ಬಂಟ್ವಾಳ : ತಾಲೂಕಿನಾದ್ಯಂತ ಬುಧವಾರ ಅಪರಾಹ್ನದಿಂದ ತುಂತುರು ಮಳೆಯಾಗುತ್ತಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ವಾತಾವರಣವನ್ನು ತಂಪುಮಾಡಿದೆ. ಬಿ.ಸಿ.ರೋಡಿನಲ್ಲಿ ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಏಕಾಏಕಿ ಮೋಡ ಆವರಿಸಿ ಧಾರಾಕಾರ ಮಳೆ ಸುರಿದಿದ್ದು, ಸಿಡಿಲಿನ ಆರ್ಭಟವೂ ಹೆಚ್ಚಾಗಿತ್ತು.
ಇದರ ಬೆನ್ನಲ್ಲೇ ತಾಲೂಕಿನಾದ್ಯಂದ ತುಂತುರು ಮಳೆಯಾಗಿದ್ದು ಕೆಲವೆಡೆಗಳಲ್ಲಿ ಸಿಡಿಲಿನ ಆರ್ಭಟ ಜೋರಾಗಿತ್ತು. ಬಂಟ್ವಾಳ ಕಸ್ಬಾ ಗ್ರಾಮದ ಆದಂ ಎಂಬವರ ಮನೆಗೆ ಸಿಡಿಲು ಬಡಿದಿದ್ದು, ಮನೆಯ ವಿದ್ಯುತ್ ಸಂಪರ್ಕಕ್ಕೆ ಹಾನಿಯಾಗಿದೆ.ಘಟನೆ ವೇಳೆ ಮನೆಯಲ್ಲಿ ಯಾರೂ ಇಲ್ಲದ ಹಿನ್ನೆಲೆಯಲ್ಲಿ ಯಾವುದೇ ಅಪಾಯ ಸಂಭವಿಸಿಲ್ಲ.
ಕಂದಾಯಇಲಾಖಾ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.