News Karnataka Kannada
Monday, April 29 2024
ಮಂಗಳೂರು

ಬಂಟ್ವಾಳ ಎಸ್.ವಿ.ಎಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

Untitled 1
Photo Credit :

ಬಂಟ್ವಾಳ:  ಪ್ರತಿಷ್ಠಿತ ಎಸ್ ವಿ ಎಸ್ ಕಾಲೇಜು ಈಗ ಅವ್ಯವಸ್ಥೆ ಹಾಗೂ ಗೊಂದಲದ ತಾಣವಾಗಿದ್ದು , ಆಡಳಿತ ಮಂಡಳಿಯ ವಿರುದ್ಧ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ಮಾಡಿದರು .

ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಪ್ರಕಾಶ್ ಶೆಣೈ ವಿರುದ್ಧ ಮಹಿಳಾ ದೌರ್ಜನ್ಯದ ಪ್ರಕರಣ ದಾಖಲಾಗಿದ್ದು , ಇತ್ತಿಚೆಗೆ ಅವರ ಬಂಧನ ಕೂಡ ಆಗಿತ್ತು , ಜಾಮೀನಿನಲ್ಲಿ ಬಿಡುಗಡೆಯಾಗಿರುವ ಸಂಚಾಲಕರು ಕಾಲೇಜಿನ ಅವ್ಯವಸ್ಥೆಯನ್ನು ಪ್ರಶ್ನಿಸಿದ ವಿದ್ಯಾರ್ಥಿಗಳ ಮೇಲೆ ಪ್ರಾಂಶುಪಾಲರನ್ನು ಮುಂದಿಟ್ಟು ವಿದ್ಯಾರ್ಥಿಗಳಿಗೆ ಕಿರುಕಿಳ ಕೊಡುವ ಕೆಲಸ ಮಾಡುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.

ಎಫ್.ಐ.ಆರ್ ದಾಖಲಾಗಿರುವ ಕಾಲೇಜು ಸಂಚಾಲಕರ ಪ್ರಕಾಶ್ ಶೆಣೈ ತಕ್ಷಣ ರಾಜೀನಾಮೆ ನೀಡಬೇಕು ಹಾಗೂ ಎಫ್.ಐ.ಆರ್.ದಾಖಲಾಗಿರುವ ಇಬ್ಬರು ಶಿಕ್ಷಕರನ್ನು ತಕ್ಷಣ ವಜಾ ಮಾಡುವಂತೆ ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು