ಮಂಗಳೂರು: ಪಿಎಸ್ಐ ನೇಮಕಾತಿಯಲ್ಲಿ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಗೆ ಸಿಐಡಿ ನೋಟಿಸ್ ನೀಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ವಿಧಾನಸಭೆ ಪ್ರತಿಪಕ್ಷ ಉಪನಾಯಕ ಯುಟಿ ಖಾದರ್ ಸರಕಾರದ ವೈಫಲ್ಯ ಮರೆಮಾಚಲು ಖರ್ಗೆ ಗೆ ನೋಟೀಸ್ ನೀಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಇಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ಪಬ್ಲಿಕ್ ಡೊಮೈನ್ನಲ್ಲಿ ಇದ್ದದ್ದನ್ನೇ ಮಾತನಾಡಿದ್ದು, ಇವರ ನೋಟಿಸುಗಳಿಗೆ ಕಾಂಗ್ರೆಸ್ ಜಗ್ಗಲ್ಲ ಎಂದಿದ್ದಾರೆ. ಖರ್ಗೆಗೆ ನೋಟೀಸ್ ನೀಡಿದವರು ನೇಮಕಾತಿ ಮುಖ್ಯಸ್ಥರಿಗೆ ಏಕೆ ನೋಟೀಸ್ ನೀಡಿಲ್ಲ ಎಂದು ಖಾದರ್ ಪ್ರಶ್ನಿಸಿದ್ದಾರೆ.
ಸರಕಾರದ ವಿರುದ್ಧ ಮಾತನಾಡಬಾರದೆನ್ನುವ ಧೋರಣೆ ಸರಿಯಲ್ಲ. ನೇಮಕಾತಿ ಅಕ್ರಮದಲ್ಲಿ ಇಡೀ ಇಲಾಖೆಯೇ ಭಾಗಿಯಾಗಿದೆ ಎಂದು ಆರೋಪಿಸಿದ ಖಾದರ್, ಮೊದಲು ನೇಮಕಾತಿ ಮುಖ್ಯಸ್ಥರನ್ನು ಕರೆದು ಗಿಲ್ ಮಾಡಬೇಕಿತ್ತು, ಆದರೆ ಇದ್ಯಾವುದೂ ಆಗಿಲ್ಲ. ಒಟ್ಟು ರಾಜ್ಯದಲ್ಲಿ ಭ್ರಷ್ಟಾಚಾರ ಖುಲ್ಲಂ ಖುಲ್ಲ ನಡೆಯುತ್ತಿದೆ ಎಂದು ಕಿಡಿಕಾರಿದ್ದಾರೆ.
ಪಿಎಸ್ ಐ ನೇಮಕಾತಿ ಅಕ್ರಮದಲ್ಲಿ ತೊಡಗಿದ್ದವರು ಯಾವ ಪಕ್ಷದವರು ಅನ್ನೋದು ಮುಖ್ಯವಲ್ಲ, ಬ್ಲ್ಯಾಕ್ ಲಿಸ್ಟ್ ನಲ್ಲಿದ್ದ ಕಾಲೇಜನ್ನು ಪರೀಕ್ಷಾ ಕೇಂದ್ರ ಮಾಡಿಸಿದ್ದೇಕೆ ಎಂದು ಪ್ರಶ್ನಿಸಿದ್ದಾರೆ. ನೇಮಕಾತಿಯಲ್ಲಿ ನಡೆದ ಭ್ರಷ್ಟಾಚಾರದಲ್ಲಿ ಪೊಲೀಸರ ವಿರುದ್ಧವೂ ತನಿಖೆಯಾಗಿ ಬಂಧನವಾಗಲಿ, ಪೊಲೀಸರ ತನಿಖೆಯನ್ನು ಸಿಐಡಿ ಪೊಲೀಸರೇ ಮಾಡುತ್ತಿರುವುದು ಸರಿಯಲ್ಲ, ನೇಮಕಾತಿ ನಡೆಸಿದ ಇಲಾಖಾ ಮುಖ್ಯಸ್ಥರೇ, ಸಿಐಡಿ ಮುಖ್ಯಸ್ಥರಾಗಿರುತ್ತಾರೆ ಎಂದು ಹೇಳಿದ್ದಾರೆ.
ಅಕ್ಷಯ ತದಿಗೆಗೆ ಮುಸ್ಲಿಂ ಜ್ಯುವೆಲ್ಲರಿ ಬಹಿಷ್ಕಾರಕ್ಕೆ ಪ್ರಮೋದ್ ಮುತಾಲಿಕ್ ಕರೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಖಾದರ್, ಇದು ಮಾತನಾಡುವವರ ಸಮಸ್ಯೆಯಲ್ಲ ಸರಕಾರ ಸುಮ್ಮನಿರುವುದೇ ಸಮಸ್ಯೆ ಎಂದರು, ಆಡಳಿತ ಸರಕಾರವೇ ಬೇಕಾಬಿಟ್ಟಿ ಮಾತನಾಡಲು ಬಿಟ್ಟು ಸುಮ್ಮನಿದೆ. ವಿಶ್ವದ ಯಾವುದೇ ದೇಶದಲ್ಲಿ ಇಂತಹ ವಿಚಾರಗಳಿಲ್ಲ, ಸರಕಾರದ ಮೌನ ದೇಶಕ್ಕೆ ದೊಡ್ಡ ನಷ್ಟ ತಂದಿಡಲಿದ್ದು, ದೇಶದ ಮೇಲೆ ಪ್ರೀತಿ ಇದ್ದರೆ ಸರಕಾರ ಕ್ರಮ ಕೈಗೊಳ್ಳಲಿ ಎಂದು ಆಗ್ರಹಿಸಿದ್ದಾರೆ.
ಇನ್ನು ಕಾಂಗ್ರೆಸ್ ನ ಹತ್ತು ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂದು ನಳಿನ್ ಕುಮಾರ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಶಾಸಕ ಖಾದರ್, ನಳಿನ್ ಈ ಹಿಂದೆ ಒಂದು ಡಾಲರ್ ಗೆ 120 ಮಾತ್ತೇವೆ ಎಂದಿದ್ದರು, ರೂ.2000 3 ಮರಳು ಕೊದ್ದೇವೆ ಎಂದಿದ್ದರು. ನಳಿನ್ ಕುಮಾರ್ ಅವರಿಂದ ಇದ್ಯಾವುದಾದ್ರೂ ಆಗಿದೆಯಾ, ಈ ವಿಚಾರವೂ ಹಾಗೆಯೇ ಎಂದು ಭಾವಿಸಿಕೊಳ್ಳಿ ಎಂದು ವ್ಯಂಗ್ಯವಾಡಿದ್ದಾರೆ.
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ