ಮಂಗಳೂರು: ಕಾಲೇಜಿನ ಪ್ರಾಧ್ಯಾಪಕಿ ಓರ್ವರ ಬಗ್ಗೆ ಕೀಳುಮಟ್ಟದ ಭಾಷೆಯಲ್ಲಿ ಹಾಗೂ ಮಾನಹಾನಿಕರವಾಗಿ ಪತ್ರವನ್ನು ಬರೆದು ಸಾರ್ವಜನಿಕ ಸ್ಥಳಗಳಲ್ಲಿ ಪೋಸ್ಟರ್ ಅಂಟಿಸಿ ಕಿರುಕುಳ ನೀಡುತ್ತಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತಿಷ್ಠಿತ ಕಾಲೇಜಿನ ಸಂಚಾಲಕ ಹಾಗೂ ಇಬ್ಬರು ಪ್ರಾಧ್ಯಾಪಕರನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.
ಬೆಳ್ತಂಗಡಿ ತಾಲ್ಲೂಕಿನ ಲಾಯಿಲ ನಿವಾಸಿ ಪ್ರಕಾಶ್ ಶೆಣೈ ಬಂಟ್ವಾಳ ತಾಲೂಕಿನ ಸಿದ್ಧಕಟ್ಟೆ ನಿವಾಸಿ ಪ್ರದೀಪ್ ಪೂಜಾರಿ ಹಾಗೂ ಉಡುಪಿ ಹೆಬ್ರಿ ತಾಲ್ಲೂಕಿನ ಸೀತಾನದಿ ನಿವಾಸಿ ತಾರಾನಾಥ ಶೆಟ್ಟಿ ಬಂಧಿತರೆಂದು ಪೊಲೀಸರು ತಿಳಿಸಿದ್ದು ಆರೋಪಿಗಳು ಕಾಲೇಜಿನ ಸಂಚಾಲಕ ಹಾಗೂ ಪ್ರಾಧ್ಯಾಪಕರಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಪ್ರತಿಷ್ಠಿತ ಕಾಲೇಜೊಂದರ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದ ನಡುವಿನ ಪ್ರಾಧ್ಯಾಪಕರ ನೇಮಕಾತಿ ಹಾಗೂ ಆಡಳಿತದ ವಿಚಾರದ ಗಲಾಟೆಯಲ್ಲಿ ಕಾಲೇಜಿನ ಪ್ರಾಧ್ಯಾಪಕಿ ವಿರುದ್ಧ ಮಾನಹಾನಿ ಪತ್ರವನ್ನು ಪೋಸ್ಟರ್ ಗಳು ತಯಾರಿಸಿ ಅಂಚೆ ಮೂಲಕ ಸಹೋದ್ಯೋಗಿ ಪ್ರಾಧ್ಯಾಪಕರಿಗೆ ಕಾಲೇಜಿನ ಮುಖ್ಯಸ್ಥರಿಗೆ ಶಿಕ್ಷಣ ಇಲಾಖೆಯ ಉನ್ನತ ದರ್ಜೆಯ ಅಧಿಕಾರಿಗಳಿಗೆ ಕಳುಹಿಸಿ ಮಾನಹಾನಿ ಜೀವ ಬೆದರಿಕೆ ಹಾಗೂ ಮಾನಸಿಕ ಕಿರುಕುಳ ನೀಡಿತ್ತು ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಾಧ್ಯಾಪಕಿ ನೀಡಿದ ದೂರಿನಂತೆ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಈ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳು ಕಾಲೇಜಿನ ಸಂಚಾಲಕ ಹಾಗೂ ಪ್ರಾಧ್ಯಾಪಕರಾಗಿದ್ದು ಅವರ ಜೊತೆಗೂಡಿ ಪ್ರಾಧ್ಯಾಪಕಿಯ ವಿರುದ್ಧ ಬರಹಗಳನ್ನು ಪ್ರಾರಂಭದಲ್ಲಿ ಪೋಸ್ಟ್ ಕಾರ್ಡ್ ಇನ್ಲ್ಯಾಂಡ್ ಲೆಟರ್ ಮೂಲಕ ಪ್ರಾಧ್ಯಾಪಕಿಯ ಭಾವಚಿತ್ರದೊಂದಿಗೆ ಸಹದ್ಯೋಗಿ ಪ್ರಾಧ್ಯಾಪಕರಿಗೆ ಕಾಲೇಜಿನ ಮುಖ್ಯಸ್ಥರಿಗೆ ಶಿಕ್ಷಣ ಇಲಾಖೆಯ ಉನ್ನತ ದರ್ಜೆಯ ಅಧಿಕಾರಿಗಳಿಗೆ ಅಂಚೆ ಮೂಲಕ ಕಳುಹಿಸಿ ಕೊಡುತ್ತಿದ್ದರು .
ಇದಾದ ನಂತರ ಪ್ರಾಧ್ಯಾಪಕಿಯ ಮೊಬೈಲ್ ನಂಬರ್ ಹಾಗೂ ಇಮೇಲ್ ಐಡಿಯನ್ನು ನಮೂದಿಸಿ ಅಶ್ಲೀಲವಾಗಿ ಬರೆದು ಪೋಸ್ಟರ್ ಗಳನ್ನು ತಯಾರಿಸಿ ಸುಳ್ಯ ,ಸುಬ್ರಹ್ಮಣ್ಯ , ಸಂಪಾಜೆ ,ಮಡಿಕೇರಿ ,ಮೈಸೂರು , ಚಿಕ್ಕಮಗಳೂರು ,ಮೂಡಿಗೆರೆ ,ಬಾಳೆಹೊನ್ನೂರು ,ಎನ್ ಆರ್ ಪುರ ,ಶಿವಮೊಗ್ಗ , ಮುಂತಾದ ಬಸ್ಟಾಂಡ್ ಗಳ ಸಾರ್ವಜನಿಕ ಶೌಚಾಲಯಗಳಲ್ಲಿ ಅಂಟಿಸಿದ್ದು ಇದನ್ನು ನೋಡಿದ ಸಾರ್ವಜನಿಕರು ಪ್ರಾಧ್ಯಾಪಕಿಗೆ ಕರೆ ಮಾಡಿ ಅಶ್ಲೀಲವಾಗಿ ಮಾತನಾಡಿ ಮಾನಸಿಕಿರುಕುಳ ನೀಡುತ್ತಿದ್ದರು.
ಆರೋಪಿಗಳ ಪೈಕಿ ಪ್ರದೀಪ್ ಪೂಜಾರಿ ಎಂಬಾತನ ವಿರುದ್ಧ ಈ ಹಿಂದೆ 2019 ನೇ ಇಸವಿಯಲ್ಲಿ ಕಾಲೇಜು ಪ್ರಾಧ್ಯಾಪಕಿ ಓರ್ವ ಮಾನಹಾನಿಗೆ ಯತ್ನಿಸಿದ ಪ್ರಕರಣ ದಾಖಲಾಗಿರುತ್ತದೆ ಈ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು ಅವರ ಪತ್ತೆ ಕಾರ್ಯ ಮುಂದುವರಿದಿದೆ ಆರೋಪಿಗಳಿಂದ 3ಮೊಬೈಲ್ ಫೋನ್ ಗಳನ್ನು ಸ್ವಾಧೀನಪಡಿಸಿದ್ದು ವಿಚಾರಣೆ ಮುಂದುವರೆದಿದೆ.