ಪುತ್ತೂರು : ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮಹಾಲಿಂಗೇಶ್ವರ ಜಾತ್ರೋತ್ಸವಕ್ಕೆ ಹಿಂದೂಗಳ ಆಟೋಗಳನ್ನೇ ಬಳಸುವಂತೆ ಹಿಂದೂ ಜಾಗರಣ ವೇದಿಕೆ ಅಭಿಯಾನ ಆರಂಭಿಸಿದೆ.
ಆಟೋಗಳಿಗೆ ಭಗವಾಧ್ವಜ ನೀಡಿ ಅಭಿಯಾನ ಪ್ರಾರಂಭಿಸಲಾಗಿದ್ದು, ಭಗವಾಧ್ವಜ ಇದ್ದ ಆಟೋಗಳನ್ನೇ ಹಿಂದೂ ಭಕ್ತಾಧಿಗಳು ಆಯ್ಕೆ ಮಾಡಬೇಕೆಂದು ಹಿಂದೂ ಜಾಗರಣ ವೇದಿಕೆ ಮನವಿ ಮಾಡಿದೆ. ಜಾತ್ರೆಯ ನೆಪದಲ್ಲಿ ಅನ್ಯಮತೀಯರು ಹಿಂದೂ ಹೆಣ್ಣುಮಕ್ಕಳಿಗೆ ತೊಂದರೆ ಕೊಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಹೀಗಾಗಿ, ಏಪ್ರಿಲ್ 10 ರಿಂದ 20ರವರೆಗೆ ಆಟೋಗಳಲ್ಲಿ ಕೇಸರಿ ಧ್ವಜವನ್ನು ಹಾಕಿ ಓಡಾಡುವಂತೆ ತಿಳಿಸಲಾಗಿದೆ.
ಹಿಂದೂ ಹೆಣ್ಣುಮಕ್ಕಳನ್ನು ಹಿಂದೂಗಳೇ ರಕ್ಷಿಸಬೇಕಾದ ಸಮಯ ಬಂದಿದೆ. ಹಿಂದುತ್ವದ ಹೆಸರಿನಲ್ಲಿ ಬಂದ ಸರ್ಕಾರ ಹಿಂದೂಗಳಿಗೆ ಸಹಕಾರ ನೀಡುತ್ತಿಲ್ಲ. ಹಿಂದೂಗಳ ಮೇಲೆಯೇ ಕೇಸ್ಗಳನ್ನು ದಾಖಲಿಸಲಾಗುತ್ತಿದೆ. ಹಿಂದೂ ಹೆಣ್ಣುಮಕ್ಕಳನ್ನು ರಕ್ಷಿಸುವ ಕೆಲಸವನ್ನು ಸಂಘಟನೆಗಳು ನಿರಂತರ ಮಾಡಲಿದೆ. ಈ ಅಭಿಯಾನದ ಒಂದು ಭಾಗ ಆಟೋಗಳಿಗೆ ಭಗವಾಧ್ವಜ ಹಾಕಿಸಿ, ಹಿಂದುತ್ವ ಉಳಿಸುವ ಕಾರ್ಯ ಎಂದು ಹಿಂದೂ ಜಾಗರಣ ವೇದಿಕೆಯ ಮುಖಂಡರು ಸ್ಪಷ್ಟನೆ ನೀಡಿದ್ದಾರೆ.
ಏಪ್ರಿಲ್ 10 ರಿಂದ 20ರವರೆಗೆ ಪುತ್ತೂರುಮಹಾಲಿಂಗೇಶ್ವರ ಜಾತ್ರೋತ್ಸವ ನಡೆಯಲಿದ್ದು, ಏಪ್ರಿಲ್ 17ಕ್ಕೆ ಬ್ರಹ್ಮ ರಥೋತ್ಸವ ಕಾರ್ಯಕ್ರಮ ನಡೆಯಲಿದೆ. ಈ ರಥೋತ್ಸವಕ್ಕೆ ಲಕ್ಷಾಂತರ ಭಕ್ತರು ಸೇರುತ್ತಾರೆ.
ಸಿನಿ, ರಾಜಕೀಯ, ಕ್ರೀಡಾ ಕ್ಷೇತ್ರದ ದಿಗ್ಗಜರ ಬದುಕಿನ ಮೇಲೆ ಸಿನಿಮಾ ಮಾಡುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಆದರೆ ಇತ್ತೀಚೆಗೆ…
ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಕೂತು ಸೈಬರ್ ವಂಚನೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರ…
ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ…
ಮೂರು ಹೊಸ ಕ್ರಿಮಿನಲ್ ಕಾನೂನುಗಳು ಸರ್ಕಾರದ ಅಧಿಸೂಚನೆಯ ಪ್ರಕಾರ ಜುಲೈ 1ರಿಂದ ಜಾರಿಗೆ ಬರಲಿವೆ. ಇದರಲ್ಲಿ ಭಾರತೀಯ ನ್ಯಾಯ ಸಂಹಿತಾ,…
ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್ ಆಗಿರುವ ದಿಲ್ಲಿ ಮುಖ್ಯಮಂತ್ರಿ…
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿ ರಾಯಲ್ಲಾಗಿಯೇ ಪ್ಲೇಆಫ್ಗೆ ಪ್ರವೇಶಿಸಿದೆ. ಇನ್ನು ಆರ್ಸಿಬಿ…