ಬೆಳ್ತಂಗಡಿ ತಾಲೂಕಿನ ಸಾಂಸ್ಕೃತಿಕ ಸಂಘಟನೆ “ಸಮೂಹ ಉಜಿರೆ” ಇದ ರ ಆಶ್ರಯದಲ್ಲಿ ಮಾ. 2 ರಂದು ಉಜಿರೆಯ ವನರಂಗ ಬಯಲು ರಂಗಮಂದಿರದಲ್ಲಿ ಪ್ರದರ್ಶನಗೊಂಡ ರಂಗಾಯಣ ಶಿವಮೊಗ್ಗ ಇವರ ಭಾರತೀಯ ಸಂವಿಧಾನ ಯೋಜನೆಯಡಿ ಸಂಯೋಜನೆಗೊಂಡ ನಾಟಕ “ವಿ ದ ಪೀಪಲ್ ಆಫ್ ಇಂಡಿಯಾ” ಪ್ರೇಕ್ಷಕರ ಅಪಾರ ಮೆಚ್ಚುಗೆಗೆ ಪಾತ್ರವಾಯಿತು.
ಜಗತ್ತಿನ ಅತಿ ದೊಡ್ಡ ಪ್ರಜಾಸತ್ತೆ ರಾಷ್ಟ್ರವಾದ ಭಾರತದ ವಿಶಿಷ್ಟವೂ, ಅನನ್ಯವೂ ಆದ ಸಂವಿಧಾನ ರಚನೆಯ ಹಿನ್ನೆಲೆ ಹಾಗೂ ಅದರ ಪರಿಣಾಮಗಳನ್ನು ಕಲಾವಿದರು ಪರಿಣಾಮಕಾರಿಯಾಗಿ ಅಭಿನಯಿಸಿ ತೋರಿಸಿದರು.
ಸಂವಿಧಾನದ ಶ್ರೇಷ್ಠತೆ ಹಾಗೂ ಮಹತ್ವವನ್ನು ಎಳೆ ಎಳೆಯಾಗಿ ಅಭಿವ್ಯಕ್ತಿ ಗೊಳಿಸಿದರು. ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಉಜಿರೆ ಗ್ರಾ ಪಂ.ಅಧ್ಯಕ್ಷೆ ಪುಷ್ಪಾವತಿ ಆರ್ .ಶೆಟ್ಟಿ, ಭುಜಬಲಿ ಧರ್ಮಸ್ಥಳ , ಉಪನ್ಯಾಸಕರು ,ಉಜಿರೆ , ಬೆಳ್ತಂಗಡಿ ಮತ್ತು ಧರ್ಮಸ್ಥಳ ಪರಿಸರದ ಅಪಾರ ಸಂಖ್ಯೆಯ ಕಲಾಭಿಮಾನಿಗಳು, ವಿದ್ಯಾರ್ಥಿಗಳು ನಾಟಕವನ್ನು ವೀಕ್ಷಿಸಿದರು.
ಸಮೂಹ ಉಜಿರೆಯ ಅಧ್ಯಕ್ಷ ಡಾ.ಕುಮಾರ್ ಹೆಗ್ಡೆ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸರ್ವರನ್ನು ಸ್ವಾಗತಿಸಿದರು. ರಂಗಾಯಣ ಶಿವಮೊಗ್ಗ ತಂಡದ ವ್ಯವಸ್ಥಾಪಕ ಶೈಲೇಶ್, ತೀರ್ಥಹಳ್ಳಿ ನಾಟಕ ತಂಡವನ್ನು ಪರಿಚಯಿಸಿ ಸರ್ವರಿಗೂ ವಂದನೆ ಸಲ್ಲಿಸಿದರು. ಮಹೇಶ್ ಶೆಟ್ಟಿ ಹಾಗೂ ಸೋಮಶೇಖರ್ ಸಹಕರಿಸಿದರು.
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…