ಬೆಳ್ತಂಗಡಿ : ಪುರಾಣ ವಾಚನ, ಪ್ರವಚನದಿಂದ ಸುವಿಚಾರಗಳು ಹಾಗೂ ಬದುಕಿಗೆ ಉಪಯುಕ್ತವಾದ ಸಾರ್ಥಕ ಸಂದೇಶವನ್ನು ಕೇಳಿ ಮನಸ್ಸು ಪವಿತ್ರವಾಗುತ್ತದೆ. ಸಾಂಸಾರಿಕ ಹಾಗೂ ವ್ಯಾವಹಾರಿಕ ಸಮಸ್ಯೆಗಳಿಗೆ ಸೌಹಾರ್ದಯುತ ಪರಿಹಾರ ಸಿಗುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

ಅವರು ಶುಕ್ರವಾರ ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ಒಂದು ವಾರ ಕಾಲ ನಡೆದ ಪುರಾಣ ವಾಚನ – ಪ್ರವಚನದ ಸುವರ್ಣ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಭಾಗವತದಲ್ಲಿ ಕೃಷ್ಣನ ಬಾಲಲೀಲೆ ಹಾಗೂ ತುಂಟಾಟವನ್ನು ಕಂಡು ಆನಂದಿಸಿ ಅನುಭವಿಸಬೇಕು. ಇದೇ ರೀತಿ ಬಾಲ್ಯದಲ್ಲಿ ಮಕ್ಕಳ ತುಂಟಾಟ ಸಹಜವಾಗಿಯೂ, ಸ್ವಾಭಾವಿಕವಾಗಿಯೂ ಇರುತ್ತದೆ. ರಾಮಾಯಣ ಮತ್ತು ಮಹಾಭಾರತದಂತಹ ಪುರಾಣಗಳಲ್ಲಿ ಸಾರ್ಥಕ ಬದುಕಿನ ಸಂಕಟಗಳಿಗೆ, ಸವಾಲುಗಳಿಗೆ ಮತ್ತು ಸಮಸ್ಯೆಗಳಿಗೆ ಸೂಕ್ತ ಪರಿಹಾರವಿದೆ ಎಂದು ಅವರು ಹೇಳಿದರು.

ಯಕ್ಷಗಾನ ಕೃತಿ ಬಿಡುಗಡೆ: ನಿವೃತ್ತ ತಹಸೀಲ್ದಾರ್ ಹಾಗೂ ಮೂಲತ: ಧರ್ಮಸ್ಥಳದ ನಿವಾಸಿಯಾದ ಹವ್ಯಾಸಿ ಯಕ್ಷಗಾನ ಕಲಾವಿದ ಕೆ. ಸುರೇಶ ಕುದ್ರೆಂತ್ತಾಯ ರಚಿಸಿದ “ಶ್ರೀ ರಾಮಕಥಾ ನಮನ” ಕೃತಿಯನ್ನು ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಧರ್ಮಸ್ಥಳದಲ್ಲಿ ಬಾಲ್ಯದಿಂದಲೇ ಯಕ್ಷಗಾನದ ಕಲಾವಿದರು, ಪ್ರೇಕ್ಷಕರು ಹಾಗೂ ಅಭಿಮಾನಿಗಳು ಅನೇಕ ಮಂದಿ ಇದ್ದಾರೆ. ಯಕ್ಷಾಗನವನ್ನು ಕೇಳಿ, ನೋಡಿ, ಆನಂದಿಸಿ ಅವರು ಲೋಕ ಜ್ಞಾನವನ್ನು ವೃದ್ಧಿಸಿಕೊಂಡಿದ್ದಾರೆ. ಯಾವುದೇ ಆವರಣ ಗೋಡೆಗಳಿಲ್ಲದ ಲೋಕ ಜ್ಞಾನದಿಂದ ತಮ್ಮ ಜ್ಞಾನ ಕ್ಷಿತಿಜವನ್ನು ವಿಸ್ತರಿಸಿ ಕೊಂಡಿದ್ದಾರೆ.

ಸುರೇಶ ಕುದ್ರೆಂತ್ತಾಯರ ಕೃತಿ ಯಕ್ಷಗಾನ ರಂಗಕ್ಕೆ ಅಮೂಲ್ಯ ಕೊಡುಗೆಯಾಗಿದೆ ಎಂದು ಶ್ಲಾಘಿಸಿ ಅವರನ್ನು ಹೆಗ್ಗಡೆಯವರು ಅಭಿನಂದಿಸಿದರು. ಆಸಕ್ತ ಅಧ್ಯಯನಾಸಕ್ತರಿಗೆ ಇದು ಮಾಹಿತಿಯ ಕಣಜವಾಗಿದೆ. ಆಕರ ಗ್ರಂಥವಾಗಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಪುರಾಣ ವಾಚನ- ಪ್ರವಚನಕ್ಕೆ ವಿಷಯ ಹಾಗೂ ಕೃತಿಗಳ ಆಯ್ಕೆ ಬಗ್ಗೆ ಹೇಮಾವತಿ ವಿ. ಹೆಗ್ಗಡೆಯವರ ನಿರಂತರ ಮಾರ್ಗದರ್ಶನ, ಪ್ರೇರಣೆ ಹಾಗೂ ಪ್ರೋತ್ಸಾಹವನ್ನು ಅವರು ಶ್ಲಾಘಿಸಿದರು.

ವಾಚನಕಾರರು ಹಾಗೂ ಪ್ರವಚನಕಾರರನ್ನು ಆಯ್ಕೆ ಮಾಡಿ ಆಮಂತ್ರಿಸಿ ಕಾರ್ಯಕ್ರಮದ ವ್ಯವಸ್ಥೆಯಲ್ಲಿ ಹವ್ಯಾಸಿ ಯಕ್ಷಗಾನ ಕಲಾವಿದ ಉಜಿರೆ ಅಶೋಕ ಭಟ್ ಅವರ ಸಕ್ರಿಯ ಸಹಕಾರವನ್ನು ಹೆಗ್ಗಡೆಯವರು ಸ್ಮರಿಸಿ ಅಭಿನಂದಿಸಿದರು. “ತೊರವೆ ರಾಮಾಯಣ”ದಲ್ಲಿ ಭರತನ ಭ್ರಾತೃ ಪ್ರೇಮದ ಬಗ್ಗೆ ಹಾಸನದ ಗಣೇಶ ಉಡುಪರು ವಾಚನ ಮಾಡಿದರು. ಹವ್ಯಾಸಿ ಯಕ್ಷಗಾನ ಕಲಾವಿದ ಉಜಿರೆ ಅಶೋಕ ಭಟ್ ಪ್ರವಚನ ನೀಡಿದರು.

Raksha Deshpande

Recent Posts

ವಕೀಲ ದೇವರಾಜೆಗೌಡ ಮತ್ತೆ 2 ದಿನ ಎಸ್‌ಐಟಿ ಕಸ್ಟಡಿಗೆ

ಜಿಲ್ಲೆಯ 5ನೇ ಸಿವಿಲ್ ಕೋರ್ಟ್‌ನಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಾಧೀಶರು,…

7 mins ago

ಕೇರಳದಲ್ಲಿ ಭಾರೀ ಮಳೆ : ರೆಡ್ ಅಲರ್ಟ್ ಘೋಷಣೆ

ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ದೇವರನಾಡು ಕೇರಳದಲ್ಲಿ ಭಾರಿ ಮಳೆಯಾಗುತ್ತಿದ್ದು, ಶನಿವಾರ ಭಾರತೀಯ ಹವಾಮಾನ ಇಲಾಖೆ (IMD) ರೆಡ್ ಅಲರ್ಟ್…

23 mins ago

ವಿಧಾನಪರಿಷತ್ ಚುನಾವಣೆ : ನಾಮಪತ್ರ ಅಂಗೀಕಾರ,ತಿರಸ್ಕೃತ ಅಭ್ಯರ್ಥಿಗಳ ಪಟ್ಟಿ ರಿಲೀಸ್

ರಾಜ್ಯ ವಿಧಾನ ಪರಿಷತ್​ಗೆ ನೈಋತ್ಯ, ಈಶಾನ್ಯ, ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ…

45 mins ago

ಟಾಸ್​ ಗೆದ್ದ ಚೆನ್ನೈ ಸೂಪರ್​ ಕಿಂಗ್ಸ್​ : ಫೀಲ್ಡಿಂಗ್​ ಆಯ್ಕೆ

ಪ್ಲೇ ಆಫ್​ ಪ್ರವೇಶಕ್ಕೆ ಮಹತ್ವವಾದ ಶನಿವಾರದ ಐಪಿಎಲ್(IPL 2024)​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಹಾಲಿ ಚಾಂಪಿಯನ್ ಚೆನ್ನೈ ಸೂಪರ್​ ಕಿಂಗ್ಸ್​​…

1 hour ago

ಶಿಕ್ಷಕ-ಪದವೀಧರ ಕ್ಷೇತ್ರದ ಅಭ್ಯರ್ಥಿಗಳ ಗೆಲುವು ನಿಶ್ಚಿತ : ಜಾರ್ಜ್

ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆ ಮಾದರಿಯಂ ತೆ, ವಿಧಾನ ಪರಿಷತ್ ಚುನಾವಣೆಯಲ್ಲೂ ಕಾರ್ಯಕರ್ತರುಗಳು ಅಭ್ಯರ್ಥಿಗಳ ಪರವಾಗಿ ಬೂತ್‌ಮಟ್ಟ ದಿಂದ…

2 hours ago

ಆಸ್ಪತ್ರೆಯಲ್ಲಿ ಶುಶ್ರೂಷಕಿಯರ ಪಾತ್ರ ಮಹತ್ವದ್ದು ಡಾ.ಮೋಹನ್‌ಕುಮಾರ್

ಆಸ್ಪತ್ರೆಯಲ್ಲಿ ಶುಶ್ರೂ?ಕಿಯರ ಪಾತ್ರ ಮಹತ್ವದ್ದು, ದಾದಿಯರು ಯಾ ವಾಗಲೂ ಹಸನ್ಮುಖಿಯರಾಗಿ ರೋಗಿಗಳ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮಲ್ಲೇಗೌಡ ಜಿಲ್ಲಾ ಸ್ಪತ್ರೆ…

3 hours ago