News Karnataka Kannada
Monday, May 06 2024
ಮಂಗಳೂರು

ಬಂಟ್ವಾಳ: ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಬಾಲಕಿಯ ಮನೆಗೆ ಶರಣ್ ಪಂಪ್ವೆಲ್ ಭೇಟಿ

Sharan
Photo Credit :
ಬಂಟ್ವಾಳ:  ಕನ್ಯಾನದ ಗ್ರಾಮದ ಕಣಿಯೂರು ಎಂಬಲ್ಲಿ ನಡೆದ  ಹತ್ತನೇ ತರಗತಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ  ಬಾಲಕಿಯ ಮನೆಗೆ  ವಿಶ್ವ ಹಿಂದೂ ಪರಿಷತ್ ವಿಭಾಗೀಯ ಕಾರ್ಯದರ್ಶಿ ಶರಣ್ ಪಂಪ್ವೆಲ್ ಭೇಟಿ ನೀಡಿ ಮನೆ ಮಂದಿಗೆ ಸಾಂತ್ವಾನ ಹೇಳಿದ್ದಾರೆ.
ಇದೊಂದು ವ್ಯವಸ್ಥಿತ ಕೊಲೆಯಾಗಿ ಸಮಗ್ರ ತನಿಖೆ ನಡೆಸುವಂತೆ ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ. ಮೂಲತಃ ಸುಳ್ಯ ತಾಲೂಕಿನ ಪಂಜ ನಿವಾಸಿ ಸಂಜೀವ ಅವರ ಪುತ್ರಿ ಆತ್ಮೀಕಾ(14) ಎಂಬಾಕೆ ಕಣಿಯೂರು ಎಂಬಲ್ಲಿರುವ ತನ್ನ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಳು.
ಈಕೆ ತನ್ನ ಕುಟುಂಬದೊಂದಿಗೆ ಕನ್ಯಾನ ಗ್ರಾಮದ ಕಣಿಯೂರು ದಿ. ಸುಲೈಮಾನ್ ಹಾಜಿ ಅವರ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಇಂದು ಮನೆಮಂದಿ ಕೆಲಸಕ್ಕೆ ಹೋದಾಗ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಳು. ಈಕೆಗೆ ಸ್ಥಳೀಯ ನಿವಾಸಿ ಶಾಹುಲ್ ಹಮೀದ್ ಎಂಬಾತ ನಿರಂತರ ಕಿರುಕುಳ ನೀಡಿದ ಆರೋಪದಲ್ಲಿ ಆತನ ವಿರುದ್ಧ ಪ್ರಕರಣ ದಾಖಲಾಗಿತ್ತು.
ಬಾಲಕಿ ಮನೆಗೆ ಭೇಟಿ ನೀಡಿದ ಶರಣ್ ಪಂಪ್ವೆಲ್ ನೇತೃತ್ವದ ನಿಯೋಗ ಬಾಲಕಿಯ ಮನೆಯವರೊಂದಿಗೆ ಮಾತುಕತೆ ನಡೆಸಿದರು. ಬಳಿಕ ಮಾಧ್ಯಮದವರ ಜತೆ ಮಾತನಾಡಿದ ಶರಣ್ ಪಂಪ್ವೆಲ್ ಇದೊಂದು ವ್ಯವಸ್ಥಿತ ಕೊಲೆಯಾಗಿದ್ದು, ಲವ್ ಜಿಹಾದ್ ನಿಂದ ಈ ಹತ್ಯೆ ನಡೆದಿದೆ.
ಬಾಲಕಿಯ ಮೃತದೇಹ ಸಂಶಯಾಸ್ಪದ ರೀತಿಯಲ್ಲಿ ಕಂಡು ಬಂದಿದೆ. ಆದುದರಿಂದ ಇದು ಕೊಲೆ ಪ್ರಕರಣವಾಗಿದ್ದು, ಆರೋಪಿ ಶಾಹುಲ್ ಹಮೀದ್ ಮತ್ತು ಆತನ ಕುಟುಂಬದ ವಿರುದ್ಧ ಕೊಲೆ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿದ್ದಾರೆ.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು