ಬೆಳ್ತಂಗಡಿ : ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಶ್ರೀ ಮಂಜುಳೇಶ ಹಾಗು ಮಹಾಗಣಪತಿ ಸನ್ನಿಧಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ದೀರ್ಘಾಯಸ್ಸು ಹಾಗೂ ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸಿ ಮಹಾಮೃತ್ಯುಂಜಯ ಹೋಮ ನಡೆಸಲಾಯಿತು.
ಅರ್ಚಕ ವೇದಮೂರ್ತಿ ಶ್ರೀನಿವಾಸ ಹೊಳ್ಳರ ನೇತೃತ್ವದಲ್ಲಿ ಯಾಗ ನಡೆಯಿತು . ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಪುಷ್ಪಾವತಿ ಆರ್ .ಶೆಟ್ಟಿ ದಂಪತಿ ಯಾಗ ಸಂಕಲ್ಪ ನಡೆಸಿದ್ದರು. ಗ್ರಾ .ಪಂ.ಉಪಾಧ್ಯಕ್ಷ ರವಿಕುಮಾರ್ ಬರಮೇಲು , ವಿಧಾನ ಪರಿಷತ್ ಶಾಸಕ ಪ್ರತಾಪ ಸಿಂಹ ನಾಯಕ್, ಶರತ್ ಕೃಷ್ಣ ಪಡುವೆಟ್ನಾಯ , ಕೇಶವ ಭಟ್ ಅತ್ತಾಜೆ ,ಪದ್ಮನಾಭ ಶೆಟ್ಟಿಗಾರ್ ,ಮೊದಲಾದವರು ಉಪಸ್ಥಿತರಿದ್ದರು.
ಅರ್ಚಕ ಶ್ರೀನಿವಾಸ ಹೊಳ್ಳರು ಶ್ರೀ ಜನಾರ್ದನ ಸ್ವಾಮಿ ಸನ್ನಿಧಿಯಲ್ಲಿ ವಿಶೇಷವಾಗಿ ಪ್ರಧಾನಿಯವರ ಅರೋಗ್ಯ ಹಾಗು ದೀರ್ಘಾಯುಸ್ಸಿಗಾಗಿ ಪ್ರಾರ್ಥಿಸಿ ಪ್ರಸಾದ ನೀಡಿದರು.