Categories: ಮಂಗಳೂರು

ಪ್ರತಿಯೊಬ್ಬರಿಗೂ ಸರಕಾರದಿಂದ ನಿವೇಶನದ ವ್ಯವಸ್ಥೆ ಮಾಡುತ್ತೇನೆ:ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಮುಂದಿನ ಒಂದು ವರ್ಷದೊಳಗೆ ಈ ಭಾಗದ ಪ್ರತಿಯೊಂದು ಬೇಡಿಕೆಗಳನ್ನು ಪೂರೈಸುವ ಕೆಲಸ ಪ್ರಮಾಣಿಕವಾಗಿ ಮಾಡುತ್ತೇವೆ, ಜೊತೆಗೆ ಪ್ರತಿಯೊಬ್ಬರಿಗೂ ಸರಕಾರದಿಂದ ನಿವೇಶನದ ವ್ಯವಸ್ಥೆ ಮಾಡುತ್ತೇನೆ ಎಂಬ ಭರವಸೆಯನ್ನು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ನೀಡಿದರು.
ಅವರು  ಕಾವಳಪಡೂರು‌ಗ್ರಾಮದ 13 ಕುಟುಂಬಗಳಿಗೆ  94 ಸಿ.ಹಕ್ಕು ಪತ್ರ ವಿತರಿಸಿ ಮಾತನಾಡಿದರು.ಡಾ. ಅಂಬೇಡ್ಕರ್ ಜಯಂತಿ ದಿನದಂದು ಉತ್ತಮ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಆಚರಣೆ ಮಾಡಬೇಕು ಎಂಬ ದೃಷ್ಟಿಯಿಂದ ದಲಿತ ಕಾಲೋನಿಗೆ ತೆರಳಿ 13 ಕುಟುಂಬಗಳಿಗೆ 94 ಸಿ. ಹಕ್ಕು ಪತ್ರ ವಿತರಿಸಲಾಗುತ್ತಿದೆ ಎಂದು ಅವರು ಹೇಳಿದರು.
ಕಾವಳಪಡೂರು ಗ್ರಾಮದಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಹಾಗೂ ಇಲ್ಲಿನ ರಸ್ತೆ ನಿರ್ಮಾಣಕ್ಕೆ ಪ್ರಯತ್ನ ಮಾಡುತ್ತೇನೆ ಎಂದು ಅವರು ಹೇಳಿದರು.
ಪ್ರಮೋದ್ ಕುಮಾರ್ ರೈ ಮಾತನಾಡಿ 13 ಜನರಿಗೆ ಕೇವಲ ಮೂರು ದಿನದಲ್ಲಿ ಹಕ್ಕು ಪತ್ರ ನೀಡುವ ಕೆಲಸ ಆಗಿದೆ, ಶಾಸಕರ ಇಚ್ಚಾಶಕ್ತಿಗೆ ಇದು ಸಾಕ್ಷಿಯಾಗಿದೆ.
ಈ 13 ಕುಟುಂಬ ಗಳ ಹಕ್ಕು ಪತ್ರಕ್ಕೆ ಸರಕಾರಕ್ಕೆ ಪಾವತಿಸುವ ಮೊತ್ತವನ್ನು ಕೂಡ ಸ್ವತಃ ಶಾಸಕರೇ ಪಾವತಿಸಿ ಸಕಾಲಕ್ಕೆ ಹಕ್ಕು ಸಿಗುವಲ್ಲಿ ಶ್ರಮಿಸಿದ್ದಾರೆ.
ಬಂಟ್ವಾಳ ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ,  ಗ್ರಾ.ಪಂ.ಅಧ್ಯಕ್ಷೆ ರಜನಿ, ಉಪಾಧ್ಯಕ್ಷೆ ವಸಂತಿ ಸದಸ್ಯ ರಾದ ಭವಾನಿ ಶ್ರೀಧರ್ ಪೂಜಾರಿ, ಉಮೇಶ್,
ಮಾಜಿ ಪಂ.ಸದಸ್ಯರಾದ ಆನಂದ ,ಪ್ರಮುಖರಾದ ಸತೀಶ್ ಶೆಟ್ಟಿ, ವಿಶ್ವನಾಥ್ ಚೆಂಡ್ತಿಮಾರ್, ಯಸವಂತ ನಗ್ರಿ,  ಶಿವಪ್ಪ ಗೌಡ ನಿನ್ನಕಲ್ಲು,ಸತೀಶ್ ಕುಲಾಲ್,  ಕಂದಾಯ ನಿರೀಕ್ಷಕ ಸಂತೋಷ್, ಗ್ರಾಮ ಕರಣಿಕೆ ಆಶಾಮೆಹಂದಲೆ, ಪಿ.ಡಿ.ಒ ಪಂಕಜ ಮತ್ತಿತರರು ಉಪಸ್ಥಿತರಿದ್ದರು.
Swathi MG

Recent Posts

ಬಸವೇಶ್ವರ ಜಾತ್ರೆ: ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ

ಜಿಲ್ಲೆಯ ಸೊನ್ನ ಗ್ರಾಮದ ಶಿವುಕುಮಾರ ಮಾಸ್ತಾರ ದಂಪತಿಗಳ ಸಹಾಯಾರ್ಥದೊಂದಿಗೆ ಗ್ರಾಮದ ಸುಮಾರು 200 ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ವಿಶ್ವರಾಧ್ಯ…

5 mins ago

ಬಿಜೆಪಿ ಮತ್ತೆ ಗೆದ್ದರೆ ವಿಪಕ್ಷಗಳ ನಾಯಕರು ಜೈಲು ಪಾಲಾಗುತ್ತಾರೆ: ಕೇಜ್ರಿವಾಲ್‌

ಲೋಕಸಭಾ ಚುನಾವಣೆಯಲ್ಲಿ ಈ ಬಾರಿಯು ಬಿಜೆಪಿ ಗೆದ್ದರೆ, ಮಮತಾ ಬ್ಯಾನರ್ಜಿ, ಶಿವಸೇನಾ ಮುಖ್ಯಸ್ಥ ಉದ್ಧವ್‌ ಠಾಕ್ರೆ, ಆರ್‌ಜೆಡಿ ನಾಯಕ ತೇಜಸ್ವಿ…

9 mins ago

ದೆಹಲಿಯಲ್ಲಿ ಬಿರುಗಾಳಿ: ಇಬ್ಬರು ಮೃತ್ಯು, 23 ಮಂದಿಗೆ ಗಾಯ

ಬಿರುಗಾಳಿಗೆ ಇಬ್ಬರು ಸಾವನ್ನಪ್ಪಿದ್ದು, 23 ಮಂದಿ ಗಾಯಗೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

33 mins ago

ಹೆಚ್ಚಿನ ಫೀಸ್ ತೆಗೆದುಕೊಂಡರೆ ಖಾಸಗಿ ಶಾಲೆಗಳ ವಿರುದ್ಧ ಕ್ರಮ : ಬಂಗಾರಪ್ಪ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಪೋಷಕರು ತಮ್ಮ ಮಕ್ಕಳಿಗೆ ಮುಂದಿನ ವಿದ್ಯಾಭ್ಯಸದ ಬಗ್ಗೆ ಈಗಾಗಲೇ ಯೋಚಿಸುತ್ತಿದ್ದಾರೆ

41 mins ago

ವಿದ್ಯಾರ್ಥಿನಿಯ ಹತ್ಯೆ ಪ್ರಕರಣ: ಮರದ ಮೇಲೆ ಬಾಲಕಿಯ ರುಂಡ ಪತ್ತೆ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಬಾಲಕಿ ರುಂಡ ಪತ್ತೆಯಾಗಿದೆ

47 mins ago

ಸೆಕೆಂಡ್ ​ಹ್ಯಾಂಡ್ ಕಾರು ವ್ಯಾಪಾರಿ ಮೇಲೆ ಹಲ್ಲೆ: ಆರೋಪಿಗಳ ಬಂಧನ

ಹಣಕ್ಕೆ ಬೇಡಿಕೆ ಇಟ್ಟು ನಗರದ ಹಾಗರಗಾ ಕ್ರಾಸ್ ಬಳಿಯ ಮನೆಯೊಂದರಲ್ಲಿ  ಸೆಕೆಂಡ್​ ಹ್ಯಾಂಡ್ ಕಾರು ವ್ಯಾಪಾರಿಯನ್ನು ಬೆತ್ತಲೆ ಮಾಡಿ ಹಲ್ಲೆ…

1 hour ago