News Karnataka Kannada
Sunday, April 28 2024
ಮಂಗಳೂರು

ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಗೊಂಡ ಮಹಾಲಿಂಗ ನಾಯ್ಕ ಮನೆಗೆ ಬಂಟ್ವಾಳ ತಹಶೀಲ್ದಾರರ ನಿಯೋಗ ಭೇಟಿ

Mahalinga Naik
Photo Credit : News Kannada

ಬಂಟ್ವಾಳ: ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಗೊಂಡ ಕೇಪು ಗ್ರಾಮದ ಅಮೈ ನಿವಾಸಿ ಮಹಾಲಿಂಗ ನಾಯ್ಕ ಅವರ ಮನೆಗೆ ಬಂಟ್ವಾಳ ತಹಶೀಲ್ದಾರರ ನಿಯೋಗ ಭೇಟಿ ನೀಡಿ ಸನ್ಮಾನಿಸಲಾಯಿತು.

ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್ ಆರ್ ಅವರು ತಮ್ಮ ಸಿಬ್ಬಂದಿಗಳ ಜತೆ ಭೇಟಿ ನೀಡಿದ್ದು, ಮಹಾಲಿಂಗ ನಾಯ್ಕ ಅವರು ಕೊರೆದ ಸುರಂಗ ಮತ್ತು ತೋಟಗಳನ್ನು ವೀಕ್ಷಿಸಿ, ಮೆಚ್ಚುಗೆ ವ್ಯಕ್ತಪಡಿಸಿದರು. ಬಳಿಕ ಮಹಾಲಿಂಗ ನಾಯ್ಕ ಅವರನ್ನು ಶಾಲು ಹೊದಿಸಿ ಸನ್ಮಾನಿಸಿದರು.
ದ.ಕ ಜಿಲ್ಲಾಡಳಿತ ಮತ್ತು ತಾಲೂಕು ವತಿಯಿಂದ  ನಡೆಸಿದ  ಗೌರವಾರ್ಪಣೆ  ತುಂಬನೇ ಖುಷಿ ತಂದಿದ್ದು, ಮತ್ತಷ್ಟು ಸಾಧನೆ ಮಾಡಲು ಪ್ರೇರಣೆಯಾಗಿದೆ ಎಂದು ಮಹಾಲಿಂಗ ನಾಯ್ಕ ಹೇಳಿದರು.

ಈ ಸಂದರ್ಭ ಉಪತಹಶೀಲ್ದಾರ್ ದಿವಾಕರ ಮುಗುಳ್ಯ, ನವೀನ್ ಕುಮಾರ್, ಕಂದಾಯ ನಿರೀಕ್ಷಕ  ಮಂಜುನಾಥ, ಗ್ರಾಮ ಕರಣಿಕ ವಿನುತಾ, ಗ್ರಾಮ ಸಹಾಯಕ ಗಣೇಶ, ತಾಲೂಕ ಕಚೇರಿಯ ಸುಂದರ, ಶಿವಪ್ರಸಾದ್, ಮಹಮ್ಮದ್ ಆಸೀಪ್ ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು