ಮೈಸೂರು: ಕೆಎಂಪಿಕೆ ಟ್ರಸ್ಟ್ ಹಾಗೂ ಪರಿಸರ ಸ್ನೇಹಿ ತಂಡದ ವತಿಯಿಂದ ಅಂತರಾಷ್ಟ್ರೀಯ ಗುಬ್ಬಚ್ಚಿ ದಿನಾಚರಣೆ ಅಂಗವಾಗಿ ಸಣ್ಣ, ಪುಟ್ಟ ಪ್ರಾಣಿ ಪಕ್ಷಿಗಳ ಸಂರಕ್ಷಣೆಯ ಜಾಗೃತಿಗಾಗಿ ನಗರದಲ್ಲಿ ಸೈಕಲ್ ಜಾಥಾ ನಡೆಸಲಾಯಿತು.
ಈ ಸೈಕಲ್ ಜಾಥಾದಲ್ಲಿ ಸುಮಾರು 350ಕ್ಕೂ ಹೆಚ್ಚು ಮಂದಿ ಸೈಕಲ್ ಸವಾರರು ಭಾಗವಹಿಸಿ ಗಮನಸೆಳೆದರು. ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಿಂದ ಹೊರಟ ಜಾಥಾ ಜಯಚಾಮರಾಜೇಂದ್ರ ವೃತ್ತ ಚಾಮರಾಜ ಜೋಡಿ ರಸ್ತೆ, ರಾಮಸ್ವಾಮಿ ವೃತ್ತ, ಮಹಾರಾಜ ಕಾಲೇಜು ಮೈದಾನ, ಕೃಷ್ಣಬುಲೇ ವಾರ್ಡ್ ರೋಡ್, ಕೌಟಿಲ್ಯ ವೃತ್ತದಿಂದ ಕುಕ್ಕರಹಳ್ಳಿ ಕೆರೆ ವರೆಗೂ ನಡೆಯಿತು.
ಜಾಥಾದಲ್ಲಿ ಎನ್.ಸಿ.ಸಿ ಕೆಡೆಟ್ ಗಳು. ಮಹಿಳೆಯರು, ಹಿರಿಯ ನಾಗರಿಕರು, ಸಣ್ಣಮಕ್ಕಳು ಭಾಗವಹಿಸಿ ಪರಿಸರ ಜಾಗೃತಿ ಮೂಡಿಸಿದರು. ದಾರಿಯುದ್ದಕ್ಕೂ ಬೇಸಿಗೆಯಲ್ಲಿ ಪ್ರಾಣಿಪಕ್ಷಿಗಳಿಗೆ ಮನೆಗಳ ಮೇಲೆ ತಾರಸಿ ಆಹಾರ ನೀರು ಇಡೋಣ ಎಂಬ ಘೋಷಣೆಗಳ ಭಿತ್ತಿಪತ್ರದ ಮೂಲಕ ಪರಿಸರ ಕಾಳಜಿ ಸಂದೇಶ ಸಾರಿ ಜನರಿಗೆ ಜಾಗೃತಿ ಮೂಡಿಸಿದರು.
ಕುಕ್ಕರಹಳ್ಳಿ ಕೆರೆ ತಲುಪಿದ ಎಲ್ಲ ಸೈಕಲ್ ಸವಾರರಿಗೂ ಮೈಸೂರು ನಗರ ಪ್ರಾಧಿಕಾರದ ಅಧ್ಯಕ್ಷ ಹೆಚ್. ವಿ ರಾಜೀವ್ ಅಭಿನಂದನಾ ಪತ್ರ ವಿತರಿಸಿದರು, ಸೈಕಲ್ ಜಾಥಾವನ್ನು ಶಾಸಕ ಎಲ್ ನಾಗೇಂದ್ರ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರ ಅಧ್ಯಕ್ಷ ಹೇಮಂತ್ ಕುಮಾರ್ ಗೌಡ, ಎನ್.ಎಮ್ ನವೀನ್ ಕುಮಾರ್, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಡ್ಡಿಕೆರೆ ಗೋಪಾಲ್, ಮೇಯರ್ ಸುನಂದಾ ಪಾಲನೇತ್ರ ಡಾ. ಎಸ್ ಪಿ ಯೋಗಣ್ಣ ,ಜೀವಧಾರ ರಕ್ತನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ಸೇರಿದಂತೆ ಹಲವರಿದ್ದರು.