News Karnataka Kannada
Monday, April 29 2024
ಮಂಗಳೂರು

ಪ್ರಗತಿಪರ ಕೃಷಿಕ ಬಾಲಕೃಷ್ಣ ಶೆಟ್ಟಿ ಇವರ 100ನೇ ಜನ್ಮದಿನ ಸಂಭ್ರಮ ಕಾರ್ಯಕ್ರಮ

Bantwal (1)
Photo Credit :
ಬಂಟ್ವಾಳ : ಅಮ್ಟಾಡಿ ಗ್ರಾಮದ ಬಡಾಜೆಗುತ್ತು ವಿನಲ್ಲಿ  ಹಿರಿಯ ಧಾರ್ಮಿಕ, ಸಾಮಾಜಿಕ ಮುಖಂಡ , ಪ್ರಗತಿಪರ ಕೃಷಿಕ ಬಾಲಕೃಷ್ಣ ಶೆಟ್ಟಿ ಇವರ 100ನೇ ಜನ್ಮದಿನ ಸಂಭ್ರಮ ಕಾರ್ಯಕ್ರಮವು ಭಾನುವಾರ ನಡೆಯಿತು.
ವಸತಿ ಸಚಿವ ವಿ.ಸೋಮಣ್ಣ ಈ ಕಾರ್ಯಕ್ರಮದಲ್ಲಿ‌ ಭಾಗವಹಿಸಿ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಿ ಮಾತನಾಡಿದರು. ಶತಾಯುಷಿ ಬಾಲಕೃಷ್ಣ ಶೆಟ್ಟಿ ಅವರ ಧಾರ್ಮಿಕ ಪ್ರಜ್ಞೆ ಅವರ ಪುತ್ರ ರವಿಶಂಕರ ಶೆಟ್ಟಿ ಇವರು ಮುಂದುವರಿಸುತ್ತಿರುವುದು ಶ್ಲಾಘನೀಯ ಎಂದರು.
ಬೆಂಗಳೂರು ಅಪರ ಪೊಲೀಸ್ ಮಹಾನಿರ್ದೇಶಕ   ಬಿ.ದಯಾನಂದ, ಮೂಡುಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ  ಶುಭಹಾರೈಸಿದರು.
ಧರ್ಮಸ್ಥಳ ಕ್ಷೇತ್ರದ ಡಿ.ಹರ್ಷೇಂದ್ರ ಕುಮಾರ್ , ಪೊಳಲಿ ವಿವೇಕ ಚೈತನ್ಯಾನಂದ ಸ್ವಾಮೀಜಿ , ಮೊಡಂಕಾಪು ಚಚ್೯ ನ ಧರ್ಮಗುರು ವಲೇರಿಯನ್ ಡಿಸೋಜ, ಕಾಟಿಪಳ್ಳ ಬೊಕ್ಕಪಟ್ನ ಹಿರಿಯ ಖತೀಬ ಮೌಲಾನಾ ಅಜೀಜ್ ದಾರಿಮಿ,
ಅಂಬೇಡ್ಕರ್ ನಿಗಮ ಅಧ್ಯಕ್ಷ ಮುನಿಕೃಷ್ಣ, ಬಿಬಿಎಂಪಿ ಸದಸ್ಯ ನಾಗರಾಜ್, ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ, ಹೈಕೋಟ್ ೯ ನ್ಯಾಯಾಧೀಶ  ವಿಶ್ವಜಿತ್ ಶೆಟ್ಟಿ,  ಲೋಕಾಯುಕ್ತ ನಿವೃತ್ತ ನ್ಯಾಯಧೀಶ ವಿಶ್ವನಾಥ ಶೆಟ್ಟಿ, ಶಾಸಕರಾದ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು, ಸುಕುಮಾರ ಶೆಟ್ಟಿ ಬೈಂದೂರು, ವಿಧಾನಪರಿಷತ್ ಸದಸ್ಯರಾದ ಬಿ.ಎಂ.ಫಾರೂಕ್, ಡಾ.ಮಂಜುನಾಥ ಭಂಡಾರಿ, ಮಾಜಿ ಸಚಿವರಾದ ಬಿ.ರಮಾನಾಥ ರೈ, ವಿನಯಕುಮಾರ್ ಸೊರಕೆ,  ಮಾಜಿ ಶಾಸಕರಾದ  ಕೆ.ವಸಂತ ಬಂಗೇರ,  ಕೆ.ಪದ್ಮನಾಭ ಕೊಟ್ಟಾರಿ,  ಎ.ರುಕ್ಮಯ ಪೂಜಾರಿ, ಎಐಐಸಿ ಕಾರ್ಯದರ್ಶಿ  ಪಿ.ವಿ.ಮೋಹನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಬೂಡಾ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ, ಎಸ್ಪಿ ಭಗವಾನ್ ಹೃಷಿಕೇಶ್ ಸೋನಾವಾಣೆ, ಡಿವೈಎಸ್ಪಿ ಪ್ರತಾಪ ಸಿಂಹ ಥೋರಟ್, ತುಮಕೂರು ಲೋಕಾಯುಕ್ತ ಎಸ್ಪಿ  ವಾಲಿ ಪಾಷ, ಲೋಕಾಯುಕ್ತ ಡಿವೈಎಸ್ಪಿ ಮಂಜುನಾಥ ಶೆಟ್ಟಿ, ಎ.ಜೆ.ಸಮೂಹ ಸಂಸ್ಥೆ ಅಧ್ಯಕ್ಷ ಎ.ಜೆ.ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಸಾಧಕರಿಗೆ ಸನ್ಮಾನ:
ಇದೇ ವೇಳೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ, ಮಹಾಲಿಂಗ ನಾಯ್ಕ್ ವಿಟ್ಲ, ರಾಷ್ಟ್ರಪತಿ ಪ್ರಶಸ್ತಿ ಪುರಸ್ಖೃತ ಡಾ.ರಾಜೇಂದ್ರ ಶೆಟ್ಟಿ,ಸಂಗೀತ ನಿರ್ದೇಶಕ ಗುರುಕಿರಣ್ ಸೇರಿದಂತೆ ಮುಖ್ಯಮಂತ್ರಿ ಪದಕ ವಿಜೇತ ಪೊಲೀಸರು, ಹಿರಿಯ ಪತ್ರಕರ್ತರು ಸಹಿತ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಯಿತು. ಸನ್ಮಾನಿತರ ಪರವಾಗಿ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್, ಉದ್ಯಮಿ ಕೆ.ಡಿ.ಶೆಟ್ಟಿ ಅನಿಸಿಕೆ ವ್ಯಕ್ತಪಡಿಸಿದರು.
ಸಂಘಟಕ ಬಡಾಜೆಗುತ್ತು ರವಿಶಂಕರ ಶೆಟ್ಟಿ ಅವರು ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಕೊಡಾಜೆ ಬಾಲಕೃಷ್ಣ ಶೆಟ್ಟಿ ಮತ್ತು ಪುರುಷೋತ್ತಮ ಭಂಡಾರಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಪಟ್ಲ- ಜನ್ಸಾಲೆ, ಕಾವ್ಯಶ್ರೀ  ಭಾಗವತಿಕೆಯಲ್ಲಿ ಯಕ್ಷ- ಗಾನ -ವೈಭವ ಕಾರ್ಯಕ್ರಮ ನಡೆಯಿತು.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು