Categories: ಮಂಗಳೂರು

ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜ್ ಕಂಕನಾಡಿ : ಬಸ್ ತಂಗುದಾಣ ಉದ್ಘಾಟನಾ ಸಮಾರಂಭ

ಮಂಗಳೂರು :  ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜ್ ಕಂಕನಾಡಿ ಮಂಗಳೂರು ಇದ್ರ ವತಿಯಿಂದ ನಿರ್ಮಿಸಲ್ಪಟ್ಟ ಕಂಕನಾಡಿ ನೂತನ ಬಸ್ ತಂಗುದಾಣ ಉದ್ಘಾಟನಾ ಸಮಾರಂಭ ಮತ್ತು ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆವರಣದಲ್ಲಿ ನೆರವೇರಿತು.

ಕಾರ್ಯಕ್ರಮದಲ್ಲಿ ನೂತನ ಬಸ್ ತಂಗುದಾಣ ಉದ್ಘಾಟನೆಯನ್ನು ಮಂಗಳೂರು ಮನಪ ಮಹಾ ಪೌರರಾದ ಪ್ರೇಮನಂದ್ ಶೆಟ್ಟಿ ನೆರವೇರಿಸಿದ್ರೆ ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಡಾ. ಪೀಟರ್ ಪೌಲ್ ಸಲ್ಡಾನ ಪೂಜಾ ವಿಧಿ ನೆರವೇರಿಸಿದರು.

ಬಳಿಕ ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು. ಬಳಿಕ ಮಾತನಾಡಿದ ಶಾಸಕ ವೇದವ್ಯಾಸ್, ಮಂಗಳೂರು ಮಹಾನಗರ ಪಾಲಿಕೆ ಸ್ಮಾರ್ಟ್ ಸಿಟಿ ಅಭಿವೃದ್ಧಿ ಪಥದತ್ತ ಸಾಗುತ್ತಿರುವ ಈ ವೇಳೆ ನಗರ ಮಾತ್ರವಲ್ಲದೆ ಜಿಲ್ಲೆಗೆ ರಾಜ್ಯದ ಜನ್ರಿಗೆ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ನೀಡುವ ಸೇವೆ ಅಭೂತಪೂರ್ವವಾಗಿದ್ದು ಕಳೆದ ಹಲವಾರು ವರ್ಷಗಳಿಂದ ಫಾದರ್ ಮುಲ್ಲರ್ ಸಂಸ್ಥೆ ಬಡ ರೋಗಿಗಳ ಕಣ್ಣಿರು ಒರೆಸುವ ಮೂಲಕ ಸಾಮಾಜಕ್ಕೆ ತನ್ನದೇ ಅಧ ಒಂದು ಕೊಡುಗೆ ನೀಡಿದ್ದು ಮುಂದಿನ ದಿನಗಳಲ್ಲಿ ಈ ಸಂಸ್ಥೆಯ ಸೇವೆ ಇನ್ನಷ್ಟು ಆಗಲಿ ಎಂದು ಹಾರೈಸಿದ್ರು.

ಕಾರ್ಯಕ್ರಮದಲ್ಲಿ ಮಂಗಳೂರು ಮನಪ ಸದಸ್ಯರುಗಳಾದ ನವೀನ್ ಡಿಸೋಜ, ಜೆಸಿಂತ ವಿಜಯ್ ಆಲ್ಪ್ರೆಡ್, ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ನಿರ್ದೇಶಕ ಫಾ. ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ, ಎಫ್ಎಂಸಿಐ ಆಡಳಿತ ಅಧಿಕಾರಿ ಫಾ.ರುಡಾಲ್ಫ್ ರವಿಡೇಸಾ, ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಡಳಿತ ಅಧಿಕಾರಿ ಫಾ. ಅಜಿತ್ ಮಿನೇಜಸ್, ಫಾದರ್ ಮುಲ್ಲರ್ ತುಂಬೆ ಆಡಳಿತ ಅಧಿಕಾರಿ ಫಾ ವಿನ್ಸೆಂಟ್ ಮತ್ತಿತರರು ಉಪಸ್ಥಿತರಿದ್ದರು.

Sneha Gowda

Recent Posts

ಜುಲೈ 1ರಿಂದ ಮೂರು ಹೊಸ ಕ್ರಿಮಿನಲ್ ಕಾನೂನು ಜಾರಿ

ಮೂರು ಹೊಸ ಕ್ರಿಮಿನಲ್ ಕಾನೂನುಗಳು ಸರ್ಕಾರದ ಅಧಿಸೂಚನೆಯ ಪ್ರಕಾರ ಜುಲೈ 1ರಿಂದ ಜಾರಿಗೆ ಬರಲಿವೆ. ಇದರಲ್ಲಿ ಭಾರತೀಯ ನ್ಯಾಯ ಸಂಹಿತಾ,…

17 mins ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣ: ಆರೋಪಿ ಬಿಭವ್‌ ಕುಮಾರ್‌ 5 ದಿನ ಕಸ್ಟಡಿಗೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್‌ ಆಗಿರುವ ದಿಲ್ಲಿ ಮುಖ್ಯಮಂತ್ರಿ…

41 mins ago

ಆರ್​ಸಿಬಿ ಮುಂದಿನ ಪಂದ್ಯವನ್ನು ಯಾವ ತಂಡದ ಜೊತೆ ಆಡಲಿದೆ..?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್​ ತಂಡವನ್ನು ಸೋಲಿಸಿ ರಾಯಲ್ಲಾಗಿಯೇ ಪ್ಲೇಆಫ್​ಗೆ ಪ್ರವೇಶಿಸಿದೆ. ಇನ್ನು ಆರ್​ಸಿಬಿ…

54 mins ago

ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ

ನಗರದ ಮಂಗಲಪೇಟ್‌ ಸಮೀಪದ ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.

1 hour ago

ಆಧಾರ್‌ ದುರುಪಯೋಗ: ಕರ್ನಾಟಕದಿಂದ 2.95 ಲಕ್ಷ ದೂರು ದಾಖಲು

ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್‌ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್‌ ಫಾರ್ ಫ್ರಾಡ್‌…

2 hours ago

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ: ಆರೆಂಜ್, ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…

2 hours ago