News Karnataka Kannada
Thursday, May 02 2024

ಪ್ರಾಣ ಉಳಿಸಿದ ಯುವಕ

New Project (7)
Photo Credit :

ಬೆಳ್ತಂಗಡಿ : ವಿದ್ಯುತ್ ತಂತಿಗೆ ತಾಗುವಂತಿದ್ದ ತೆಂಗಿನ ಗರಿ ತುಂಡರಿಸುವ ಸಂದರ್ಭ ಅಕಸ್ಮಿಕವಾಗಿ ವಿದ್ಯುತ್ ಶಾಕ್ ಹೊಡೆದು ಮೂರ್ಛೆ ತಪ್ಪಿ ಬಿದ್ದ ಯುವಕನಿಗೆ ಸ್ಥಳೀಯ ಯುವಕನೊಬ್ಬ ಪ್ರಥಮ ಚಿಕಿತ್ಸೆ ನೀಡಿ ಪ್ರಾಣಪಾಯದಿಂದ ಪಾರು ಮಾಡಿದ ಘಟನೆ ಶನಿವಾರ ಬೆಳಗ್ಗೆ ಬೆಳ್ತಂಗಡಿ ತಾಲೂಕಿನ ಕುಂಟಿನಿ ಬಳಿ ನಡೆದಿದೆ.

ಕುಂಟಿನಿ ಸಮೀಪ ರಿಜ್ವಾನ್ ಅವರು ತಮ್ಮ ಮನೆ ಸಮೀಪ ತೆಂಗಿನ ಮರದ ಗರಿ ವಿದ್ಯುತ್ ತಂತಿಗೆ ಬೀಳುವ ಸಂಭವವಿದ್ದುದನ್ನು ಗಮನಿಸಿ, ಅದನ್ನು ತುಂಡಾರಿಸಲು ಯತ್ನಿಸಿದ್ದಾರೆ. ಈ ವೇಳೆ ಗರಿ ವಿದ್ಯುತ್ ತಂತಿಗೆ ತಾಗಿದ ಪರಿಣಾಮ ರಿಜ್ವಾನ್ ವಿದ್ಯುತ್ ಶಾಕ್ ಹೊಡೆದು ಕೆಳಗೆ ಬಿದ್ದು ಮೂರ್ಛೆ ತಪ್ಪಿದ್ದರೆನ್ನಲಾಗಿದೆ. ಸಮೀಪದಲ್ಲೇ ಪೈಂಟ್ ಕೆಲಸ ಮಾಡುತ್ತಿದ್ದ ಆಸಿಫ್ ಅವರಿಗೆ ವಿಚಾರ ತಿಳಿದಿದ್ದು ಕೂಡಲೇ ಸ್ಥಳಕ್ಕೆ ತೆರಳಿದ್ದಾರೆ. ರಿಜ್ವಾನ್ ಅವರನ್ನು ಬದುಕಿಸಲು ತನ್ನ ಬಾಯಿಂದ ಕೃತಕ ಉಸಿರಾಟ ನೀಡಿ ಅವರ‌ನ್ನು ಪ್ರಾಣಪಾಯದಿಂದ ಪಾರು ಮಾಡಿದ್ದಾರೆ. ಬಳಿಕ ರಿಜ್ವಾನ್ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಸೀಫ್ ಅವರ ಈ ಮಾನವೀಯತೆ ಹಾಗೂ ಜೀವ ಉಳಿಸಲು ಮಾಡಿದ ಸಕಾಲಿಕ ಸ್ಪಂದನೆಗೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು