News Karnataka Kannada
Tuesday, April 30 2024
ಮಂಗಳೂರು

ಪ್ಲಾಸ್ಟಿಕ್ ಪಾರ್ಕ್‌ಗೆ ಕೇಂದ್ರದ ಅಂತಿಮ ಒಪ್ಪಿಗೆ ನೀಡಿದೆ : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲು

Bjp's list circulating on social media is false, clarifies Nalin's tweet
Photo Credit :

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಹುನಿರೀಕ್ಷಿತ ಪ್ಲಾಸ್ಟಿಕ್ ಪಾರ್ಕ್ ನಿರ್ಮಾಣಕ್ಕೆ ಕೇಂದ್ರ ಸರಕಾರದ ರಾಸಾಯನಿಕ ಹಾಗೂ ಪೆಟ್ರೋಕೆಮಿಕಲ್ಸ್ ಇಲಾಖೆಯು ಅಂತಿಮ ಒಪ್ಪಿಗೆ ನೀಡಿ ಕೇಂದ್ರದ ಶೇ. ೫೦ ಪಾಲು ಹಣ ಬಿಡುಗಡೆಗೆ ಅಂತಿಮ ಆದೇಶ ನೀಡಿದೆ.

ಕೆ.ಐ.ಎ.ಡಿ.ಬಿ. ಉಳಿಕೆ ಶೇ.50 ಪಾಲು ಹೂಡಿಕೆಯೊಂದಿಗೆ ಈ ಯೋಜನೆಯನ್ನು ಅನುಷ್ಠಾನಗೊಳಿಸಲಿದೆ ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲು ತಿಳಿಸಿದ್ದಾರೆ.

ಈ ಯೋಜನೆಯು ದಕ್ಷಿಣ ಕನ್ನಡ ಜಿಲ್ಲೆಯ ಗಂಜಿಮಠದ ಬಳಿ ಸುಮಾರು 104 ಎಕರೆ ಕೆ.ಐ.ಎ.ಡಿ.ಬಿ. ಪ್ರದೇಶದಲ್ಲಿ ಪ್ರಾರಂಭಗೊಳ್ಳಲಿದೆ ಎಂದು ಅವರು ಹೇಳಿದ್ದಾರೆ.

ಈ ಯೋಜನೆ ಕಾರ್ಯರೂಪಕ್ಕೆ ಬರಲು ಸಹಕರಿಸಿದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರದ ರಾಸಾಯನಿಕ ಖಾತೆಯ ಸಚಿವ ಭಗವಂತ್ ಖೂಬಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ರಾಜ್ಯದ ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರಿಗೆ ನಳಿನ್ ಅಭಿನಂದನೆ ಸಲ್ಲಿಸಿದ್ದಾರೆ.

ಈ ಯೋಜನೆ ದಕ್ಷಿಣ ಕನ್ನಡ ಜಿಲ್ಲೆಗೆ ಬರಲು ಸಹಕರಿಸಿದ ಕೇಂದ್ರ ರಾಸಾಯನಿಕ ಹಾಗೂ ಪೆಟ್ರೋಕೆಮಿಕಲ್ಸ್ ಇಲಾಖೆಯ ಮಾಜಿ ಸಚಿವರಾದ ದಿ. ಅನಂತಕುಮಾರ್, ಸದಾನಂದ ಗೌಡ, ಮಾನ್‌ಸುಖ್ ಮಾಂಡವೀಯ ಅವರಿಗೂ ನಳಿನ್ ಕುಮಾರ್ ಕಟೀಲ್ ಅವರು ವಿಶೇಷ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು