ಮಂಗಳೂರು : ದೇವಸ್ಥಾನದ ಆವರಣದಲ್ಲಿ ಚಪ್ಪಲಿ ಧರಿಸಿ ಪುಂಡರು ವಿಕೃತಿ ಮೆರೆದ ಘಟನೆ, ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ನಡೆದಿದೆ.
ದೇವಸ್ಥಾನಕ್ಕೆ ಅಪಚಾರ ಎಸಗಿ ವಿಡಿಯೋ ಮಾಡಿ ಸಾಮಾಜಿಕ ತಾಣಗಳಲ್ಲಿ ಹರಿಬಿಟ್ಟಿದ್ದ ಫುಂಡರ ವಿರುದ್ದ ಕಾನೂನು ಕ್ರಮಕ್ಕೆ ಪೋಲಿಸ್ ಇಲಾಖೆಗೆ ಸೂಚನೆ ನೀಡಿದ್ದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್.
ಪ್ರವಾಸದ ಹೆಸರಲ್ಲಿ ವಿಕೃತಿ ಮೆರೆದ ಉಳ್ಳಾಲದ ಬುಶೇರ್ ರೆಹಮಾನ್(20), ಇಸ್ಮಾಯಿಲ್ ಅರ್ಹ ಮಾಜ್ (22), ಮಹಮ್ಮದ್ ತಾನಿಶ್ (19), ಮೊಹಮ್ಮದ್ ರಶಾದ್(19) ಬಂಧಿಸಿದ ಪೂಂಜಾಲಕಟ್ಟೆ ಪೊಲೀಸರು.