ಉಡುಪಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳ ಪ್ರದೇಶದಲ್ಲಿ ನಿಷೇಧಾಜ್ಞೆಯನ್ನು ಫೆ.26 ವರೆಗೂ ಮುಂದುವರೆಸಲು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳ ಪ್ರದೇಶದಲ್ಲಿ ನಿಷೇಧಾಜ್ಞೆಯನ್ನು ಫೆ.26 ವರೆಗೂ ಮುಂದುವರೆಸಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆವಿ ರಾಜೇಂದ್ರ ತಮ್ಮ ಆದೇಶದಲ್ಲಿ ನಿಷೇಧಾಜ್ಞೆಯ ವಿಸ್ತರಣೆಯನ್ನು ಘೋಷಿಸಿದ್ದಾರೆ.
ಆದೇಶ ಫೆ.19 ರ ಸಂಜೆ 6 ರಿಂದ ಫೆ.26 ರ ಸಂಜೆ 6 ವರೆಗೆ ಶಾಲಾ ಕಾಲೇಜುಗಳಿರುವ 200 ಮೀಟರ್ ಗಳ ಪ್ರದೇಶದಲ್ಲಿ ಅನ್ವಯವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.