಿಸರ ಸಂರಕ್ಷಣಾ ಸಮಿತಿಯ ಉಮ್ಮರ್ ಕುಂಞ ಆಲೇಕಾರ, ರೋಶನಿ ಹಳೆವಿದ್ಯಾರ್ಥಿ ಸಂಘದ ಕಿಶೋರ್ ಅತ್ತಾವರ, ಆರೋಗ್ಯಾಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು, ಸ್ಕೂಲ್ ಆಫ್ ಸೋಶಿಯಲ್ ವರ್ಕ್, ರೋಶನಿ ನಿಲಯ ಮತ್ತು ಸಂತ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿಗಳು ಮತ್ತಿತರು ಉಪಸ್ಥಿತರಿದ್ದರು.

2021 ರಲ್ಲಿ ಎಪಿಡಿ ಪ್ರತಿಷ್ಠಾನ ಮತ್ತು ಹಸಿರು ದಳವು ಮಂಗಳೂರು ಮಹಾನಗರಪಾಲಿಕೆ ಮತ್ತು ಮಂಗಳೂರು ನಗರ ಪೊಲೀಸರ ಸಹಯೋಗದಲ್ಲಿ ನೇತ್ರಾವತಿ ನದಿಯ ದಡದಿಂದ ತ್ಯಾಜ್ಯವನ್ನು ಸ್ವಚ್ಛಗೊಳಿಸಲು ‘ನಮ್ಮ ನೇತ್ರಾವತಿ, ನಮ್ಮ ಜವಾಬ್ದಾರಿ’ ಎಂಬ ಅಭಿಯಾನದಲ್ಲಿ ಹಲವಾರು ತಿಂಗಳುಗಳ ಕಾಲ ನಡೆಸಿತ್ತು. ಈ ಅಭಿಯಾನದ ಫಲವಾಗಿ ನದಿಯ ದಡದಿಂದ ಸುಮಾರು 33 ಟನ್ ತ್ಯಾಜ್ಯವನ್ನು ತೆರವುಗೊಳಿಸಲಾಯಿತು.

ಈ ಅಭಿಯಾನದಲ್ಲಿ ಭಾಗವಹಿಸಿದ ಎಲ್ಲ ಸ್ವಯಂಸೇವಕರಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ನಾಗರಾಜ್ ಅಂಚನ್ ಕಾರ್ಯಕ್ರಮ ನಿರೂಪಿಸಿದರು. ರೂಪಕಲಾ ಸ್ವಾಗತಿಸಿ, ಗೀತಾ ಸೂರ್ಯ ವಂದಿಸಿದರು.

Gayathri SG

Recent Posts

ಮಲತಂದೆಯಿಂದಲೇ ಬಾಲಿವುಡ್ ನಟಿ ಕೊಲೆ; ಕೋರ್ಟ್

ಬಾಲಿವುಡ್ ನಟಿ ಲೈಲಾ ಖಾನ್ ಹತ್ಯೆ ಪ್ರಕರಣದಲ್ಲಿ ಮಲತಂದೆ ಪರ್ವೀನ್ ತಾಕ್ ದೋಷಿ ಎಂದು ಮುಂಬೈ ಸೆಷನ್ ಕೋರ್ಟ್ ಘಟನೆ…

9 mins ago

ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಮೈಕ್ರೊಚಿಪ್‌ ಅಳವಡಿಕೆ ಕಡ್ಡಾಯ

ಅನ್ಯ ದೇಶಗಳಿಂದ ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಕನಿಷ್ಠ 6 ತಿಂಗಳಾಗಿರಬೇಕು ಮತ್ತು ರೇಬಿಸ್‌ ತಡೆಗಟ್ಟುವ ಲಸಿಕೆ ಹಾಕಿಸಿರುವ ಮಾಹಿತಿ ಇರುವ…

12 mins ago

ಶಾರ್ಟ್ ಸರ್ಕ್ಯೂಟ್​ನಿಂದ ಸಿನಿಮಾ ಶೂಟಿಂಗ್ ಸೆಟ್​ ನಲ್ಲಿ ಬೆಂಕಿ: ನಾಲ್ಕು ಕೋಟಿ ನಷ್ಟ

ಲುಗು  ಜನಪ್ರಿಯ ನಟ ನಂದಮೂರಿ ಕಲ್ಯಾಣ್ ರಾಮ್  ನಟಿಸುತ್ತಿರುವ ಹೊಸ ಸಿನಿಮಾದ ಚಿತ್ರೀಕರಣ ನಡೆಸಲಾಗುತ್ತಿದ್ದ ಸೆಟ್​ಗೆ ಶಾರ್ಟ್ ಸರ್ಕ್ಯೂಟ್​ನಿಂದಾಗಿ ಬೆಂಕಿ…

13 mins ago

ಅರವಿಂದ್ ಕೇಜ್ರಿವಾಲ್ ಗೆ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಏಳು ಹಂತದ ಲೋಕಸಭೆ ಚುನಾವಣೆಯ ಅಂತಿಮ ಹಂತದ ಮತದಾನವಾದ ಜೂನ್ 1ರವರೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ…

35 mins ago

ಚಾಮರಾಜನಗರದಲ್ಲಿ ಉಡ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ

ಜಿಲ್ಲೆಯಲ್ಲಿ ವನ್ಯ ಪ್ರಾಣಿಗಳನ್ನು ಜೀವಂತವಾಗಿ ಸೆರೆ ಹಿಡಿದು ಸಾಗಾಟ ಮಾಡುವ ಜಾಲ ಕಾರ್ಯಾಚರಿಸುತ್ತಿರುವ ಶಂಕೆ ವ್ಯಕ್ತವಾಗಿದೆ. ಪ್ರಾಣಿಗಳನ್ನು ಬೇಟೆಯಾಡಿ ಮಾಂಸ…

46 mins ago

ಮೈಸೂರಿನಲ್ಲಿ ಪರಶುರಾಮ ಜಯಂತಿ ಕಾರ್ಯಕ್ರಮ

ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಪರಶುರಾಮ‌ ಜಯಂತಿ ಅಂಗವಾಗಿ ಚಾಮರಾಜಪುರಂನಲ್ಲಿರುವ ಬ್ರಾಹ್ಮಣ ಯುವ ವೇದಿಕೆ ಕಛೇರಿಯಲ್ಲಿ ಪರಶುರಾಮ ಜಯಂತಿಯನ್ನು…

56 mins ago