ಬಂಟ್ವಾಳ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ,ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಶನಿವಾರ ಪೊಳಲಿ ದೇವಾಲಯಕ್ಕೆ ಭೇಟಿ ನೀಡಿದರು. ದೇವಳದ ಅರ್ಚಕ ಪರಮೇಶ್ವರ್ ಭಟ್ ಪ್ರಸಾದ ನೀಡಿದರು.
ಈ ಸಂಧರ್ಭದಲ್ಲಿ ನಾಗೇಶ್ ರಾವ್ ಪೊಳಲಿ, ಬಂಟ್ವಾಳ ತಹಶಿಲ್ದಾರ್ ರಶ್ಮಿ ಎಸ್. ಆರ್., ಬಿಜೆಪಿ ಮುಖಂಡರಾದ ಅಶೋಕ್ ಶೆಟ್ಟಿ ಸರಪಾಡಿ, ವೆಂಕಟೇಶ್ ನಾವಡ ಪೊಳಲಿ, ಯಶವಂತ ಪೊಳಲಿ, ಲೋಕೇಶ್ ಭರಣಿ ಸುಕೇಶ್ ಚೌಟ, ಪವನ್ ಕುಮಾರ್, ಚಂದ್ರಶೇಖರ್ ಶೆಟ್ಟಿ, ಕಿಶೋರ್ ಪಲ್ಲಿಪಾಡಿ, ಮಾಜಿ ಗ್ರಾ.ಪಂ ಅಧ್ಯಕ್ಷೆ ಚಂದ್ರಾವತಿ, ಅಶೋಕ್ ಬಡಕಬೈಲ್ ಹಾಗೂ ಮನು ರೈ ಇದ್ದರು.