ಬಂಟ್ಚಾಳ: ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ ಮತ್ತು ಬ್ಯಾಂಕ್ ಆಫ್ ಬರೋಡಾ ಸಹಯೋಗದೊಂದಿಗೆ ಸಿರಿ ಮಾರಾಟ ಮೇಳ ಆಯೋಜಿಸಲಾಗಿದೆ. ಬುಧವಾರ ಬಂಟ್ವಾಳದ ಶ್ರೀ ಮಂಜುನಾಥೇಶ್ವರ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಬ್ಯಾಂಕ್ ಆಫ್ ಬರೋಡಾ ಪ್ರಧಾನ ವ್ಯವಸ್ಥಾಪಕಿ ಗಾಯತ್ರಿ ಆರ್. ಮತ್ತು ಉಪವ್ಯವಸ್ಥಾಪಕ ಗೋಪಾಲಕೃಷ್ಣ ಆರ್. ಉದ್ಘಾಟಿಸಿದರು.
ಈ ಸಂದರ್ಭ ಮಾತನಾಡಿದ ಅವರು ಬ್ಯಾಂಕ್ ಮತ್ತು ಗ್ರಾಹಕರ ಮಧ್ಯೆ ಬಾಂಧವ್ಯ ವೃದ್ಧಿಗೆ ಇದು ಸಹಕಾರಿ ಆಗಲಿದೆ ಎಂದರು.
ಏಪ್ರಿಲ್ 6 ರವರೆಗೆ ಮೇಳ ನಡೆಯಲಿದೆ. ಸಿರಿ ವ್ಯವಸ್ಥಾಪಕ ನಿರ್ದೇಶಕ ಜನಾರ್ದನ ಮೇಳದ ಕುರಿತು ಮಾಹಿತಿ ನೀಡಿದರು. ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಜಯಾನಂದ, ಬಿ.ಸಿ.ರೋಡ್ ಶಾಖೆ ಮೆನೇಜರ್ ರಂಜಿತ್, ಜಕ್ರಿಬೆಟ್ಟು ಶಾಖೆ ಮೆನೇಜರ್ ಉದಯ ಪ್ರಕಾಶ್ ಉಪಸ್ಥಿತರಿದ್ದರು.
ಮಾರುಕಟ್ಟೆ ಹಿರಿಯ ಪ್ರಬಂಧಕ ಸುಧಾಕರ್ ವಂದಿಸಿದರು. ಬಂಟ್ವಾಳ ಮೇಲ್ವಿಚಾರಕಿ ಮಮತಾ ಸ್ವಾಗತಿಸಿದರು. ಮಾರುಕಟ್ಟೆ ಪ್ರಬಂಧಕ ಸಂದೇಶ್ ಕಾರ್ಯಕ್ರಮ ನಿರ್ವಹಿಸಿದರು.