ಬಂಟ್ವಾಳ: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಇದರ 37ನೇ ವರ್ಷದ ಪ್ರಯುಕ್ತ ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ಎರಡು ದಿನಗಳ ಕಾಲ ನಡೆಯುವ ಪುನೀತ್ ರಾಜ್ಕುಮಾರ್ ಯುವರತ್ನ ಪ್ರಶಸ್ತಿ ಪ್ರೊ ಕಬಡ್ಡಿ ಉತ್ಸವಕ್ಕೆ ಚಾಲನೆ ಹಾಗೂ ನೂತನವಾಗಿ ನಿರ್ಮಾಣಗೊಂಡ ಒಳಾಂಗಣ ಕ್ರೀಡಾಂಗಣದ ಉದ್ಘಾಟನೆ ಶನಿವಾರ ಜರಗಿತು.
ರಾಬರ್ಟ್ ಸಂಸ್ಥೆಯ ಮಾನವ ಸಂಪನ್ಮೂಲ ಅಧಿಕಾರಿ ಜಯಂತ್ ಪೂಜಾರಿ ಪಡ್ಡಾಯೂರು ಅವರು ಪ್ರೌಢ ಶಾಲಾ ವಿಭಾಗದ ಕಬಡ್ಡಿ ಪಂದ್ಯಾಟ ಉದ್ಘಾಟಿಸಿ ಶುಭಹಾರೈಸಿದರು.ಶ್ರೀ ಕ್ಷೇ.ಧ.ಗ್ರಾ.ಯೋ.ದ.ಕ.ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ, ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್.ಆರ್., ಪಿಲಾತಬೆಟ್ಟು ಗ್ರಾ.ಪಂ.ಅಧ್ಯಕ್ಷೆ ಹರ್ಷಿಣಿ ಪುಷ್ಪಾನಂದ ,ಉಪಾಧ್ಯಕ್ಷ ಲಕ್ಷ್ಮೀ ನಾರಾಯಣ ಹೆಗ್ಡೆ,ಪಿಡಿಒ ಯಮುನಪ್ಪ ಕೊರವರ, ಮಡಂತ್ಯಾರ್ ಗ್ರಾ.ಪಂ.ಅಧ್ಯಕ್ಷೆ ಶಶಿಪ್ರಭಾ, ತು.ರ.ವೇ.ಬಂಟ್ವಾಳ ಘಟಕದ ಅಧ್ಯಕ್ಷ ರಮೇಶ್ ಶೆಟ್ಟಿ ಮಜಲೋಡಿ, ಪಿಲಾತಬೆಟ್ಟು ಗ್ರಾ.ಪಂ.ಮಾಜಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ , ಬೆಳ್ತಂಗಡಿ ಕ್ಷೇತ್ರ ಪರಿವೀಕ್ಷಣಾಽಕಾರಿ ಕೆ. ಭುವನೇಶ್ , ಗ್ರಾ.ಪಂ. ಸದಸ್ಯರಾದ ಕಾಂತಪ್ಪ, ದಯಾನಂದ ಎರ್ಮೆನಾಡ್,ಯೋಗೇಂದ್ರ ,ಶಾರದಾ, ಉಪನ್ಯಾಸಕ ರಂಜಿತ್ ಎಚ್.ಡಿ., ಕ್ಲಬ್ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ, ಗೌರವಾಧ್ಯಕ್ಷ ಅಬ್ದುಲ್ಲ ಪಿ., ಪದಾದಿಕಾರಿಗಳಾದ ಜಯರಾಜ್ ಅತ್ತಾಜೆ , ಅಬ್ದುಲ್ ಹಮೀದ್ ಮಲ್ಪೆ, ಫ್ರಾನ್ಸಿಸ್ ವಿ.ವಿ. ಮತ್ತಿತರರು ಉಪಸ್ಥಿತರಿದ್ದರು.
ಪ್ರಭಾಕರ ಪಿ.ಎಂ. ಅವರು ಅವರು ಸ್ವಾಗತಿಸಿದರು. ,ರಾಜೇಶ್ ಪಿ.ಪುಂಜಾಲಕಟ್ಟೆ ಅವರು ವಂದಿಸಿದರು. ದೇವದಾಸ್ ಕಜೆಕಾರು ಅವರು ಕಾರ್ಯಕ್ರಮವನ್ನು ನಿರೂಪಿಸಿದರು.
ಕ್ರೀಡಾ ಜ್ಯೋತಿ ಮೆರವಣಿಗೆ: ಉದ್ಘಾಟನೆಗೆ ಮುನ್ನ ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಬೆರ್ಕಳ ಮತ್ತು ನಯನಾಡು ಶ್ರೀ ರಾಮ ಭಜನ ಮಂದಿರದಿಂದ ಕ್ರೀಡಾ ಜ್ಯೋತಿಯ ಆಕರ್ಷಕ ಮೆರವಣಿಗೆ ನಡೆಯಿತು.