Categories: ಮಂಗಳೂರು

ಪ್ರೊ. ಯಶೋವರ್ಮರವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ

ಬೆಳ್ತಂಗಡಿ: ಧರ್ಮಸ್ಥಳ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರೊಫೆಸರ್ ಯಶೋವರ್ಮರವರು ಅನಾರೋಗ್ಯದಿಂದ ದಿನಾಂಕ
22-5-2022 ರಂದು ಸಿಂಗಪುರದಲ್ಲಿ ವಿಧಿವಶರಾಗಿರುತ್ತಾರೆ.

1993 ನೇ ಇಸವಿಯಿಂದ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜ್ಯುಕೇಶನ್ ಟ್ರಸ್ಟ್‍ನ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸುತ್ತಿದ್ದ, ಪ್ರೊಫೆಸರ್ ಯಶೋವರ್ಮರವರು 2015 ರವರೆಗೆ ಉಜಿರೆ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ
ಪ್ರಾಂಶುಪಾಲರಾಗಿಯೂ ಸೇವೆ ಸಲ್ಲಿಸಿದ್ದರು.

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆಯವರ ನಿಕಟವರ್ತಿಯಾಗಿದ್ದ ಅವರು ಶ್ರೀಮತಿ ಹೇಮಾವತಿ ವೀರೇಂದ್ರ ಹೆಗ್ಗಡೆಯವರ ಸಹೋದರರಾಗಿದ್ದರು. ಪ್ರೊಫೆಸರ್ ಯಶೋವರ್ಮರವರ ಪಾರ್ಥಿವ ಶರೀರವನ್ನು ಕರೆತರಲು ಕೇಂದ್ರ ಸರಕಾರದ ಸಹಕಾರದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಮಂಗಳವಾರ ಮುಂಜಾನೆ ಬೆಂಗಳೂರಿಗೆ ವಿಮಾನದಲ್ಲಿ ಬಂದಿಳಿಯಲಿದೆ. ತದನಂತರ
ಉಜಿರೆಗೆ ರಸ್ತೆ ಮೂಲಕ ಕರೆತರಲು ವ್ಯವಸ್ಥೆ ಮಾಡಲಾಗಿದೆ.

ಅಂತಿಮ ದರ್ಶನಕ್ಕೆ ವ್ಯವಸ್ಥೆ :
ಮಂಗಳವಾರ ಮಧ್ಯಾಹ್ನ 12.30 ಕ್ಕೆ ಸರಿಯಾಗಿ ಪ್ರೊl ಯಶೋವರ್ಮರವರ ಪಾರ್ಥಿವ ಶರೀರ ಕರೆತರುವ ವಾಹನವು ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮವನ್ನು ಪ್ರವೇಶಿಸಲಿದ್ದು, ಚಾರ್ಮಾಡಿ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಿಂದ ಉಜಿರೆ ವೃತ್ತದವರೆಗೆ ಸರ್ವಾಲಂಕೃತ ವಾಹನದಲ್ಲಿ ನೂರಾರು ಅಭಿಮಾನಿಗಳ ವಾಹನ ಜಾಥಾದಲ್ಲಿ ಕರೆತರಲಾಗುವುದು.

ನಂತರ ಉಜಿರೆ ವೃತ್ತದಿಂದ ಎಸ್.ಡಿ.ಎಂ. ಕಾಲೇಜಿನವರೆಗೆ ಅಭಿಮಾನಿಗಳ ಪಾದಯಾತ್ರೆಯ ಮೆರವಣಿಗೆಯಲ್ಲಿ ಕರೆತಂದು ಅಂತಿಮ ದರ್ಶನಕ್ಕೆ ಉಜಿರೆ ಕಾಲೇಜಿನಲ್ಲಿ ಮಧ್ಯಾಹ್ನ 2.00 ರಿಂದ 5.30 ರವರೆಗೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ.

ಪ್ರೊl ಯಶೋವರ್ಮರವರ ಅಂತಿಮ ದರ್ಶನ ವ್ಯವಸ್ಥೆಯ ಕುರಿತಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರು ಸ್ಥಳ ಪರಿಶೀಲನೆ ನಡೆಸಿದರು. ಮೃತರ ಗೌರವಾರ್ಥ ಪ್ರೊ. ಯಶೋವರ್ಮರವರ ಅಂತಿಮ ದರ್ಶನ ಪಡೆಯಲು ಮಂಗಳವಾರ ಮುಂಜಾನೆ 12 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಉಜಿರೆ ಪೇಟೆಯ ಎಲ್ಲ ಅಂಗಡಿ ಮುಗ್ಗಟ್ಟುಗಳನ್ನು ಸ್ಥಗಿತಗೊಳಿಸುವುದಾಗಿ ವರ್ತಕ ಸಂಘದ ಅಧ್ಯಕ್ಷ ಅರವಿಂದ್ ಕಾರಂತರವರು ತಿಳಿಸಿದ್ದಾರೆ.

ಇದೇ ಸಂದರ್ಭ ಉಜಿರೆ ಪೇಟೆಯಲ್ಲಿ ಹರತಾಳ ಆಚರಿಸುವುದಾಗಿ ಉಜಿರೆ ಆಟೋರಿಕ್ಷಾ ಮಾಲಕ ಚಾಲಕ ಸಂಘ ಮತ್ತು ಗ್ಯಾರೇಜ್ ಮಾಲಕರ ಸಂಘವು ನಿರ್ಧರಿಸಿರುತ್ತದೆ. ಈ ಸಂಬಂಧ ಉಜಿರೆ ಕಾಲೇಜಿನಲ್ಲಿ ನಡೆದ ಸಮಾಲೋಚನಾ ಸಭೆಯ ನೇತ್ರತ್ವ ವಹಿಸಿ
ಮಾತನಾಡಿದ ಶಾಸಕರು ಉಜಿರೆ ಗ್ರಾಮವಲ್ಲದೆ ಇಡೀ ನಾಡಿನ ಶಿಕ್ಷಣ ವ್ಯವಸ್ಥೆಗೆ ಪ್ರೊ. ಯಶೋವರ್ಮರವರು ಅನನ್ಯ ಕಾಣಿಕೆಯನ್ನು ನೀಡಿದ್ದು, ಅವರ ಅಂತಿಮ ಯಾತ್ರೆಯು ಗೌರವಯುತವಾಗಿ ನಡೆಸುವಂತೆ ಸಹಕಾರ ನೀಡಬೇಕೆಂದು ಕೋರಿದರು.

ಸಭೆಯಲ್ಲಿ ಉಜಿರೆ ಗ್ರಾಮದ ಹಿರಿಯ ನಾಗರಿಕರು, ಎಸ್.ಡಿ.ಎಂ. ಕಾಲೇಜಿನ ಪ್ರಾಚಾರ್ಯ ಮತ್ತಿತರ ಅಧಿಕಾರಿಗಳು, ಗ್ರಾಮಾಭಿವೃದ್ಧಿ ಯೋಜನೆಯ ಅಧಿಕಾರಿಗಳು, ಶರತ್‍ಕೃಷ್ಣ ಪಡ್ವೆಟ್ಣಾಯ, ಲಕ್ಷ್ಮೀ ಗ್ರೂಪ್ಸ್‌ನ ಮೋಹನ್, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಬೆಳ್ತಂಗಡಿ ಆರಕ್ಷಕ ಠಾಣೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Sneha Gowda

Recent Posts

ʼಕೋವಿಶೀಲ್ಡ್ ಲಸಿಕೆ ಪಡೆದವರು ಡ್ಯಾನ್ಸ್ ಮಾಡುವಂತಿಲ್ಲʼ ಎಚ್ಚರಿಕೆ ನೀಡಿದ ಆಮಂತ್ರಣ ಪತ್ರಿಕೆ

ಕೊರೊನಾ ಲಸಿಕೆ ಕೋವಿಶೀಲ್ಡ್​ ಅಭಿವೃದ್ಧಿ ಪಡಿಸಿದ್ದ ದೈತ್ಯ ಫಾರ್ಮಾ ಕಂಪನಿ ಅಸ್ಟ್ರಝೆನೆಕಾ, ಕೋರ್ಟ್​ ಮುಂದೆ ಸತ್ಯವೊಂದನ್ನು ಒಪ್ಪಿಕೊಂಡಿದೆ. ಅದು ಏನೆಂದರೆ…

6 mins ago

ಸಾಮಾಜಿಕ ಜಾಲತಾಣದಲ್ಲಿ ಸುಳ್ಳುಸುದ್ದಿ ಹರಡಿದರೆ ಕಠಿಣ ಕ್ರಮ: ಪೊಲೀಸ್ ಇಲಾಖೆ

ಸಾಮಾಜಿಕ ಜಾಲತಾಣಗಳಲ್ಲಿ ಬೇರೆ-ಬೇರೆ ಸಮುದಾಯ, ಜಾತಿ, ಧರ್ಮ, ವ್ಯಕ್ತಿಗಳ ವಿರುದ್ಧ ಉದ್ದೇಶ  ಪೂರ್ವಕವಾಗಿ ಸುಳ್ಳು ಸುದ್ದಿಗಳನ್ನು ಹರಿಬಿಡುವುದು ಹಾಗೂ ತಮಾಷೆಗಾಗಿ…

14 mins ago

ಮಗುವಿಗೆ ಜನ್ಮ ನೀಡಿದ 13 ವರ್ಷದ ಬಾಲಕಿ: ಇಬ್ಬರು ಪೊಲೀಸರ ವಶಕ್ಕೆ

13 ವರ್ಷದ ಬಾಲಕಿಯೊಬ್ಬಳು ಮಗುವಿಗೆ ಜನ್ಮ ನೀಡಿದ ಘಟನೆ ಮಧ್ಯಪ್ರದೇಶದಲ್ಲಿ ಬೆಳಕಿಗೆ ಬಂದಿದೆ.

24 mins ago

ನಾಳೆ ಎಸ್ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ

ಎಸ್ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶಕ್ಕೆ ದಿನಾಂಕ ನಿಗದಿಯಾಗಿದ್ದು, ನಾಳೆ ಬೆಳಗ್ಗೆ 10.30ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…

38 mins ago

ಭಾರೀ ಮಳೆಗೆ ಬೈಕ್​ ಮೇಲೆ ಉರುಳಿ ಬಿದ್ದ ಮರ: ವ್ಯಕ್ತಿ ಮೃತ್ಯು

ರಾತ್ರಿ ಸುರಿದ ಭಾರೀ ಮಳೆಗೆ ಚಲಿಸುತ್ತಿದ್ದ ಬೈಕ್​ ಮೇಲೆ ಮರ ಬಿದ್ದ ಪರಿಣಾಮ ಸ್ಥಳದಲ್ಲೇ ಸವಾರ ಸಾವನ್ನಪ್ಪಿರುವ ಘಟನೆ ಕೋಲಾರ…

52 mins ago

ಕಾರಿನ ಮೇಲೆ ಹರಿದ ಲಾರಿ​ : 6 ಮಂದಿ ಸಾವು

ರಾಜಸ್ಥಾನದ ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇ ಯಲ್ಲಿ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಆರು ಜನರು ಸಾವನ್ನಪ್ಪಿದ್ದಾರೆ.

54 mins ago