Categories: ಮಂಗಳೂರು

ಪ್ರವೀಣ ಪದ್ಯಾಣ ಅವರಿಗೆ ಡಾಕ್ಟರೇಟ್ ಪದವಿ

ಬಂಟ್ವಾಳ: ಕನ್ನಡದಲ್ಲಿ ಮಕ್ಕಳ ಸಾಹಿತ್ಯ: ಮೌಲ್ಯಗಳ ವಿವೇಚನೆ ವಿಷಯದಲ್ಲಿ ಬಂಟ್ವಾಳ ತಾಲೂಕಿನ ಪದ್ಯಾಣದವರಾಗಿರುವ ಉಜಿರೆಯ ಎಸ್.ಡಿ.ಎಂ. ಬಿ.ಎಡ್ ಕಾಲೇಜಿನ ಉಪನ್ಯಾಸಕ ಪ್ರವೀಣ ಪದ್ಯಾಣ ಅವರು ಮಂಗಳೂರಿನ ವಿಶ್ವವಿದ್ಯಾಲಯ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳು ಪೀಠ ಹಾಗೂ ತುಳು ಸ್ನಾತಕೋತ್ತರ ವಿಭಾಗದ ಸಂಯೋಜಕರಾದ ಡಾ. ಮಾಧವ ಎಂ. ಕೆ. ಅವರ ಮಾರ್ಗದರ್ಶನದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಸಲ್ಲಿಸಿದ ಸಂಶೋಧನಾ ಮಹಾಪ್ರಬಂಧಕ್ಕೆ ಮಂಗಳೂರು ವಿವಿಯು ಡಾಕ್ಟರೇಟ್ ಪದವಿ ನೀಡಿದೆ.

ಇವರು ನಿವೃತ್ತ ಮುಖ್ಯೋಪಾಧ್ಯಾಯ ಬಂಟ್ವಾಳ ತಾಲೂಕಿನ ಪದ್ಯಾಣ ತಿಮ್ಮಣ್ಣ ಭಟ್ ಮತ್ತು ಈಶ್ವರಿ ದಂಪತಿಯ ದ್ವಿತೀಯ ಪುತ್ರ. ಕಾಸರಗೋಡಿನಲ್ಲಿ ಕನ್ನಡ ಪತ್ರಿಕೋದ್ಯಮ ಇವರ ಪ್ರಕಟಿತ ಕೃತಿ. ಜಾನಪದ ತಜ್ಞ ಹಂಪಿ ವಿವಿಯ ನಿವೃತ್ತ ಪ್ರಾಧ್ಯಾಪಕ ಪ್ರೊ. ಎ.ವಿ. ನಾವಡ ಅವರ ಮಾರ್ಗದರ್ಶನದಲ್ಲಿ ಪುರಂದರದಾಸರ ಪ್ರತಿಮಾ ಜಗತ್ತು ವಿಷಯದಲ್ಲಿ ಎಂ.ಫಿಲ್ ಪದವಿ ಪಡೆದಿರುವ ಇವರು ಟಿಇಟಿ, ರಾಷ್ಟ್ರೀಯ ಶಿಕ್ಷಣ ನೀತಿ ಮೊದಲಾದ ವಿಷಯಗಳಲ್ಲಿ ಹಲವಾರು ತರಬೇತಿ, ಕಾರ್ಯಾಗಾರಗಳಲ್ಲಿ ಸಂಪನ್ಮೂಲ ವ್ಯಕ್ತಿ. ರಾಷ್ಟ್ರೀಯ, ಅಂತಾರಾಷ್ಟ್ರೀಯ ವಿಚಾರ ಸಂಕಿರಣಗಳಲ್ಲಿ ಅನೇಕ ಪ್ರಬಂಧ ಮಂಡನೆಯನ್ನೂ ಮಾಡಿರುತ್ತಾರೆ. ಮಕ್ಕಳ ಸಾಹಿತ್ಯ, ಪತ್ರಿಕೋದ್ಯಮ, ಯಕ್ಷಗಾನ, ಸಂಶೋಧನೆ ಇವರ ಆಸಕ್ತಿಯ ಕ್ಷೇತ್ರಗಳು.

Sneha Gowda

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

2 hours ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

3 hours ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

3 hours ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

4 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

5 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

5 hours ago