News Karnataka Kannada
Monday, May 06 2024
ಮಂಗಳೂರು

ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವಕ್ಕೆ ಹಿಂದೂಗಳ ಆಟೋಗಳನ್ನೇ ಬಳಸುವಂತೆ ಅಭಿಯಾನ

Puttur
Photo Credit :

ಪುತ್ತೂರು : ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮಹಾಲಿಂಗೇಶ್ವರ ಜಾತ್ರೋತ್ಸವಕ್ಕೆ ಹಿಂದೂಗಳ ಆಟೋಗಳನ್ನೇ ಬಳಸುವಂತೆ ಹಿಂದೂ ಜಾಗರಣ ವೇದಿಕೆ ಅಭಿಯಾನ ಆರಂಭಿಸಿದೆ.

ಆಟೋಗಳಿಗೆ ಭಗವಾಧ್ವಜ ನೀಡಿ ಅಭಿಯಾನ ಪ್ರಾರಂಭಿಸಲಾಗಿದ್ದು, ಭಗವಾಧ್ವಜ ಇದ್ದ ಆಟೋಗಳನ್ನೇ ಹಿಂದೂ ಭಕ್ತಾಧಿಗಳು ಆಯ್ಕೆ ಮಾಡಬೇಕೆಂದು ಹಿಂದೂ ಜಾಗರಣ ವೇದಿಕೆ ಮನವಿ ಮಾಡಿದೆ. ಜಾತ್ರೆಯ ನೆಪದಲ್ಲಿ ಅನ್ಯಮತೀಯರು ಹಿಂದೂ ಹೆಣ್ಣುಮಕ್ಕಳಿಗೆ ತೊಂದರೆ ಕೊಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಹೀಗಾಗಿ, ಏಪ್ರಿಲ್ 10 ರಿಂದ 20ರವರೆಗೆ ಆಟೋಗಳಲ್ಲಿ ಕೇಸರಿ ಧ್ವಜವನ್ನು ಹಾಕಿ ಓಡಾಡುವಂತೆ ತಿಳಿಸಲಾಗಿದೆ.

ಹಿಂದೂ ಹೆಣ್ಣುಮಕ್ಕಳನ್ನು ಹಿಂದೂಗಳೇ ರಕ್ಷಿಸಬೇಕಾದ ಸಮಯ ಬಂದಿದೆ. ಹಿಂದುತ್ವದ ಹೆಸರಿನಲ್ಲಿ ಬಂದ ಸರ್ಕಾರ ಹಿಂದೂಗಳಿಗೆ ಸಹಕಾರ ನೀಡುತ್ತಿಲ್ಲ. ಹಿಂದೂಗಳ ಮೇಲೆಯೇ ಕೇಸ್​ಗಳನ್ನು ದಾಖಲಿಸಲಾಗುತ್ತಿದೆ. ಹಿಂದೂ ಹೆಣ್ಣುಮಕ್ಕಳನ್ನು ರಕ್ಷಿಸುವ ಕೆಲಸವನ್ನು ಸಂಘಟನೆಗಳು ನಿರಂತರ ಮಾಡಲಿದೆ. ಈ ಅಭಿಯಾನದ ಒಂದು ಭಾಗ ಆಟೋಗಳಿಗೆ ಭಗವಾಧ್ವಜ ಹಾಕಿಸಿ, ಹಿಂದುತ್ವ ಉಳಿಸುವ ಕಾರ್ಯ ಎಂದು ಹಿಂದೂ ಜಾಗರಣ ವೇದಿಕೆಯ‌ ಮುಖಂಡರು ಸ್ಪಷ್ಟನೆ ನೀಡಿದ್ದಾರೆ.

ಏಪ್ರಿಲ್ 10 ರಿಂದ 20ರವರೆಗೆ ಪುತ್ತೂರುಮಹಾಲಿಂಗೇಶ್ವರ ಜಾತ್ರೋತ್ಸವ ನಡೆಯಲಿದ್ದು, ಏಪ್ರಿಲ್​ 17ಕ್ಕೆ ಬ್ರಹ್ಮ ರಥೋತ್ಸವ ಕಾರ್ಯಕ್ರಮ ನಡೆಯಲಿದೆ. ಈ ರಥೋತ್ಸವಕ್ಕೆ ಲಕ್ಷಾಂತರ ಭಕ್ತರು ಸೇರುತ್ತಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು