ಮಂಗಳೂರು : ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿ ಹುಟ್ಟೂರಿಗೆ ಆಗಮಿಸಿದ ಹರೇಕಳ ಹಾಜಬ್ಬ ಅವರಿಗೆ ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗೌರವ ಸನ್ಮಾನ ಮಾಡಲಾಯಿತು. ದ.ಕ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹಾಗೂ ಜಿಲ್ಲಾಡಳಿತದ ವತಿಯಿಂದ ಸನ್ಮಾನ ಶಾಲು ಹೊದಿಸಿ, ಪೇಟಾ ತೊಡಿಸಿ, ಫಲಪುಷ್ಪ ಕೊಟ್ಟು ಗೌರವಿಸಲಾಯಿತು.
ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕಟೀಲ್ ಕಚೇರಿಗೆ ತೆರಳಿದ ಹಾಜಬ್ಬ. ನಳಿನ್ ಕುಮಾರ್ ಕಟೀಲ್ ಇಲ್ಲದಿದ್ದರೂ ಸಿಬ್ಬಂದಿಯವರನ್ನು ಭೇಟಿಯಾಗಿ ಪದ್ಮಶ್ರೀ ಪ್ರಶಸ್ತಿ ತೋರಿಸಿದರು. ದ.ಕ ಜಿಲ್ಲಾಡಳಿತ, ಸಂಸದ ನಳಿನ್, ಶಾಸಕ ಯು.ಟಿ.ಖಾದರ್, ಮಂಗಳೂರು ಜನರು ಹಾಗೂ ಮಾಧ್ಯಮ ಮಿತ್ರರಿಗೆ ಹಾಜಬ್ಬ ಅಭಿನಂದನೆ ಸಲ್ಲಿಸಿದರು.