ಅವರು ಬಿ.ಸಿ.ರೋಡಿನ ಸಂಚಯಗಿರಿಯಲ್ಲಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಹಾಗೂ ತುಳು ಬದುಕು ವಸ್ತು ಸಂಗ್ರಹಾಲಯದಲ್ಲಿ ರಾಣಿ ಅಬ್ಬಕ್ಕ ಪ್ರತಿಮೆ ಅನಾವರಣ ಮಾಡಿ ಮಾತನಾಡಿದರು.
ತುಳು ಭಾಷೆ, ಅಬ್ಬಕ್ಕನ ವಿಚಾರವನ್ನು ಜಗತ್ತಿಗೆ ಪರಿಚಯಿಸುವ ನಿಟ್ಟಿನಲ್ಲಿ ಇಂತಹ ಕೇಂದ್ರ ಸ್ಥಾಪಿಸಿರುವ ತುಕರಾಮ್ ಪೂಜಾರಿಯವರ ಪ್ರಯತ್ನ ಅದ್ಬುತವಾದುದು ಎಂದರು.
ಬೆಂಗಳೂರಿನ ಚಾರ್ಟಡ್ ಹೌಸಿಂಗ್ನ ಏರ್ಯ ಬಾಲಕೃಷ್ಣ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಅತಿಥಿ ಹೊಸದಿಲ್ಲಿ ಭಾರತೀಯ ಜೈನ್ ಮಿಲನ್ನ ಉಪಾಧ್ಯಕ್ಷೆ, ಶ್ರೀ ಕ್ಷೇತ್ರ ಧರ್ಮಸ್ಥಳದ ಅನಿತಾ ಸುರೇಂದ್ರಕುಮಾರ್ ಮಾತನಾಡಿ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ತುಳುನಾಡಿನ ವೀರ ರಾಣಿ ಅಬ್ಬಕ್ಕ ಹೆಸರಿನಲ್ಲಿ ಇಂತಹ ಕೇಂದ್ರ ಸ್ಥಾಪಿಸಿರುವ ಸಾಹಸ ಮೆಚ್ಚುವಂತದ್ದಾಗಿದೆ. ಅಬ್ಬಕ್ಕ ಪ್ರತಿಮೆಯ ಮೂಲಕ ಕೇಂದ್ರಕ್ಕೆ ಇನ್ನೂ ಹೆಚ್ಚಿನ ಗೌರವ ಬಂದಿದೆ ಎಂದರು.
ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ| ತುಕಾರಾಮ್ ಪೂಜಾರಿ ಅವರು ಸ್ವಾಗತದೊಂದಿಗೆ ಪ್ರಸ್ತಾವಿಕವಾಗಿ ಮಾತನಾಡಿ, ಈ ಕೇಂದ್ರವು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಂಪನ್ಮೂಲ ಕೇಂದ್ರವಾಗಿ ಬೆಳೆಯುತ್ತಿದ್ದು, ಸರಳ ಸಾತ್ವಿಕ ಸ್ವಭಾವದ ವೀರರಾಣಿ ಅಬ್ಬಕ್ಕಳ ಹೆಸರು ಮತ್ತು ಸಾಧನೆಯನ್ನು ಜಗತ್ತಿಗೆ ಸಾರುವ ಕೆಲಸ ನಡೆಯುತ್ತಿದೆ ಎಂದರು.
ಕೇಂದ್ರದ ಕಾರ್ಯದರ್ಶಿ ಡಾ| ಆಶಾಲತಾ ಎಸ್.ಸುವರ್ಣ ವಂದಿಸಿದರು. ಡಾ| ಆರ್.ನರಸಿಂಹಮೂರ್ತಿ ಕಾರ್ಯಕ್ರಮ ನಿರ್ವಹಿಸಿದರು.