ಮಂಗಳೂರು: ಪಿಲಿಕುಳದ ಡಾ.ಶಿವರಾಮ ಕಾರಂತ ಜೈವಿಕ ಉದ್ಯಾನವನದ 9 ವರ್ಷದ ಹುಲಿ “ಓಲಿವರ್’ ಸೋಮವಾರ ರಾತ್ರಿ ಮೃತಪಟ್ಟಿದೆ.ಆರೋಗ್ಯವಾಗಿ ಸದೃಢವಾಗಿದ್ದ ಹುಲಿಯು ಚುರುಕಾಗಿದ್ದು ಒಮ್ಮಿಂದೊಮ್ಮೆಲೇ ಕುಸಿದು ಬಿದ್ದಿದ್ದು, ತತ್ಕ್ಷಣವೇ ಮೃಗಾಲಯದ ವೈದ್ಯಾಧಿಕಾರಿಗಳು ಚಿಕಿತ್ಸೆ ನೀಡಿದರೂ ಜೀವ ಉಳಿಸಲು ಸಾಧ್ಯವಾಗಿಲ್ಲ.
ಮೃತಪಟ್ಟ ಹುಲಿಯ ಅಂಗಾಗ ಮಾದರಿಯನ್ನು ಬೆಂಗಳೂರು ಹಾಗೂ ಭೋಪಾಲ್ ಪ್ರಯೋಗಾಲಯಕ್ಕೆ ರವಾನೆ ಮಾಡಲಾಗಿದೆ.
ಮೃಗಾಲಯದಲ್ಲಿ ಅನುಮಾನಾಸ್ಪದವಾಗಿ ಯಾವುದೇ ರೋಗವು ಹರಡದಂತೆ ರೋಗ ನಿರೋಧಕ ದ್ರಾವಣವನ್ನು ಪ್ರಾಣಿಗಳ ಆವರಣದ ಒಳಗೆ ಮತ್ತು ಸುತ್ತ ಮುತ್ತ ಸಿಂಪಡಿಸಲಾಗುತ್ತಿದೆ ಎಂದು ಪಿಲಿಕುಳ ಜೈವಿಕ ಉದ್ಯಾನವನದ ನಿರ್ದೇಶಕ ಎಚ್.ಜೆ. ಭಂಡಾರಿ ತಿಳಿಸಿದ್ದಾರೆ.