ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಯಕ್ಷಗಾನ ಕಲಾವಿದರ (ವೃತ್ತಿಪರ/ಹವ್ಯಾಸಿ/ಮಹಿಳಾ) ಮಕ್ಕ ಳಿಂದ ೨೦೨೨ ನೇ ಸಾಲಿನ ವಿದ್ಯಾರ್ಥಿ ವೇತನಕ್ಕೆ ಅರ್ಜಿಗಳನ್ನು ಆಹ್ವಾನಿ ಸಲಾಗಿದೆ.
ಈ ಬಾರಿ ಒಂದನೇ ತರಗತಿ ಯಿಂದ ಮೊದಲುಗೊಂಡು ೬೦% ಗಿಂತ ಮೇಲ್ಪಟ್ಟು ಅಂಕಗಳನ್ನು ಗಳಿಸಿದ ಎಲ್ಲಾ ಯಕ್ಷಗಾನ ಕಲಾವಿದರ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುವುದು.
ಅರ್ಜಿ ನಮೂನೆಯನ್ನು ಅಂಕ ಪಟ್ಟಿಯ ಪ್ರತಿಯೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಮಂಗಳೂರಿನ ಎಂ.ಜಿ.ರೋಡಿನ ಅಂಪಾಯರ್ ಮಾಲ್ನ ೨ನೇ ಆಂತಸ್ತಿನಲ್ಲಿರುವ ಟ್ರಸ್ಟಿನ ಕೋಶಾಧಿಕಾರಿಯಾಗಿರುವ ಸಿ.ಎ. ಸುದೇಶ್ ಕುಮಾರ್ ರೈಯವರ ಕಛೇರಿಗೆ ಮುಖತಃ ಅಥವಾ ಅಂಚೆ ಮೂಲಕ ತಲುಪಿಸಲು ಕೋರಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ೨೫-೫-೨೦೨೨. ಹೆಚ್ಚಿನ ವಿವರಗಳಿಗಾಗಿ ಡಾ. ಮನು ರಾವ್ ಉಪಾಧ್ಯಕ್ಷರು ( ೯೮೪೪೦೮೭೬೬೪) ಇವರನ್ನು ಸಂಪರ್ಕಿಸಬಹುದು.
ನಿಯಮಾವಳಿಗಳು: ಅರ್ಜಿ ಸಲ್ಲಿಸಲು ಕನಿಷ್ಠ ೬೦% ಅಂಕಗಳಿರ ಬೇಕು. ವಿದ್ಯಾರ್ಥಿಯ ಅಂಕಪಟ್ಟಿಯ ಪ್ರತಿ ಹಾಗೂ ಬ್ಯಾಂಕ್ ಉಳಿತಾಯ ಖಾತೆಯ ವಿವರಗಳಿರುವ ಪಾಸ್ಬುಕ್ ಪ್ರಥಮ ಪುಟದ ಪ್ರತಿಗಳನ್ನು ಲಗತ್ತಿಸಬೇಕು. ೨೦೨೧-೨೦೨೨ ಶೈಕ್ಷಣಿಕ ವರ್ಷದ ಪರೀಕ್ಷೆಯ ನಂತರ ಪ್ರಕಟ ಗೊಂಡ ಫಲಿತಾಂಶವನ್ನು ನಮೂದಿ ಸಬೇಕಾಗಿದೆ.
ವಿದ್ಯಾರ್ಥಿವೇತನವನ್ನು ಮೇ ೨೫ ಭಾನುವಾರ ಅಡ್ಯಾರ್ ಗಾರ್ಡನ್ನಲ್ಲಿ ನಡೆಯುವ ಪಟ್ಲ ಸಂಭ್ರಮ ೨೦೨೨ ಕಾರ್ಯಕ್ರಮದಲ್ಲಿ ಖುದ್ದಾಗಿ ಬಂದು ಪಡೆಯಬೇಕು. ಆಯ್ಕೆ ಸಮಿತಿಯ ತೀರ್ಮಾನವೇ ಅಂತಿಮದ್ದಾಗಿರುತ್ತದೆ ಎಂದು ಪಟ್ಲ ಫೌಂಡೇಶನ್ ಟ್ರಸ್ಟ್ನ ಪ್ರಕಟನೆ ತಿಳಿಸಿದೆ.
ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ನನ್ನು ಪೊಲೀಸರು ಬಂಧಿಸಿದ್ದಾರೆ.…
ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್ಎಸ್ಎಲ್ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…
ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…
ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…
ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್ನಲ್ಲಿ ಸನ್ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್ಗೂ ಮುನ್ನವೇ…
ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್ಗಳ…