News Karnataka Kannada
Monday, April 29 2024
ಮಂಗಳೂರು

ಪತ್ರಿಕಾ ಭವನದ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ

Clean India
Photo Credit :
 ಮಂಗಳೂರು:ಕೇಂದ್ರ ಸರಕಾರದ ಯುವಜನ ಹಾಗೂ ಕ್ರೀಡಾ ಇಲಾಖೆ ವತಿಯಿಂದ ಕ್ಲೀನ್  ಇಂಡಿಯಾ ಕಾರ್ಯ ಕ್ರಮದ ಅಂಗವಾಗಿ ರವಿವಾರ ಮಂಗಳೂರು ಪತ್ರಿಕಾ ಭವನ ಸುತ್ತ ಮುತ್ತಲ  ಪರಿಸರದಲ್ಲಿ ಸ್ವಚ್ಛತಾ  ಕಾರ್ಯಕ್ರಮ ನಡೆಯಿತು.
ದಕ್ಷಿಣ ಕನ್ನಡ ಜಿಲ್ಲಾಡಳಿತ ,ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್,ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆ,, ನೆಹರೂ  ಯುವ ಕೇಂದ್ರ,ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ,ಮಂಗಳೂರು ಪ್ರೆಸ್ ಕ್ಲಬ್ ಹಾಗೂ ಪತ್ರಿಕಾ ಭವನ ಟ್ರಸ್ಟ್ ಸಹ ಭಾಗಿತ್ವದಲ್ಲಿ  ಈ ಕಾರ್ಯಕ್ರಮ ನಡೆಯಿತು.
ಸ್ವಚ್ಛತಾ ಕಾರ್ಯಕ್ರಮದಲ್ಲಿ ದ.ಕ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀ ನಿವಾಸ ನಾಯಕ್ ಇಂದಾಜೆ ಭಾಗವಹಿಸಿ ಮಾತನಾಡುತ್ತಾ, ದ.ಕ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಜಿಲ್ಲೆಯ ವಿವಿಧ ಕಡೆ ಪ್ಲಾಸ್ಟಿಕ್ ವಿರುದ್ಧ ಜಾಗೃತಿ ,ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಂಡಿದೆ.ಗ್ರಾಮೀಣ ಭಾಗದಲ್ಲೂ ವಿವಿಧ ಸಂಘ ಸಂಸ್ಥೆಗಳು ಸಹಕಾರ ನೀಡಿವೆ,ಸಾರ್ವಜನಿಕರು ಈ ಜಾಗೃತಿ ಕಾರ್ಯಕ್ರಮದಲ್ಲಿ ಕೈ ಜೋಡಿಸಿದ್ದಾರೆ.ಈ ದಿನ ನೆಹರು ಯುವ ಕೇಂದ್ರದ ಸಹಕಾರದೊಂದಿಗೆ ಪತ್ರಿಕಾ ಭವನದ ವಠಾರದಲ್ಲಿ ಹಮ್ಮಿಕೊಂಡ ಸ್ವಚ್ಛತಾ ಕಾರ್ಯಕ್ರಮದಲ್ಲಿ ಸಹಕಾರ ನೀಡಿ ಪಾಲ್ಗೊಂಡ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.
ಸ್ವಚ್ಛತಾ ಕಾರ್ಯಕ್ರಮ ದಲ್ಲಿ ದ.ಕ ಜಿಲ್ಲಾ ವಾರ್ತಾಧಿಕಾರಿ ರವಿರಾಜ್ ,ಮಂಗಳೂ ರು ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ನೆಹರು ಯುವ ಕೇಂದ್ರದ ಜಿಲ್ಲಾ ಯುವಜನಾ ಧಿಕಾರಿ ರಘುವೀರ್ ಸೂಟರ್ ಪೇಟೆ, ಸಾಮಾಜಿಕ ಕಾರ್ಯಕರ್ತ ಜೀತ್ ಮಿಲನ್, ಪ್ರೆಸ್ ಕ್ಲಬ್ ಕಾರ್ಯದರ್ಶಿ ಆರಿಫ್ ಪಡುಬಿದ್ರೆ, ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪರಾಜ್.ಬಿ.ಎನ್,ದ.ಕ ಜಿಲ್ಲಾಪತ್ರಕರ್ತರ ಗೃಹ ನಿರ್ಮಾಣ ಸಹಕಾರಿ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ನಿರ್ದೇಶಕ ಸುಖ್ ಪಾಲ್ ಪೊಳಲಿ, ಪತ್ರಕರ್ತರಾದ ರಾಘವ,ರಾಜೇಶ್ ಮೊದಲಾದ ವರು ಭಾಗವಹಿಸಿದ್ದರು.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು