Categories: ಮಂಗಳೂರು

ಪ್ರಧಾನಿ ಆರೋಗ್ಯ ವೃದ್ದಿಗಾಗಿ ತಾಲೂಕಿನ ಶಿವ ದೇವಾಲಯದಲ್ಲಿ ಮೃತ್ಯುಂಜಯ ಹೋಮ‌

ಬೆಳ್ತಂಗಡಿ : ಪ್ರಧಾನಿ ನರೇಂದ್ರ ಮೋದಿಯವರ ಆರೋಗ್ಯ ವೃದ್ಧಿ ಮತ್ತು ದೀರ್ಘಾಯುಷ್ಯ ಪ್ರಾಪ್ತಿಗಾಗಿ ತಾಲೂಕಿನ‌ ಜನತೆಯ ಪರವಾಗಿ ಶಾಸಕ ಹರೀಶ್ ಪೂಂಜಾ ರವರ ನೇತ್ರತ್ವದಲ್ಲಿ ತಾಲೂಕಿನ ಸುಮಾರು 25 ಶಿವ ದೇವಾಲಯದಲ್ಲಿ ಮೃತ್ಯುಂಜಯ ಹೋಮ ನಡೆಯಿತು.

ಪ್ರಧಾನಿ‌ ನರೇಂದ್ರ ಮೋದಿಯವರ ಆರೋಗ್ಯ ವೃದ್ದಿ‌ ಹಾಗೂ ದೀರ್ಘಾಯುಷ್ಯಕ್ಕಾಗಿ ಮೃತ್ಯುಂಜಯ ಹೋಮದ ಜತೆಗೆ ಪ್ರಾರ್ಥನೆ ಸಲ್ಲಿಸಲಾಯಿತು.‌
ತಾಲೂಕಿನ ಪ್ರಮುಖ ಶಿವ ದೇವಾಲಯಗಳಾದ ವೇಣೂರು ಮಹಾಲಗೇಶ್ವರ, ಕುತ್ಯಾರು ಸೋಮನಾಥೇಶ್ವರ, ಮರೋಡಿ ಉಮಾಮಹೇಶ್ವರ, ಕಾಶಿಪಟ್ಣ ಪಂಚಲಿಂಗೇಶ್ವರ, ಗರ್ಡಾಡಿ ನಂದಿಕೇಶ್ವರ, ಶಿರ್ಲಾಲು ಮಹಾಲಿಂಗೇಶ್ವರ, ಮಲ್ಲಿಪ್ಪಾಡಿ ಸದಾಶಿವೇಶ್ವರ, ಓಡಿಲು ಮಹಾಲಿಂಗೇಶ್ವರ, ಅಳದಂಗಡಿ ಸೋಮನಾಥೇಶ್ವರಿ, ನಾವರ ಮಹಾಲಿಂಗೇಶ್ವರ, ಕೇಳ್ಕರ ಮಹಾಲಿಂಗೇಶ್ವರ, ಸುರ್ಯ ಸದಾಶಿವೇಶ್ವರ, ನಿಡಿಗಲ್ ಲೋಕನಾಥೇಶ್ವರ, ಇಂದಬೆಟ್ಟು ಅರ್ಧನಾರೀಶ್ವರ, ಕೂಡಬೆಟ್ಟು ಸದಾಶಿವೇಶ್ವರ, ಕಳೆಂಜ ಸದಾಶಿವೇಶ್ವರ, ರುದ್ರಗಿರಿ ಮೃತ್ಯುಂಜಯ, ಕೋರಿಂಜ ಪಂಚಲಿಂಗೇಶ್ವರ, ಕರಾಯ ಮಹಾಲಿಂಗೇಶ್ವರ, ಕುರಾಯ ಸದಾಶಿವೇಶ್ವರ, ಮಲೆಂಗಲ್ಲು ಉಮಾ ಮಹೇಶ್ವರ, ಪಜಿರಡ್ಕ ಸದಾಶಿವೇಶ್ವರ, ಬಯಲು, ಅಪ್ಪಿಲ ಉಮಾಮಹೇಶ್ವರ, ಚಾರ್ಮಾಡಿ ಪಂಚಲಿಂಗೇಶ್ವರ ಮೊದಲಾದ ಶಿವ ದೇವಾಲಯದಲ್ಲಿ ಆಯಾಯ ದೇವಾಲಯಗಳ ಆಡಳಿತ ಮಂಡಳಿ, ಊರಿನ ಗಣ್ಯರ, ಪ್ರಮುಖರ ಹಾಗೂ ದೇವಾಲಯಗಳ ಅರ್ಚಕರ ನೇತೃತ್ವದಲ್ಲಿ ಮೃತ್ಯುಂಜಯ ಹೋಮ ನಡೆಯಿತು.‌

ಮೃತ್ಯುಂಜಯ ಹೋಮ ನಡೆದ ದೇವಾಲಯಗಳಲ್ಲಿ ಆಯಾಯ ದೇವಾಲಯಗಳ ಆಡಳಿತ ಮೊಕ್ತೇಸರರು, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಸದಸ್ಯರುಗಳು, ಪ್ರಮುಖರು, ಗ್ರಾ.ಪಂ. ಸದಸ್ಯರುಗಳು, ಪ್ರಧಾನಿಯವರ ಅಭಿಮಾನಿಗಳು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Gayathri SG

Recent Posts

ರಾಜ್ಯದ ಹಲವೆಡೆ ಮುಂದಿನ 5 ದಿನಗಳ ಕಾಲ‌ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಇಂದಿನಿಂದ ಮೇ 11ರವರೆಗೆ ವರುಣ ಆಗಮನ ಆಗುವ ಮುನ್ಸೂಚನೆ. ಹಾಗೂ ಮುಂದಿನ 5 ದಿನಗಳ ಕಾಲ‌ ಗುಡುಗು…

17 mins ago

ಬೀದರ್ ಮಾರುಕಟ್ಟೆಯಲ್ಲಿ ಎಲ್ಲಿ ನೋಡಿದರು ಮಾವಿನ ಹಣ್ಣಿನ ದರ್ಬಾರ್‌

ಯುಗಾದಿ ಮುಗಿಯುತ್ತಿದ್ದಂತೆ ಎಲ್ಲೆಡೆ ಮಾವಿನ ಹಣ್ಣುಗಳ ದರ್ಬಾರ ಕಂಡುಬರುತ್ತಿದೆದೆ. ಮಾರುಕಟ್ಟೆಗೆ ಮಾವಿನಕಾಯಿ ಹೆಚ್ಚಾಗಿ ಬರುತ್ತಿದೆ. ಸಾಲಾಗಿ ಜೋಡಿಸಿಟ್ಟ ಮಾವಿನ ಹಣ್ಣು…

32 mins ago

ಬಾಲಕಿ ಮೇಲೆ 2 ರಾಟ್‌ವೀಲರ್ ನಾಯಿಗಳಿಂದ ದಾಳಿ: ಮಾಲೀಕ ಅರೆಸ್ಟ್

ಎರಡು ರಾಟ್‌ವೀಲರ್ ನಾಯಿಗಳು ಐದು ವರ್ಷದ ಬಾಲಕಿ ಮೇಲೆ ದಾಳಿ ಮಾಡಿದ ಘಟನೆ ಚೆನ್ನೈನ ಥೌಸಂಡ್ ಲೈಟ್ಸ್ ಪ್ರದೇಶದ ಸಾರ್ವಜನಿಕ…

51 mins ago

ಬೀದರ್: ಬಿಸಿಲಿನ ಝಳಕ್ಕೆ ಚುನಾವಣೆ ಸಿಬ್ಬಂದಿ ತತ್ತರ

ಮಂಗಳವಾರ ನಡೆಯಲಿರುವ ಲೋಕಸಭೆ ಚುನಾವಣೆಗೆ ಚುನಾವಣೆ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಸೋಮವಾರ ಮಧ್ಯಾಹ್ನದಿಂದಲೇ ಕರ್ತವ್ಯ ನಿರತ ಸಿಬ್ಬಂದಿ ಮತಗಟ್ಟೆಗೆ…

1 hour ago

ರಾಟ್‌ವೀಲರ್ ನಾಯಿಗಳು ಬಾಲಕಿಯ ಮೇಲೆ ದಾಳಿ: ಮಾಲೀಕ ಪೊಲೀಸರ ವಶಕ್ಕೆ

ಎರಡು ರಾಟ್‌ವೀಲರ್ ನಾಯಿಗಳು ಐದು ವರ್ಷದ ಬಾಲಕಿ ಮೇಲೆ ದಾಳಿ ಮಾಡಿದ ಪರಿಣಾಮ ಬಾಲಕಿ ಗಂಭೀರ ಗಾಯಗೊಂಡ ಘಟನೆ ಚೆನ್ನೈನ…

2 hours ago

ದನಗಳಿಗೆ ನೀರಿನ ದಾಹ ತಣಿಸುವ ಕಾರ್ಯಕ್ಕೆ ಮುಂದಾದ ಸ್ನೇಹಿತರು

ಬಿರು ಬಿಸಿಲಿನ ಬೇಗೆಗೆ ಜನರೇ ತತ್ತರಿಸಿ ಹೋಗುತ್ತಿದ್ದು, ಜಾನುವಾರುಗಳ ಮೂಕ ರೋಧನೆ ಹೇಳ ತೀರದ್ದಾಗಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನ…

2 hours ago